Home namma chikmagalur chikamagalur ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ
chikamagalurHomeLatest Newsnamma chikmagalur

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

Share
Share

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಎಟಿಎಂ ಕಾರ್ಡ್ ಬದಲಿಸಿ, ಬಳಿಕ ಅದನ್ನು ದುರುಪಯೋಗಪಡಿಸಿಕೊಂಡು ₹3.09 ಲಕ್ಷ ವಂಚಿಸಿರುವ ಪ್ರಕರಣ ವರದಿಯಾಗಿದೆ.

ಚಿಕ್ಕಪಟ್ಟಣಗೆರೆ ಗ್ರಾಮದ ಸುನಂದಾ ಅವರು, ತಮ್ಮ ಪತಿಯ ಹೆಸರಿನಲ್ಲಿದ್ದ ಭೂಮಿಯನ್ನು ಮಾರಾಟ ಮಾಡಿ ಬಂದ ಹಣದಲ್ಲಿ ₹5 ಲಕ್ಷವನ್ನು ಕಡೂರು ಕೆನರಾ ಬ್ಯಾಂಕ್ ಖಾತೆಗೆ ಜಮಾಮಾಡಿದ್ದರು.
ಜೂನ್ ತಿಂಗಳಲ್ಲಿ ಪುತ್ರ ರಾಕೇಶ್ ಅವರು, ಕೆನರಾ ಬ್ಯಾಂಕ್ ಎಟಿಎಂನಲ್ಲಿ ಮೂರು ಬಾರಿ ಹಣ ಹಿಂಪಡೆಯಲು ಯತ್ನಿಸಿದರೂ ಹಣ ಬರಲಿಲ್ಲ.

ಈ ವೇಳೆ ಮಾಸ್ಕ್ ಧರಿಸಿದ್ದ ವ್ಯಕ್ತಿಯೊಬ್ಬ ನೆರವಾಗುವುದಾಗಿ ಹೇಳಿ ಎಟಿಎಂ ಕಾರ್ಡ್ ಪಡೆದು ಖಾತೆಯಲ್ಲಿನ ಬಾಕಿ ಮೊತ್ತ ಪರಿಶೀಲಿಸಿದ್ದಾನೆ. ಬಳಿಕ ‘ಹಣ ಬರುತ್ತಿಲ್ಲ’ ಎಂದು ಹೇಳಿ ಕಾರ್ಡ್ ಹಿಂತಿರುಗಿಸಿ ಸ್ಥಳದಿಂದ ತೆರಳಿದ್ದಾನೆ.

ಅದೇ ತಿಂಗಳಲ್ಲಿ ಸುನಂದಾ ಅವರು ಬ್ಯಾಂಕ್‌ನಿಂದ ₹2 ಲಕ್ಷ ನಗದು ಪಡೆದು ಸಂಬಂಧಿಕರೊಬ್ಬರಿಗೆ ಸಾಲ ತೀರಿಸಿದ್ದರು. ಬಳಿಕ, ಈ ತಿಂಗಳ 1ರಂದು ಮತ್ತೆ ಹಣ ಹಿಂಪಡೆಯಲು ಬ್ಯಾಂಕ್‌ಗೆ ತೆರಳಿದಾಗ ಖಾತೆಯಲ್ಲಿ ಹಣ ಇಲ್ಲ ಎಂದು ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ.

ಎಟಿಎಂ ಕಾರ್ಡ್ ಪರಿಶೀಲಿಸಿ ದಾಗ ಅದು ಸುನಂದಾ ಅವರದ್ದಲ್ಲ ಎಂಬುದು ಗೊತ್ತಾಗಿದೆ. ಪಾಸ್‌ಬುಕ್ ಪರಿಶೀಲಿಸಿದಾಗ ಖಾತೆಯಿಂದ ₹3.09 ಲಕ್ಷ ಹಣ ಡ್ರಾ ಆಗಿರುವುದು ಬೆಳಕಿಗೆ ಬಂದಿದೆ.

