ಚಿಕ್ಕಮಗಳೂರು: ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ೧೦ ಚಕ್ರದ ಲಾರಿಯೊಂದು ರಸ್ತೆ ಪಕ್ಕದ ತಡೆಬೇಲಿಯನ್ನು ಮುರಿದು, ಮರಕ್ಕೆ ಡಿಕ್ಕಿ ಹೊಡೆದು ಸುಮಾರು ೧೦೦ ಅಡಿ ಆಳದ ಪ್ರಪಾತಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ಕಣಿವೆ ಕ್ರಾಸ್ ಬಳಿ ನಡೆದಿದೆ.
ಕಡೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಲೋಡ್ ಸಮೇತ ಚಿಕ್ಕಮಗಳೂರಿನಿಂದ ಕಡೂರು ಕಡೆಗೆ ತೆರಳುತ್ತಿದ್ದ ಲಾರಿ ಅಪಘಾತಕ್ಕೀಡಾಗಿದೆ. ಚಾಲಕನ ಪ್ರಕಾರ, ಮಾರ್ಗಮಧ್ಯೆ ಬ್ರೇಕ್ ಫೇಲ್ ಆಗುತ್ತಿದ್ದಂತೆ ಲಾರಿ ನಿಯಂತ್ರಣ ಕಳೆದುಕೊಂಡಿದೆ.
ವೇಗವಾಗಿ ಸಾಗುತ್ತಿದ್ದ ಲಾರಿ ರಸ್ತೆ ಪಕ್ಕದ ತಡೆಬೇಲಿಗೆ ಡಿಕ್ಕಿ ಹೊಡೆದು ಅದನ್ನು ಮುರಿದ ಬಳಿಕ ಮರಕ್ಕೆ ಅಪ್ಪಳಿಸಿ ಪ್ರಪಾತಕ್ಕೆ ಹಾರಿದೆ.ಲಾರಿ ಸುಮಾರು ೧೦೦ ಅಡಿ ಆಳಕ್ಕೆ ಉರುಳಿದ ಪರಿಣಾಮ ವಾಹನ ಸಂಪೂರ್ಣ ಜಖಂಗೊಂಡಿದೆ.
ಆದರೆ ಅದೃಷ್ಟವಶಾತ್ ಲಾರಿಯಲ್ಲಿದ್ದ ಚಾಲಕ ಹಾಗೂ ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಘಟನೆಯ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣದ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
10-wheeler truck falls into 100-foot ravine
Leave a comment