Home Political News ದತ್ತಪೀಠ ಅಭಿವೃದ್ಧಿಗೆ ನೂರು ಕೋಟಿ ರೂಗಳ ಪ್ರಸ್ತಾವನೆ : ಕೋಟಾ ಶ್ರೀನಿವಾಸ ಪೂಜಾರಿ
Political News

ದತ್ತಪೀಠ ಅಭಿವೃದ್ಧಿಗೆ ನೂರು ಕೋಟಿ ರೂಗಳ ಪ್ರಸ್ತಾವನೆ : ಕೋಟಾ ಶ್ರೀನಿವಾಸ ಪೂಜಾರಿ

Share
Share

ಚಿಕ್ಕಮಗಳೂರು : ನೂರು ಕೋಟಿ ರೂ. ವೆಚ್ಚದಲ್ಲಿ ದತ್ತಪೀಠ ಅಭಿವೃದ್ಧಿ ಪಡಿಸಲು ಕೇಂದ್ರ ಪ್ರವಾಸೋದ್ಯಮ ಇಲಾಖೆ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರೊಂದಿಗೆ ಚರ್ಚಿಸಿದ್ದು, ಪ್ರಾಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದು ಒಂದು ವಾರದಲ್ಲಿ ಜಿಲ್ಲಾಡಳಿತ ಪ್ರಾಸ್ತಾವನೆ ಸಲ್ಲಿಸಲಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿ, ಜಿಲ್ಲೆಯ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ಪೂ ರ್ಣಗೊಳಿಸುವಂತೆ ಸಂಬಂಧಪಟ್ಟ ರೊಂದಿಗೆ ಚರ್ಚಿಸಲಾಗಿದೆ. ಜಿಲ್ಲೆಯಲ್ಲಿ ರೈಲ್ವೇ ಸಂಪರ್ಕ ವಿಸ್ತರಣೆ ಸಂಬಂಧ ರಾಜ್ಯ ರೈಲ್ವೇ ಸಚಿವರಾದ ವಿ. ಸೋಮಣ್ಣ ಅವರೊಂದಿಗೂ ಚರ್ಚಿ ನಡೆಸಲಾಗಿದೆ. ಚಿಕ್ಕಮಗಳೂರಿನಿಂದ ಬೆಂಗಳೂರು, ತಿರುಪತಿ ನೂತನ ರೈಲು ಮಂಜೂರು ಮಾಡುವಂತೆ ಕೋರಲಾಗಿದೆ ಎಂದರು. ಸರ್ಫೆಸಿ ಕಾಯ್ದೆಯಡಿಯಲ್ಲಿ ಕಾಫಿಬೆಳೆಗಾರರ ಸುಸ್ತಿ ಸಾಲಗಾರರ ಬೆಳೆ ಮತ್ತು ಜಮೀನು ಆನ್‌ಲೈನ್ ಮೂಲಕ ಹರಾಜು ಹಾಕಲಾ ಗುತ್ತಿತ್ತು. ಪಾರ್ಲಿಮೆಂಟ್ ಅಧಿವೇಶನದಲ್ಲಿ ಈ ಸಂಬAಧ ಪ್ರಶ್ನಿಸಿದ್ದು, ಸರ್ಫೆಸಿ ಕಾಯ್ದೆ ಕಾಫಿ ಬೆಳೆಗಾರರಿಗೆ ಅನ್ವಯವಾಗುವುದಿಲ್ಲ ವೆಂದು ಸಂಬಂಧಪಟ್ಟ ಇಲಾಖೆ ಮಂತ್ರಿಗಳು ತಿಳಿಸಿದ್ದಾರೆ. ಇದರಿಂದ ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಯಲ್ಲಿ ಕಾಫಿ ಬೆಳೆಯುವ ಬೆಳೆಗಾರರಿಗೆ ಶಕ್ತಿ ಬಂದಂತಾಗಿದೆ ಎಂದು ಹೇಳಿದರು. 2500 ಕೋಟಿ ರೂ. ಕಾಫಿ ಬೆಳೆಗಾರರು ವಿವಿಧ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿದ್ದಾರೆ. ಅದರಲ್ಲಿ ಕೆನರಾ ಬ್ಯಾಂಕ್‌ ವೊಂದರಲ್ಲಿಯೇ 1600 ಕೋಟಿ ರೂ. ಸಾಲ ಪಡೆದುಕೊಂಡಿದ್ದು, ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ 817 ಬೆಳೆಗಾರರು ಒನ್ ಟೈಮ್ ಸೆಟ್ಲ ಮೆಂಟ್‌ಗೆ ಅರ್ಹರಿದ್ದು, 142 ಜನ ಬೆಳೆಗಾರರು ಒನ್ ಟೈನ್ ಸೆಟ್ಲಮೆಂಟ್ ಮಾಡಿಕೊಂಡಿದ್ದಾರೆ ಎಂದರು.

