Home namma chikmagalur ಖಾಸಗಿ ಸ್ಟೋನ್ ಕ್ರಷರ್ ರದ್ದುಪಡಿಸಲು 15 ದಿನ ಗಡುವು
namma chikmagalurchikamagalurHomeLatest News

ಖಾಸಗಿ ಸ್ಟೋನ್ ಕ್ರಷರ್ ರದ್ದುಪಡಿಸಲು 15 ದಿನ ಗಡುವು

Share
Share

ಚಿಕ್ಕಮಗಳೂರು: ಮರ್ಲೆ ಹೊಸಳ್ಳಿಯಲ್ಲಿ ಕಾನೂನುಬಾಹಿರವಾಗಿ ನಡೆಸುತ್ತಿರುವ ಖಾಸಗಿ ಸ್ಟೋನ್ ಕ್ರಷರ್ ರದ್ದುಪಡಿಸಲು ೧೫ ದಿನ ಗಡುವು ನೀಡಿ ನಂತರ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದ ಕರ್ನಾಟಕ ರಾಜ್ಯ ರೈತ ಸಂಘ ಈಗ ಮೌನವಹಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಮರ್ಲೆ ಹೊಸಳ್ಳಿ ಗ್ರಾಮದ ರೈತ ಮಹಿಳೆ ಕಲ್ಪನಾ ದೂರಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗಣಿಗಾರಿಕೆ ನಿಯಮಗಳಿಗೆ ವಿರುದ್ಧವಾಗಿ ಮರ್ಲೆ ಹೊಸಳ್ಳಿ ಸಮೀಪ ಕಲ್ಲುಗಣಿಗಾರಿಕೆ ನಡಸಲಾಗುತ್ತಿದೆ. ಗ್ರಾಮಸ್ಥರ ಜಮೀನುಗಳು ೫೦ ಮೀಟರ್ ಅಂತರದಲ್ಲಿದ್ದು, ಧೂಳು, ಕಲ್ಲಿನ ಚೂರುಗಳು, ಕಲುಷಿತ ನೀರು ಜಮೀನಿಗೆ ಆವರಿಸುತ್ತಿದೆ ಎಂದು ಆರೋಪಿಸಿದರು.

ಜಮೀನಲ್ಲಿ ಕೆಲಸಮಾಡಲು ಭಯವಾಗುತ್ತಿದೆ. ಕಲ್ಲು ಸ್ಪೋಟಿಸುವ ಶಬ್ದದಿಂದ ಕುರಿ, ಹಸುಗಳು ಗರ್ಭಪಾತವಾಗಿ ಸಾವನ್ನಪ್ಪಿವೆ. ಕೃಷಿ, ಹೈನುಗಾರಿಕೆಯನ್ನೇ ಪ್ರಧಾನವಾಗಿ ಮಾಡಿಕೊಂಡು ಬದುಕುತ್ತಿರುವ ನಮಗೆ ಗಣಿಗಾರಿಕೆಯಿಂದ ಬದುಕೇ ದುಸ್ತರವಾಗಿದೆ. ಸಾಲಬಾಧೆಯಿಂದ ಕಾಲ ತಳ್ಳುತ್ತಿದ್ದೇವೆ ಎಂದು ನೊಂದು ನುಡಿದರು.

ಈ ಬಗ್ಗೆ ತಾವು ಮತ್ತು ಗ್ರಾಮಸ್ಥರು ಸ್ಟೋನ್ ಕ್ರಷರ್ ಮಾಲೀಕರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದು ವಿಚಾರಣೆಯಲ್ಲಿದೆ ಎಂದು ಹೇಳಿದರು.

ಈ ನಡುವೆ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ನಮ್ಮ ಗ್ರಾಮಕ್ಕೆ ಭೇಟಿ ನೀಡಿ ನ್ಯಾಯಕೊಡಿಸುವುದಾಗಿ ಹೇಳಿ ನಮ್ಮನ್ನು ನಂಬಿಸಿದರು. ನಮ್ಮಿಂದ ಎಲ್ಲ ದಾಖಲೆಗಳನ್ನು ಪಡೆದು ಸ್ಥಳಪರಿಶೀಲನೆ ಮಾಡಿ, ಸ್ಟೋನ್ ಕ್ರಷರ್ ಮಾಲೀಕರ ವಿರುದ್ಧ ಘೋಷಣೆ ಕೂಗಿದರು. ಕಲ್ಲುಗಣಿಗಾರಿಕೆ ಅಕ್ರಮ, ಕಾನೂನುಬಾಹಿರ ಎಂದು ತಿಳಿಸಿ ಸ್ಥಳದಿಂದ ತೆರಳಿದ್ದರು ಎಂದು ತಿಳಿಸಿದರು.

