Home Crime News ಮಲೆನಾಡಲ್ಲಿ ಮತ್ತೆ ನಕ್ಸಲ್ ಸದ್ದು : ಇಬ್ಬರ ಬಂಧನ ಬಂದೂಕು ವಶ
Crime News

ಮಲೆನಾಡಲ್ಲಿ ಮತ್ತೆ ನಕ್ಸಲ್ ಸದ್ದು : ಇಬ್ಬರ ಬಂಧನ ಬಂದೂಕು ವಶ

Share
Share

ಚಿಕ್ಕಮಗಳೂರು : ದಶಕದ ನಂತರ ಮಲೆನಾಡಿನಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಸದ್ದು ಮಾಡಿದೆ. ದಟ್ಟ ಅರಣ್ಯದ ಕಾನನದಲ್ಲಿ ಇಂದಿಗೂ ಕೆಂಪು ಉಗ್ರರು ಇರುವ ಬಗ್ಗೆ ಇಂಬು ನೀಡುವ ಘಟನೆ ಒಂದು ನಡೆದಿದ್ದು ಕಳೆದ ಎರಡು ದಿನಗಳ ಹಿಂದೆ ಧರ್ಮಸ್ಥಳದಲ್ಲಿ ಇಬ್ಬರು ಶಂಕಿತ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದ್ದು ಕೊಪ್ಪ ಮೂಲದ ಇವರನ್ನು ಶೃಂಗೇರಿ ಪೊಲೀಸ್ ಠಾಣೆಗೆ ಕರೆ ತಂದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಬಂಧಿತರಿಂದ ನಾಡ ಬಂದೂಕು ಒಂದನ್ನು ವಶಕ್ಕೆ ಪಡೆಯಲಾಗಿದೆ.

ದಶಕಗಳ ಬಳಿಕ ಮಲೆನಾಡಲ್ಲಿ ಮತ್ತೆ ನಕ್ಸಲರ ಸದ್ದು ಕೇಳಿ ಬಂದಿದೆ. 2014 ನಂತರ ಮಲೆನಾಡಲ್ಲಿ ಕೆಂಪು ಉಗ್ರರ ಹೆಜ್ಜೆ ಇಲ್ಲ ಎಂದೇ ಹೇಳಲಾಗಿತ್ತು ಈ ನಡುವೆ ಮಲೆನಾಡಿಗೆ ಒತ್ತುವರಿ ತೆರೆವು ಗುಮ್ಮ ಹಾಗೂ ಕಸ್ತೂರಿ ರಂಗನ್ ವರದಿ ಭಯ ಬಹುದೊಡ್ಡ ಚಳುವಳಿಗೆ ನಾಂದಿ ಹಾಡಿತ್ತು. ಈ
ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಗ್ರಾಮಸ್ಥರ ಸಂಪರ್ಕ ಮಾಡುತ್ತಿದ್ದಾರೆ ಕೆಂಪು ಉಗ್ರರು ಎಂದು ಗೊತ್ತಾಗಿದೆ. ಬಂಧಿತ ಶಂಕಿತರಿಂದ ಒಂದು ನಾಡ ಬಂದೂಕು ವಶಕ್ಕೆ ಪಡೆದು ಇಬ್ಬರನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಅಲ್ಲದೇ ನಕ್ಸಲ್ ನಿಗ್ರಹ ಪಡೆಯಿಂದ ಮಲೆನಾಡಲ್ಲಿ ತೀವ್ರ ಶೋಧ ಕಾರ್ಯ ಕೂಡ ನಡೆಯುತ್ತಿದೆ. ವಶಕ್ಕೆ ಪಡೆದ ಇಬ್ಬರು
ಕೊಪ್ಪ ತಾಲೂಕಿನ ಯಡಗುಂದದ ಬಳಿ ನಕ್ಸಲರ ಸಂಪರ್ಕ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಜೊತೆಗೆ ನಕ್ಸಲರಿಗೆ ಮಾಹಿತಿ ರವಾನೆ ಸಹಕಾರ ಇವರು ಮಾಡುತ್ತಿದ್ದರು ಎನ್ನಲಾಗುತ್ತಿದೆ.
ಶೃಂಗೇರಿ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಸ್ಥಳದಲ್ಲಿಯೇ ಎ.ಎನ್.ಎಫ್ ಎಸ್ಪಿ ಹಾಗೂ
ಚಿಕ್ಕಮಗಳೂರು ಎಸ್ಪಿ ಮೊಕ್ಕಾಂ ಹೂಡಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ನಕ್ಸಲರ ಹೆಜ್ಜೆ ಇನ್ನೂ ಮಾಸಿಲ್ಲ ಎಂಬುದು ಗೊತ್ತಾಗುತ್ತಿದೆ

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...