ಉಪಗ್ರಹದ ಮೂಲಕ ಬಿಎಸ್‌ಎನ್‌ಎಲ್ ಸಂಪರ್ಕ ನೀಡುವಂತೆ ಸಂಬಂಧಪಟ್ಟ ಇಲಾಖೆ ಸಚಿವರಿಗೆ ಪ್ರಸ್ತಾವನೆಯನ್ನು ಮುಂದಿಡಲಾಗಿದೆ. ಜಿಲ್ಲೆಯಲ್ಲಿ ಮೂರು ಎಫ್.ಎಂ. ಸ್ಟೇಷನ್ ಮಂಜೂರಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಸಂಬಂಧ ತಾಲೂಕು ಮಟ್ಟದಲ್ಲಿ ಶಾಸಕರನ್ನು ಒಳಗೊಂಡ ಸಭೆಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದರು

Share

Leave a comment

Leave a Reply

Your email address will not be published. Required fields are marked *

Don't Miss

ಹಿರಿಯ ನಾಗರಿಕರಿಗೆ 3.12 ಲಕ್ಷ ರೂ ವಂಚನೆ

ಚಿಕ್ಕಮಗಳೂರು: ಸೈಬರ್ ಕ್ರಿಮಿನಲ್‌ಗಳ ಜಾಲಕ್ಕೆ ಸಿಲುಕಿ ಹಿರಿಯ ನಾಗರಿಕರೊಬ್ಬರು ಬರೋಬ್ಬರಿ 3.12 ಲಕ್ಷ ಕಳೆದುಕೊಂಡಿದ್ದಾರೆ. ನಗರದಲ್ಲಿ ವಾಸವಾಗಿರುವ 62 ವರ್ಷದ ವೆಂಕಟೇಶ್ ಇತ್ತೀಚೆಗೆ ಅವರ ಮೊಬೈಲ್‌ಗೆ ಬಂದಿದ್ದ ಒಂದು ಅಪರಿಚಿತ ಎಪಿಕೆ...

ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಶಿಫಾರಸ್ ಪತ್ರ

ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ಭಜರಂಗದಳದ ಮುಖಂಡ ಶ್ಯಾಮ್ ವಿ ಗೌಡ, ಮುಸ್ಲಿಂ ಸಮುದಾಯದ 10 ಮಂದಿ ಸೇರಿ ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಜಿಲ್ಲಾ...

Related Articles

ಸಿ.ಟಿ.ರವಿ ಸೋಲಿನ ಹತಾಶೆಯಿಂದ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ

ಚಿಕ್ಕಮಗಳೂರು: ಸಿ.ಟಿ.ರವಿ ಅವರು ಸೋಲಿನ ಹತಾಶೆಯಿಂದ ಎಚ್.ಡಿ.ತಮ್ಮಯ್ಯ ವಿರುದ್ಧ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಕಾಂಗ್ರೆಸ್‌...

20 ವರ್ಷ ಹೊರಗಿನವರೆ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿದ್ದಾರೆ

ಮೂಡಿಗೆರೆ:‘ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿರೋಧ ಪಕ್ಷಗಳು ಹತಾಶೆಯಿಂದ ಬಾಯಿ ಚಪಲಕ್ಕಾಗಿ ಮಾತನಾಡುತ್ತಿವೆ’ ಎಂದು...

ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೋ ! ಭ್ರಾಂತಿಯೋ ?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿ ಎರಡೂವರೆ ವರ್ಷ ಪೂರೈಸುತ್ತಿದೆ.ಸರ್ಕಾರ ರಚನೆಯಾದಾಗಿನಿಂದ ಇಲ್ಲಿಯವರೆಗೆ “ಮುಖ್ಯಮಂತ್ರಿ” ಬದಲಾಗುತ್ತಾರೆ...

ಶೃಂಗೇರಿ ಲಡಾಯಿ: ಶಾಸಕ ಟಿ.ಡಿ.ರಾಜೇಗೌಡ V/S ಜೀವರಾಜ್

ಶೃಂಗೇರಿ: ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮತ್ತು ಬಿಜೆಪಿ ಮಾಜಿ ಸಚಿವ ಶಾಸಕ ಜೀವರಾಜ್...