Home namma chikmagalur chikamagalur ಡಿಸಿಸಿ ಬ್ಯಾಂಕ್‌ ನ 13 ನಿರ್ದೇಶಕ ಸ್ಥಾನಗಳಿಗೆ 40 ನಾಮಪತ್ರ ಸಲ್ಲಿಕೆ
chikamagalurHomeLatest Newsnamma chikmagalur

ಡಿಸಿಸಿ ಬ್ಯಾಂಕ್‌ ನ 13 ನಿರ್ದೇಶಕ ಸ್ಥಾನಗಳಿಗೆ 40 ನಾಮಪತ್ರ ಸಲ್ಲಿಕೆ

Share
Share

ಚಿಕ್ಕಮಗಳೂರು: ಜಿಲ್ಲಾ ಸಹಕಾರ ಯೂನಿಯನ್ ಬ್ಯಾಂಕ್ ಆಡಳಿತ ಮಂಡಳಿಯ 13 ನಿರ್ದೇಶಕ ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಂತ್ಯಗೊಂಡಿದೆ

ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಇಂದು ಒಟ್ಟು 40 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಈ ಪೈಕಿ 4 ಸ್ಥಾನಗಳು ಅವಿರೋಧ ಆಯ್ಕೆಯ ಹಾದಿಯಲ್ಲಿವೆ. ಪ್ರಮುಖವಾಗಿ ಎನ್.ಆರ್. ಪುರದಿಂದ ಕೆ.ಸಿ. ಜಯಪಾಲ ಮತ್ತು ಮೂಡಿಗೆರೆಯಿಂದ ಹಳಸೆ ಶಿವಣ್ಣ ಅವರು ನಾಮಪತ್ರ ಸಲ್ಲಿಸಿದ ಏಕೈಕ ಅಭ್ಯರ್ಥಿಗಳಾಗಿದ್ದು, ಅವಿರೋಧ ಆಯ್ಕೆ ಖಚಿತಗೊಂಡಿದೆ.

ಚುನಾವಣಾ ಕಣದಲ್ಲಿ ರಾಜಕೀಯದ ಘಟಾನುಘಟಿಗಳಾದ ಮಾಜಿ ಸಚಿವ ಸಿ.ಟಿ. ರವಿ, ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಮಾಜಿ ಶಾಸಕರಾದ ಬೆಳ್ಳಿಪ್ರಕಾಶ್, ಡಿ.ಎಸ್. ಸುರೇಶ್ ಮತ್ತು ಎಂ.ಪಿ. ಕುಮಾರ್ ಸ್ವಾಮಿ ಅವರುಗಳು ವಿವಿಧ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿರುವುದು ಚುನಾವಣಾ ಕಣದ ರಂಗೇರುವಂತೆ ಮಾಡಿದೆ.

ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪರವಾಗಿ ಚಿಕ್ಕಮಗಳೂರು ಸ್ಥಾನಕ್ಕೆ 8 ನಾಮಪತ್ರಗಳು, ಕಡೂರು ತಾಲೂಕಿನ ಎರಡು ಸ್ಥಾನಗಳಿಗೆ 3 ನಾಮಪತ್ರಗಳು ಹಾಗೂ ತರೀಕೆರೆ ತಾಲೂಕಿನ ಎರಡು ಸ್ಥಾನಗಳಿಗೆ ಕೆ.ಆರ್. ಆನಂದಪ್ಪ ಮತ್ತು ಡಿ.ಎಸ್. ಸುರೇಶ್ ಕಣದಲ್ಲಿದ್ದಾರೆ.

ಇತರ ಕ್ಷೇತ್ರಗಳಲ್ಲೂ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಕೊಪ್ಪ ತಾಲೂಕಿನ ಒಂದು ಸ್ಥಾನಕ್ಕೆ ಪ್ರಜ್ವಲ್, ರವೀಂದ್ರ ಮತ್ತು ಸತೀಶ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಶೃಂಗೇರಿ ತಾಲೂಕಿನಲ್ಲಿ ದಿನೇಶ್ ಹೆಗ್ಡೆ ಮತ್ತು ಪ್ರಸನ್ನ ನಾಮಪತ್ರ ಸಲ್ಲಿಸಿದ್ದಾರೆ.

ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಟಿ.ಕೆ. ಜಗದೀಶ್ ಮತ್ತು ಎಸ್.ಡಿ. ಸೋನಾಲ್ ಸ್ಪರ್ಧಿಸುತ್ತಿದ್ದಾರೆ. ಉಳಿದಂತೆ ಜಿಲ್ಲಾ ವ್ಯವಸಾಯೋತ್ಪನ್ನ ಸಹಕಾರ ಸಂಘ ಮತ್ತು ಇತರ ಸಹಕಾರ ಸಂಘಗಳ ಕ್ಷೇತ್ರಗಳಿಗೂ ಹಿರಿಯ ಮುಖಂಡರು ನಾಮಪತ್ರ ಸಲ್ಲಿಸಿದ್ದು, ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆಯ ನಂತರ ಅಂತಿಮ ಚಿತ್ರಣ ಲಭ್ಯವಾಗಲಿದೆ.

40 nominations submitted for 13 director positions in DCC Bank

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...