ಚಿಕ್ಕಮಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ 2 ಖದೀಮರನ್ನು ಬಂಧಿಸಿರುವ ಸಿಇಎನ್ ಪೊಲೀಸರು 1.26 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿಯೂ ಗಾಂಜಾ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು ಚಿಕ್ಕಮಗಳೂರು ತಾಲೂಕಿನ ಕೊಂಬತ್ತಿ ಗ್ರಾಮದ ಇಬ್ಬರನ್ನು ಪೊಲೀಸ್ ಬಂಧಿಸಿದ್ದಾರೆ. ಗ್ರಾಮೀಣ ಭಾಗದ ಯುವಕರನ್ನೇ ಟಾರ್ಗೆಟ್ ಮಾಡಿಕೊಂಡು ಅವರಿಗೆ ಸಪ್ಲೈ ಮಾಡುತ್ತಿದ್ದ ಐನಾತಿ ಆಸಾಮಿ ಗಳನ್ನು ಸಿ.ಇ.ಎನ್ ಪೊಲೀಸ್ ಠಾಣೆಯ ಪಿಎಸ್ಐ ರಘುನಾಥ್ ಹಾಗೂ ತಂಡ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧನಕ್ಕೆ ಒಳಪಡಿಸಿದ್ದಾರೆ. ಅವರಿಂದ ಸುಮಾರು ಒಂದೂವರೆ ಕೆ.ಜಿ ಯಷ್ಟು ಗಾಂಜಾ ಸೊಪ್ಪನ್ನು ವಶಕ್ಕೆ ಪಡೆದಿದ್ದಾರೆ. ಪತ್ತೆ ಕಾರ್ಯದಲ್ಲಿ ಸಿ.ಇ.ಎನ್ ಪೊಲೀಸ್ ಠಾಣೆಯ ಇಮ್ರಾನ್ ಖಾನ್, ಹರೀಶ ಹರಿಪ್ರಸಾದ್ ಧರ್ಮರಾಜ್ ಮತ್ತಿತರರು ಭಾಗವಹಿಸಿದ್ದರು.
Leave a comment