Home namma chikmagalur chikamagalur ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ₹35 ಲಕ್ಷ ವಂಚನೆ
chikamagalurHomeLatest Newsnamma chikmagalur

ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ₹35 ಲಕ್ಷ ವಂಚನೆ

Share
Share

ಚಿಕ್ಕಮಗಳೂರು: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಕೆಲವೇ ದಿನಗಳಲ್ಲಿ ದುಪ್ಪಟ್ಟು ಹಣ ನೀಡುವುದಾಗಿ ನಂಬಿಸಿ ₹35 ಲಕ್ಷ ಪಡೆದು ವಾಪಸ್ ನೀಡದೆ ವಂಚಿಸಿರುವ ಆರೋಪದಡಿ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಸುಣ್ಣದಹಳ್ಳಿ ಗ್ರಾಮದ ಸಿದ್ದಪ್ಪ (65) ಅವರು ನೀಡಿದ ದೂರಿನ ಆಧಾರದ ಮೇಲೆ ಶಿವಮೊಗ್ಗದ ಚಾಲುಕ್ಯನಗರದ ವೆಂಕಟೇಶ್ ಬಿ., ಹನುಮಂತಪ್ಪ ಹಾಗೂ ದೇವರಾಜ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ದೂರಿನ ಪ್ರಕಾರ, ಸಿದ್ದಪ್ಪ ಅವರ ಪುತ್ರ ಕಾಂತರಾಜ್ ಅವರು 2024ರಲ್ಲಿ ತಮ್ಮ ಮನೆಯ ಮೇಲೆ ₹18 ಲಕ್ಷ ಹಾಗೂ ಗ್ರಾಮದಲ್ಲಿ ಕೈಸಾಲವಾಗಿ ₹15 ಲಕ್ಷ ಸೇರಿದಂತೆ ಒಟ್ಟು ₹33 ಲಕ್ಷ ಸಾಲ ಮಾಡಿಕೊಂಡಿದ್ದರು. ಈ ಕುರಿತು ತಂದೆ ಪ್ರಶ್ನಿಸಿದಾಗ, ವೆಂಕಟೇಶ್ ಬಿ. ಎಂಬಾತ ತನ್ನ ಒಡೆತನದ ಶಾಲೋಮ್ ಟ್ರೇಡಿಂಗ್ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಕೆಲವೇ ದಿನಗಳಲ್ಲಿ ದುಪ್ಪಟ್ಟು ಹಣ ನೀಡುವುದಾಗಿ ಭರವಸೆ ನೀಡಿದ್ದರಿಂದ ಹಣ ಹೂಡಿಕೆ ಮಾಡುತ್ತಿರುವುದಾಗಿ ಕಾಂತರಾಜ್ ತಿಳಿಸಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಂತರ ಕಾಂತರಾಜ್ ಅವರು 2025ರ ಜುಲೈ 18ರಂದು ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಜುಲೈ 27ರಂದು ವೆಂಕಟೇಶ್ ಸಿದ್ದಪ್ಪ ಅವರ ಮನೆಗೆ ಬಂದು, ಕಾಂತರಾಜ್ ಹಾಗೂ ಇತರ ಸಂಬಂಧಿಕರು ತಮ್ಮ ಕಂಪನಿಯಲ್ಲಿ ಒಟ್ಟು ₹35 ಲಕ್ಷ ಹೂಡಿಕೆ ಮಾಡಿರುವುದಾಗಿ ತಿಳಿಸಿದ್ದಾನೆ. ಕಾಂತರಾಜ್ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಅವರ ತಂದೆಗೆ ಎರಡು ತಿಂಗಳೊಳಗೆ ಹಂತ ಹಂತವಾಗಿ ಹಣವನ್ನು ಹಿಂದಿರುಗಿಸುವುದಾಗಿ ಛಾಪಾ ಕಾಗದದಲ್ಲಿ ಬರೆದುಕೊಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ವೇಳೆ ಗ್ರಾಮಸ್ಥರಾದ ಕಮಲಮ್ಮ, ಆನಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು ಎನ್ನಲಾಗಿದೆ. ಬಳಿಕ ಸೆ.4ರಂದು ಚಂದನ್ ಎಂಬವರ ಖಾತೆಯಿಂದ ಸಿದ್ದಪ್ಪ ಅವರ ತರೀಕೆರೆ ಯೂನಿಯನ್ ಬ್ಯಾಂಕ್ ಖಾತೆಗೆ ₹2 ಲಕ್ಷ ಜಮೆಯಾಗಿತ್ತು. ಆದರೆ ಉಳಿದ ಹಣವನ್ನು ನೀಡದೆ ವಿಳಂಬ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಹಣಕ್ಕಾಗಿ ಸಂಪರ್ಕಿಸಿದಾಗ, ತಮ್ಮ ಕಂಪನಿಯವರಾದ ಹನುಮಂತಪ್ಪ ಮತ್ತು ದೇವರಾಜ ಅವರು ಬಂದು ಉಳಿದ ಹಣವನ್ನು ನೀಡುತ್ತಾರೆ ಎಂದು ವೆಂಕಟೇಶ್ ಹೇಳಿದ್ದಾನೆ. ಬಳಿಕ ಹನುಮಂತಪ್ಪ ಮತ್ತು ದೇವರಾಜ ಸಿದ್ದಪ್ಪ ಅವರ ಮನೆಗೆ ಬಂದು ಕೆಲ ದಿನ ಕಾಯುವಂತೆ ತಿಳಿಸಿದ್ದರು. ಆದರೆ ಇದುವರೆಗೆ ಹಣ ಹಿಂದಿರುಗಿಸದೆ, ಆರೋಪಿಗಳು ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ಸಿದ್ದಪ್ಪ ದೂರಿನಲ್ಲಿ ತಿಳಿಸಿದ್ದಾರೆ.

ಆನ್‌ಲೈನ್ ಟ್ರೇಡಿಂಗ್ ಮೂಲಕ ಹಣ ದುಪ್ಪಟ್ಟು ಮಾಡಿಕೊಡುವುದಾಗಿ ಆಸೆ ತೋರಿಸಿ ತಮ್ಮ ಪುತ್ರನಿಂದ ಹಣ ಪಡೆದು ವಾಪಸ್ ನೀಡದೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ವೆಂಕಟೇಶ್, ಹನುಮಂತಪ್ಪ ಹಾಗೂ ದೇವರಾಜ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಿದ್ದಪ್ಪ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಲಿಂಗದಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

₹35 lakh fraud in the name of online trading

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...