ರಾಕೇಶ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸಿದ ವೇಳೆ ನೆರವಾಗುವ ನೆಪದಲ್ಲಿ ಬಂದಿದ್ದ ಅನಾಮಧೇಯ ವ್ಯಕ್ತಿ ಪಿನ್ ಸಂಖ್ಯೆ ಗಮನಿಸಿ, ಕಾರ್ಡ್ ಬದಲಿಸಿ ವಾಪಸ್ ನೀಡಿದ್ದಾನೆ. ಬಳಿಕ, ಮೂಲ ಕಾರ್ಡ್ ಬಳಸಿ ತಲಾ ₹10 ಸಾವಿರದಂತೆ 30 ಬಾರಿ ಹಾಗೂ ಒಮ್ಮೆ ₹9 ಸಾವಿರ ಸೇರಿ ಒಟ್ಟು ₹3.09 ಲಕ್ಷ ಹಣ ಹಿಂಪಡೆದು ವಂಚನೆ ಎಸಗಿದ್ದಾನೆ ಎಂದು ರಾಕೇಶ್ ನೀಡಿದ ದೂರಿನ ಮೇರೆಗೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

₹3.09 lakh fraud by changing ATM card

Share

Leave a comment

Leave a Reply

Your email address will not be published. Required fields are marked *

Don't Miss

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ಆದರೆ, ನಮ್ಮ ರಾಜ್ಯ ಸರ್ಕಾರ ಈಗಾಗಲೇ ತನ್ನ ಪಾಲಿನ ೧೨,೦೦೦...

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಜೆಪಿ ರಾಜಕೀಯ

ಕಡೂರು: ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರಾಮಲಿಂಗಾರೆಡ್ಡಿ ಅವರು ರಾಜಕೀಯ ವಲಯದ ಪ್ರಮುಖ ವಿದ್ಯಮಾನಗಳು, ರಾಜ್ಯದ ಜಲವಿವಾದ ಹಾಗೂ ಸಚಿವ ಸಂಪುಟ ವಿಸ್ತರಣೆಯ ಕುರಿತಾಗಿ ಮಾಧ್ಯಮಗಳ ಎದುರು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ....

Related Articles

ವಾಹನ ಡಿಕ್ಕಿಗೆ ಬೈಕ್ ಸವಾರ ಸಾವು

ಬೀರೂರು: ಕಡೂರು ತಾಲ್ಲೂಕಿನ ಹೇಮಗಿರಿ ಗೇಟ್ ಬಳಿಯ ಜಮೀನಿನಲ್ಲಿ ಕೆಲಸ ಮುಗಿಸಿ, ಅಜ್ಜಂಪುರ ಕಡೆಗೆ ಬೀರೂರು...

ಕಾಫಿ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಮನವಿ

ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ...

ದನ ಅಕ್ರಮ ಸಾಗಾಟ: ಪ್ರಕರಣ ದಾಖಲು

ಅಲ್ಲೂರು: ಇಲ್ಲಿಗೆ ಸಮೀಪದ ಹಾಂದಿಯ ಅಂಬೇಡ್ಕರ್ ವೃತ್ತದ ಬಳಿಯ ರಜಾ ಕ್ಯಾಂಟೀನ್ ಎದುರು 5 ವರ್ಷ...

ಅಕ್ರಮ ನುಸುಳುಕೋರರ ಮತಪಟ್ಟಿಗೆ ದಾಖಲಿಸದಂತೆ ಕ್ರಮವಹಿಸಿ

ಚಿಕ್ಕಮಗಳೂರು: ಎಸ್‌ಐಆರ್ ಸಂಬಂಧ ಬಿಎಲ್‌ಒ೨ಗಳು ಪಕ್ಷದ ಮತದಾರರನ್ನು ಪಟ್ಟಿ ಯಿಂದ ಕೈಜಾರದಂತೆ ಗಮನಹರಿಸುವ ಜೊತೆಗೆ ಅಕ್ರಮ...