Home namma chikmagalur chikamagalur ಲಾಟರಿ ಬಹುಮಾನ ಬಂದಿದೆ ಎಂದು ನಂಬಿಸಿ ₹2.34 ಲಕ್ಷ ವಂಚನೆ
chikamagalurHomeLatest Newsnamma chikmagalur

ಲಾಟರಿ ಬಹುಮಾನ ಬಂದಿದೆ ಎಂದು ನಂಬಿಸಿ ₹2.34 ಲಕ್ಷ ವಂಚನೆ

Share
Share

ಚಿಕ್ಕಮಗಳೂರು: ಕೇರಳ ಲಾಟರಿಯಲ್ಲಿ ₹8 ಲಕ್ಷ ಬಹುಮಾನ ಬಂದಿದೆ ಎಂದು ನಂಬಿಸಿ ಮಹಿಳೆಯೊಬ್ಬರಿಂದ ₹2.34 ಲಕ್ಷಕ್ಕೂ ಅಧಿಕ ಹಣವನ್ನು ವಿವಿಧ ಶುಲ್ಕಗಳ ಹೆಸರಿನಲ್ಲಿ ಪಡೆದು ಸೈಬರ್ ವಂಚನೆ ಮಾಡಿರುವ ಘಟನೆ ನಡೆದಿದೆ. ನಗರದ ಹರಿಯಪ್ಪ ಸ್ಟ್ರೀಟ್, ಎಂಜಿ ರಸ್ತೆಯ ನಿವಾಸಿ ಸೀಮಾ ಬಾನು ವಂಚನೆಗೊಳಗಾದವರು. ಈ ಸಂಬಂಧ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಜುಲೈ 20ರಂದು ಬೆಳಿಗ್ಗೆ ಅಪರಿಚಿತ ವ್ಯಕ್ತಿಯೊಬ್ಬರು ಸೀಮಾ ಬಾನು ಅವರ ಮೊಬೈಲ್‌ಗೆ ಕರೆ ಮಾಡಿ, ತಾನು ಕೇರಳ ಲಾಟರಿ ಕಡೆಯಿಂದ ಮಾತನಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದಾನೆ. ಲಾಟರಿ ಖರೀದಿಸುವಂತೆ ತಿಳಿಸಿ, ವಾಟ್ಸ್‌ಆ್ಯಪ್ ಮೂಲಕ ಸುಮಾರು 30 ಲಾಟರಿ ಸಂಖ್ಯೆಗಳ ಮಾಹಿತಿಯನ್ನು ಕಳುಹಿಸಿದ್ದಾನೆ. ಇದರಲ್ಲಿ KL336699 ಸಂಖ್ಯೆಯನ್ನು ಆಯ್ಕೆ ಮಾಡಿಕೊಂಡ ಸೀಮಾ ಬಾನು, ಟಿಕೆಟ್ ಶುಲ್ಕವೆಂದು ₹99 ಪಾವತಿಸಿದ್ದಾರೆ.

ನಂತರ ಅದೇ ದಿನ ಮಧ್ಯಾಹ್ನ ಕರೆ ಮಾಡಿದ ಆರೋಪಿಗಳು, ಲಾಟರಿ ಡ್ರಾ ನಡೆದಿದ್ದು ₹8 ಲಕ್ಷ ಬಹುಮಾನ ಬಂದಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಲಿಂಕ್ ಕಳುಹಿಸಿ ಗೂಗಲ್‌ನಲ್ಲಿ ಪರಿಶೀಲಿಸುವಂತೆ ಸೂಚಿಸಿದ್ದಾರೆ. ಲಿಂಕ್‌ನಲ್ಲಿ ₹8 ಲಕ್ಷ ಬಹುಮಾನ ಬಂದಿರುವುದಾಗಿ ತೋರಿಸಿದ್ದರಿಂದ ಸೀಮಾ ಬಾನು ಅದನ್ನು ನಂಬಿದ್ದಾರೆ ಎನ್ನಲಾಗಿದೆ.

ಬಹುಮಾನ ಹಣ ಪಡೆಯಲು ಪ್ರೊಸೆಸಿಂಗ್ ಚಾರ್ಜ್, ಜಿಎಸ್‌ಟಿ, ಟಿಡಿಎಸ್, ಎನ್‌ಒಸಿ ಹಾಗೂ ಆರ್‌ಬಿಐ ಶುಲ್ಕಗಳ ಹೆಸರಿನಲ್ಲಿ ಹಂತ ಹಂತವಾಗಿ ಹಣ ಪಾವತಿಸುವಂತೆ ಆರೋಪಿಗಳು ಸೂಚಿಸಿದ್ದಾರೆ. ಇದನ್ನು ನಂಬಿದ ಸೀಮಾ ಬಾನು, ಫೋನ್‌ಪೇ ಮೂಲಕ ಆರೋಪಿಗಳು ಕಳುಹಿಸಿದ ಸ್ಕ್ಯಾನರ್‌ಗಳಿಗೆ ವಿವಿಧ ಹಂತಗಳಲ್ಲಿ ಹಣ ವರ್ಗಾವಣೆ ಮಾಡಿದ್ದಾರೆ.

ಜುಲೈ 21ರಿಂದ 29ರವರೆಗೆ ವಿವಿಧ ದಿನಗಳಲ್ಲಿ ₹8 ಸಾವಿರ, ₹31,500, ₹49,800, ₹35,600, ₹35 ಸಾವಿರ ಸೇರಿದಂತೆ ಹಲವು ಮೊತ್ತಗಳನ್ನು ಪಾವತಿಸಿದ್ದಾರೆ. ಅಲ್ಲದೆ, ಇತರ ಸಂಖ್ಯೆಗಳಿಗೂ ₹17,800 ಹಾಗೂ ₹32 ಸಾವಿರ ವರ್ಗಾವಣೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಒಟ್ಟು ₹2,34,200 ಹಣವನ್ನು ವಂಚಕರು ಪಡೆದುಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಆದರೆ ಯಾವುದೇ ಬಹುಮಾನ ಹಣವನ್ನು ಅವರ ಖಾತೆಗೆ ಜಮಾ ಮಾಡದ ಆರೋಪಿಗಳು, ಮತ್ತಷ್ಟು ₹1 ಲಕ್ಷ ಪಾವತಿಸುವಂತೆ ಒತ್ತಾಯಿಸಿದ್ದಾರೆ. ಇದರಿಂದ ಅನುಮಾನಗೊಂಡ ಸೀಮಾ ಬಾನು ಕುಟುಂಬದವರಲ್ಲಿ ವಿಚಾರಿಸಿದಾಗ ತಾವು ವಂಚನೆಗೊಳಗಾಗಿರುವುದು ಗೊತ್ತಾಗಿದೆ.

ತಕ್ಷಣವೇ ಸೈಬರ್ ಸಹಾಯವಾಣಿ 1930ಕ್ಕೆ ಕರೆ ಮಾಡಿ, ಸ್ವೀಕೃತಿ ಸಂಖ್ಯೆ 31608260135664ರಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಕ್ರೈಂ ಪೊಲೀಸರು ವಂಚಕರ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

₹2.34 lakh fraud by claiming to have won a lottery prize

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...