Home namma chikmagalur chikamagalur ಚಿಕಿತ್ಸೆ ಸಿಗದೆ 24 ಗಂಟೆಗಳ ಕಾಲ ಆಂಬುಲೆನ್ಸ್‌ನಲ್ಲೇ ನರಕಯಾತನೆ
chikamagalurHomeLatest Newsnamma chikmagalur

ಚಿಕಿತ್ಸೆ ಸಿಗದೆ 24 ಗಂಟೆಗಳ ಕಾಲ ಆಂಬುಲೆನ್ಸ್‌ನಲ್ಲೇ ನರಕಯಾತನೆ

Share
Share

ಚಿಕ್ಕಮಗಳೂರು: ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಹಾಗೂ ಅತ್ಯಂತ ಕರುಣಾಜನಕ ಘಟನೆಯೊಂದು ಚಿಕ್ಕಮಗಳೂರು ತಾಲೂಕಿನ ಆಲ್ಲೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಯುವಕನಿಗೆ ವಿವಿಧ ಆಸ್ಪತ್ರೆಗಳಲ್ಲಿ ಬೆಡ್ ಮತ್ತು ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಬರೋಬ್ಬರಿ 24 ಗಂಟೆಗಳ ಕಾಲ ಆಂಬುಲೆನ್ಸ್‌ನಲ್ಲೇ ನರಕಯಾತನೆ ಅನುಭವಿಸಿದ್ದಾನೆ.

ಆಲ್ಲೂರು ಪಟ್ಟಣದಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರವಿ, ಅರೆನೂರು ಗ್ರಾಮದ ಬಳಿ ಸೋಮವಾರ ಬೈಕ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣ ಆತನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ, ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿನ ವೈದ್ಯರು ಮಂಗಳೂರಿಗೆ ರೆಫರ್ ಮಾಡಿದ್ರು. ಆದರೆ ಮಂಗಳೂರಿನ ಫಾದರ್ ಮುಲ್ಲರ್ ಹಾಗೂ ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ದಾಗ ಅಲ್ಲಿ ಐಸಿಯು ಬೆಡ್ ಹಾಗೂ ವೈದ್ಯರು ಇಲ್ಲ ಎಂಬ ಕಾರಣ ನೀಡಿ ಕೈತೊಳೆದುಕೊಳ್ಳಲಾಗಿದೆ.

ಅಲ್ಲಿಂದ ಮಂಗಳೂರಿನ ಮುಕ್ಕಾದಲ್ಲಿರುವ ಶ್ರೀನಿವಾಸ ಆಸ್ಪತ್ರೆಗೆ ಕರೆದೊಯ್ದರೆ, ಅಲ್ಲಿನ ಸಿಬ್ಬಂದಿ ಮೊದಲು 80 ಸಾವಿರ ರೂಪಾಯಿ ಹಣ ಕಟ್ಟಿ, ನಂತರ ಚಿಕಿತ್ಸೆ ಆರಂಭಿಸುವ ಷರತ್ತು ವಿಧಿಸಿದ್ದಾರೆ ಬಡ ಕುಟುಂಬದ ಬಳಿ ಅಷ್ಟು ದೊಡ್ಡ ಮೊತ್ತದ ಹಣವಿಲ್ಲದ ಕಾರಣ, ಅನಿವಾರ್ಯವಾಗಿ ಆಂಬುಲೆನ್ಸ್ ನಲ್ಲಿ ಗಾಯಾಳು ಯುವಕನನ್ನು ಮತ್ತೆ ಆಲ್ಲೂರಿಗೆ ವಾಪಸ್ ಕರೆ ತರಲಾಗಿದೆ.

ಮಂಗಳೂರಿನಲ್ಲಿ ಅತ್ಯುತ್ತಮ ಚಿಕಿತ್ಸೆ ಸಿಗುತ್ತದೆ ಎಂದು ಬರೋಬ್ಬರಿ 150 ಕಿಲೋಮೀಟರ್ ತೆರಳಿದ್ರು ಅತ್ತ ಚಿಕಿತ್ಸೆಯೂ ಸಿಗದೆ, ಇತ್ತ ಆಸ್ಪತ್ರೆಗಳಲ್ಲಿ ಬೆಡ್‌ಗಳೂ ಇಲ್ಲದೆ ಗಾಯಾಳು ಯುವಕ ಆಂಬುಲೆನ್ಸ್‌ನಲ್ಲೇ ನೋವು ಅನುಭವಿಸುತ್ತಿರುವುದನ್ನು ಕಂಡು ಇಡೀ ಬಡ ಕುಟುಂಬ ಅಸಹಾಯಕರಾಗಿ ಕಣ್ಣೀರು ಹಾಕುತ್ತಿತ್ತು. ಇಡೀ ರಾತ್ರಿ ಮತ್ತು ಹಗಲು ಆಂಬುಲೆನ್ಸ್‌ನಲ್ಲಿ ನರಕಯಾತನೆ ಅನುಭವಿಸಿದ ಆ ಜೀವ, ಇಂದಿನ ನಾಗರಿಕ ಸಮಾಜ ಮತ್ತು ವೈದ್ಯಕೀಯ ಲೋಕದ ಅಮಾನವೀಯತೆಗೆ ಹಿಡಿದ ಕನ್ನಡಿಯಾಗಿದೆ.

24 hours of hell in an ambulance without treatment

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...