ಜು.೨೯ ಕ್ಕೆ ಜಿಲ್ಲಾ ಕೇಂದ್ರಕ್ಕೆ ಬಂದು ಸುದ್ದಿಗೋಷ್ಠಿ ನಡೆಸಿ ಕಾನೂನು ಬಾಹಿರವಾಗಿ ನಡೆಸುತ್ತಿರುವ ಕಲ್ಲುಗಣಿಗಾರಿಕೆಯನ್ನು ಮುಂದಿನ ೧೫ ದಿನದೊಳಗೆ ಸ್ಥಗಿತಗೊಳಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದರು.

ಆದರೆ, ಗಣಿಗಾರಿಕೆ ನಿಲ್ಲಲಿಲ್ಲ. ಅವರ ಗಡವೂ ಮುಗಿಯಿತು. ಅವರು ಹೇಳಿದಂತೆ ಆ.೧೨ ರಂದು ಗಣಿಗಾರಿಕೆ ಪ್ರದೇಶಕ್ಕೆ ಬಂದು ಪ್ರತಿಭಟನೆ ನಡೆಸಬೇಕಿತ್ತು. ತಮಗೆ ಬರುವುದಾಗಿ ಹೇಳಿ ೧೦೦ ಮಂದಿಗೆ ಊಟ ಮಾಡಿಸಿ ಎಂದು ಹೇಳಿದ್ದರು. ಆದರೆ ಯಾರೂ ಬರಲಿಲ್ಲ. ಫೋನಾಯಿಸಿದರೆ ಉಡಾಫೆ ಉತ್ತರ ನೀಡಿದ್ದಾರೆ. ರೈತ ಸಂಘದ ಅಧ್ಯಕ್ಷ, ಪದಾಧಿಕಾರಿಗಳ ಈ ನಡೆಯಿಂದ ನಮ್ಮ ಮನಸ್ಸಿಗೆ ತುಂಬಾ ನೋವಾಗಿದೆ ಎಂದರು.

ಜತೆಗೆ ಸ್ಟೋನ್ ಕ್ರಷರ್ ಮಾಲೀಕರು ಮತ್ತು ವಿಧಾನ ಪರಿಷತ್ ಸದಸ್ಯರ ಕೆಂಗಣ್ಣಿಗೆ ಗುರಿಯಾಗುವಂತಾಗಿದೆ. ಈ ರೀತಿ ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸಿ ರೈತ ಸಂಘದವರು ಮೌನವಾಗಿರುವುದರ ಹಿಂದಿನ ಉದ್ದೇಶವಾದರೂ ಏನು ಎಂದು ಪ್ರಶ್ನಿಸಿ, ಗಣಿಗಾರಿಕೆ ಮಾಲೀಕರೊಂದಿಗೆ ಇವರೇನಾದರು ಶಾಮೀಲಾದರೇ ಎಂಬ ಅನುಮಾನ ಮೂಡುತ್ತಿದೆ ಎಂದು ಆರೋಪಿಸಿದರು.

ಮರ್ಲೆ ಹೊಸಳ್ಳಿ ಗ್ರಾಮಸ್ಥರಿಗೆ ನ್ಯಾಯ ಕೊಡಿಸುವ ಇಚ್ಛಾಶಕ್ತಿ ರೈತ ಸಂಘದ ಮುಖಂಡರಿಗೆ ಇದ್ದಲ್ಲಿ ಕೂಡಲೇ ಅವರು ಆಡಿದಂತೆ ಹೋರಾಟ ಮಾಡಿ ತೋರಿಸಬೇಕು. ಇಲ್ಲದಿದ್ದರೆ ಹಸಿರು ಶಾಲು ತೆಗೆದಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

15-day deadline to cancel private stone crusher

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...