Home namma chikmagalur ಸೀಗೋಡಿನಲ್ಲಿ 299 ಅನಧಿಕೃತ ರಸಗೊಬ್ಬರ ಚೀಲ ಪತ್ತೆ
namma chikmagalurchikamagalurHomeLatest News

ಸೀಗೋಡಿನಲ್ಲಿ 299 ಅನಧಿಕೃತ ರಸಗೊಬ್ಬರ ಚೀಲ ಪತ್ತೆ

Share
Share

ಚಿಕ್ಕಮಗಳೂರು:  ಕೊಪ್ಪ ತಾಲ್ಲೂಕಿನ ಸಿಗೋಡು ಗ್ರಾಮದಲ್ಲಿರುವ ಸುಭಾಷ್‌ನಗರ ಪ್ರದೇಶದಲ್ಲಿ ನಡೆಯುತ್ತಿದ್ದ ಅನಧಿಕೃತ ರಸಗೊಬ್ಬರ ದಾಸ್ತಾನು ಹಾಗೂ ಸಾಗಾಟ ಪ್ರಕರಣವನ್ನು ಪತ್ತೆಹಚ್ಚಿರುವ ಕೃಷಿ ಮತ್ತು ಪೊಲೀಸ್ ಇಲಾಖೆ ಸುಮಾರು ೫ ಲಕ್ಷ ರೂ. ಮೌಲ್ಯದ ೨೯೯ ಯೂರಿಯಾ ರಸಗೊಬ್ಬರವನ್ನು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದೆ.

ನಿನ್ನೆ (ಆಗಸ್ಟ್೭) ಮಧ್ಯಾಹ್ನ ಜರುಗಿದ ಈ ಜಂಟಿ ಕಾರ್ಯಾಚರಣೆಯಲ್ಲಿ ರಸಗೊಬ್ಬರ ಮಾರಾಟ ಪರವಾನಗಿ ಅಥವಾ ಇ-ವೇ ಬಿಲ್‌ಗಳಿಲ್ಲದೇ, ಸುಭಾಷ್‌ನಗರದ ಮನೆಯೊಂದರ ಮುಂಭಾಗ ಲಾರಿ (ವಾಹನ ಸಂಖ್ಯೆ ಕೆ.ಎ.೦೩ ಎಎ ೩೯೨೪)ಯಲ್ಲಿ ೨೨೦ ಯೂರಿಯಾ ರಸಗೊಬ್ಬರ ಚೀಲಗಳನ್ನು ಲೋಡ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಅದೇ ಮನೆಯ ಗೋದಾಮಿನಲ್ಲಿ ಇನ್ನೂ ೭೯ ಯೂರಿಯಾ ಚೀಲಗಳನ್ನು ಕಾನೂನು ಬಾಹಿರವಾಗಿ ದಾಸ್ತಾನಿರಿಸಿರುವುದು ಪತ್ತೆಯಾಗಿದೆ.

ರಸಗೊಬ್ಬರ ನಿಯಂತ್ರಣ ಆದೇಶ ೧೯೮೫ (ಕಲಂ ೭ ಮತ್ತು ೮) ಹಾಗೂ ಅಗತ್ಯ ವಸ್ತುಗಳ ಕಾಯ್ದೆ ೧೯೫೫ರ ಉಲ್ಲಂಘನೆಯಾಗಿರುವ ಕಾರಣ ಒಟ್ಟು ೨೯೯ (ಅಂದಾಜು ರೂ. ೫ ಲಕ್ಷ ಮೌಲ್ಯ) ಯೂರಿಯಾ ಚೀಲಗಳನ್ನು ಕೃಷಿ ಇಲಾಖಾಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ಜಪ್ತಿಯಾದ ರಸಗೊಬ್ಬರವನ್ನು ಬಾಳೆಹೊನ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗೋದಾಮಿನಲ್ಲಿ ಸುರಕ್ಷಿತವಾಗಿ ದಾಸ್ತಾನಿರಿಸಲಾಗಿದ್ದು, ಮಾದರಿಗಳನ್ನು ವಿಧಾಯಕ ಹಾಗೂ ಗುಣಮಟ್ಟ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ.

ಅಕ್ರಮ ಸಾಗಾಟಕ್ಕೆ ಬಳಸುತ್ತಿದ್ದ ಲಾರಿ ಮತ್ತು ಮಾಲೀಕ ವಿಲ್ಫ್ರೆಡ್ ಕ್ಲೋಡ್ ಲೋಬೊ ಎಂಬಾತನನ್ನು ಬಾಳೆಹೊನ್ನೂರು ಪೊಲೀಸ್ ಠಾಣಾಧಿಕಾರಿಗಳಿಗೆ ಒಪ್ಪಿಸಲಾಗಿದೆ. ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಜಾರಿದಳದ ಸಹಾಯಕ ಕೃಷಿ ನಿರ್ದೇಶಕ ತಿಮ್ಮನಗೌಡ ಎಸ್.ಪಾಟೀಲ್ ನೀಡಿರುವ ದೂರಿನ ಮೇರೆಗೆ ಬಾಳೆಹೊನ್ನೂರು ಠಾಣೆಯ ಪಿಎಸ್‌ಐ ರವೀಶ್ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ರೈತರಿಗೆ ಸರ್ಕಾರದ ಮೂಲಕ ಸರಿಯಾದ ದರದಲ್ಲಿ ಗುಣಮಟ್ಟದ ರಸಗೊಬ್ಬರ ದೊರಕಿಸಿಕೊಡಲು ಜಿಲ್ಲಾಡಳಿತ ಬದ್ಧವಾಗಿದ್ದು, ಇಂತಹ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಪೊಲೀಸ್ ಹಾಗೂ ಕೃಷಿ ಇಲಾಖೆಯ ಜಂಟಿ ಪರಿಶೀಲನೆ ಮುಂದುವರೆಯಲಿದೆ. ಯಾವುದೇ ಅಕ್ರಮ ದಾಸ್ತಾನು, ಸಾಗಾಟ ಅಥವಾ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

299 bags of illegal fertilizer found in Seagod

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...