Home Political News ದತ್ತಪೀಠ ಅಭಿವೃದ್ಧಿಗೆ ನೂರು ಕೋಟಿ ರೂಗಳ ಪ್ರಸ್ತಾವನೆ : ಕೋಟಾ ಶ್ರೀನಿವಾಸ ಪೂಜಾರಿ
Political News

ದತ್ತಪೀಠ ಅಭಿವೃದ್ಧಿಗೆ ನೂರು ಕೋಟಿ ರೂಗಳ ಪ್ರಸ್ತಾವನೆ : ಕೋಟಾ ಶ್ರೀನಿವಾಸ ಪೂಜಾರಿ

Share
Share

ಚಿಕ್ಕಮಗಳೂರು : ನೂರು ಕೋಟಿ ರೂ. ವೆಚ್ಚದಲ್ಲಿ ದತ್ತಪೀಠ ಅಭಿವೃದ್ಧಿ ಪಡಿಸಲು ಕೇಂದ್ರ ಪ್ರವಾಸೋದ್ಯಮ ಇಲಾಖೆ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರೊಂದಿಗೆ ಚರ್ಚಿಸಿದ್ದು, ಪ್ರಾಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದು ಒಂದು ವಾರದಲ್ಲಿ ಜಿಲ್ಲಾಡಳಿತ ಪ್ರಾಸ್ತಾವನೆ ಸಲ್ಲಿಸಲಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿ, ಜಿಲ್ಲೆಯ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ಪೂ ರ್ಣಗೊಳಿಸುವಂತೆ ಸಂಬಂಧಪಟ್ಟ ರೊಂದಿಗೆ ಚರ್ಚಿಸಲಾಗಿದೆ. ಜಿಲ್ಲೆಯಲ್ಲಿ ರೈಲ್ವೇ ಸಂಪರ್ಕ ವಿಸ್ತರಣೆ ಸಂಬಂಧ ರಾಜ್ಯ ರೈಲ್ವೇ ಸಚಿವರಾದ ವಿ. ಸೋಮಣ್ಣ ಅವರೊಂದಿಗೂ ಚರ್ಚಿ ನಡೆಸಲಾಗಿದೆ. ಚಿಕ್ಕಮಗಳೂರಿನಿಂದ ಬೆಂಗಳೂರು, ತಿರುಪತಿ ನೂತನ ರೈಲು ಮಂಜೂರು ಮಾಡುವಂತೆ ಕೋರಲಾಗಿದೆ ಎಂದರು. ಸರ್ಫೆಸಿ ಕಾಯ್ದೆಯಡಿಯಲ್ಲಿ ಕಾಫಿಬೆಳೆಗಾರರ ಸುಸ್ತಿ ಸಾಲಗಾರರ ಬೆಳೆ ಮತ್ತು ಜಮೀನು ಆನ್‌ಲೈನ್ ಮೂಲಕ ಹರಾಜು ಹಾಕಲಾ ಗುತ್ತಿತ್ತು. ಪಾರ್ಲಿಮೆಂಟ್ ಅಧಿವೇಶನದಲ್ಲಿ ಈ ಸಂಬAಧ ಪ್ರಶ್ನಿಸಿದ್ದು, ಸರ್ಫೆಸಿ ಕಾಯ್ದೆ ಕಾಫಿ ಬೆಳೆಗಾರರಿಗೆ ಅನ್ವಯವಾಗುವುದಿಲ್ಲ ವೆಂದು ಸಂಬಂಧಪಟ್ಟ ಇಲಾಖೆ ಮಂತ್ರಿಗಳು ತಿಳಿಸಿದ್ದಾರೆ. ಇದರಿಂದ ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಯಲ್ಲಿ ಕಾಫಿ ಬೆಳೆಯುವ ಬೆಳೆಗಾರರಿಗೆ ಶಕ್ತಿ ಬಂದಂತಾಗಿದೆ ಎಂದು ಹೇಳಿದರು. 2500 ಕೋಟಿ ರೂ. ಕಾಫಿ ಬೆಳೆಗಾರರು ವಿವಿಧ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿದ್ದಾರೆ. ಅದರಲ್ಲಿ ಕೆನರಾ ಬ್ಯಾಂಕ್‌ ವೊಂದರಲ್ಲಿಯೇ 1600 ಕೋಟಿ ರೂ. ಸಾಲ ಪಡೆದುಕೊಂಡಿದ್ದು, ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ 817 ಬೆಳೆಗಾರರು ಒನ್ ಟೈಮ್ ಸೆಟ್ಲ ಮೆಂಟ್‌ಗೆ ಅರ್ಹರಿದ್ದು, 142 ಜನ ಬೆಳೆಗಾರರು ಒನ್ ಟೈನ್ ಸೆಟ್ಲಮೆಂಟ್ ಮಾಡಿಕೊಂಡಿದ್ದಾರೆ ಎಂದರು.

ಉಪಗ್ರಹದ ಮೂಲಕ ಬಿಎಸ್‌ಎನ್‌ಎಲ್ ಸಂಪರ್ಕ ನೀಡುವಂತೆ ಸಂಬಂಧಪಟ್ಟ ಇಲಾಖೆ ಸಚಿವರಿಗೆ ಪ್ರಸ್ತಾವನೆಯನ್ನು ಮುಂದಿಡಲಾಗಿದೆ. ಜಿಲ್ಲೆಯಲ್ಲಿ ಮೂರು ಎಫ್.ಎಂ. ಸ್ಟೇಷನ್ ಮಂಜೂರಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಸಂಬಂಧ ತಾಲೂಕು ಮಟ್ಟದಲ್ಲಿ ಶಾಸಕರನ್ನು ಒಳಗೊಂಡ ಸಭೆಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದರು

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್...