Home Crime News ನಾಲ್ಕನೇ ಹೆಂಡತಿಯನ್ನು ಕುಡಿದು ಹೊಡೆದು ಕೊಂದ ಪತಿ
Crime Newsnamma chikmagalur

ನಾಲ್ಕನೇ ಹೆಂಡತಿಯನ್ನು ಕುಡಿದು ಹೊಡೆದು ಕೊಂದ ಪತಿ

Share
Share

ಚಿಕ್ಕಮಗಳೂರು :

ಮೂರು ವಿವಾಹವಾಗಿ ಮೂವರನ್ನು ಬಿಟ್ಟು ನಾಲ್ಕನೇ ಮದುವೆಯಾಗಿದ್ದ ಹೆಂಡತಿಯನ್ನು ಕುಡಿದ ಮತ್ತಿನಲ್ಲಿ ಹೆಂಡತಿಗೆ ಮಾರಕಾಸ್ತ್ರದಿಂದ ಹೊಡೆದು ಪಾಪಿ ಪತಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಎನ್ ಎಂಡಿಸಿ ಗ್ರಾಮದಲ್ಲಿ ನಡೆದಿದೆ.

20 ವರ್ಷಗಳ ಹಿಂದೆ ಎನ್ ಎಂ ಡಿಸಿ ಗ್ರಾಮದ ಹಿರೇಶ್ ಎಂಬುವನು ಲಲಿತ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದನು, ಕಳೆದ ರಾತ್ರಿ ಕಂಠಪೂರ್ತಿ ಕುಡಿದು ಮನೆಗೆ ಬಂದು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ್ದಾನೆ. ಈ ವೇಳೆ ಹೆಂಡತಿ ಲಲಿತಾಳಿಗೆ ಮನೆಯಲ್ಲಿದ್ದ ದೊಣ್ಣೆಯಿಂದ ಬಲವಾಗಿ ಹೊಡೆದು ಕೊಲೆ ಮಾಡಿದ್ದಾನೆ. ಈಗಾಗಲೇ ಮೂವರನ್ನು ವಿವಾಹವಾಗಿ ಎಲ್ಲರಿಂದಲೂ ದೂರವಿರುವ ಹಿರೇಶ್ ಮದುವೆ ಆಗುವುದನ್ನೇ ಚಾಳಿ ಮಾಡಿಕೊಂಡಿದ್ದ ಎನ್ನಲಾಗಿದೆ. ಶೃಂಗೇರಿ ತಾಲೂಕಿನ ಕೆರೆಮಕ್ಕಿ ಗ್ರಾಮದ ವಾಸಿಯಾದ ಶೇಷಯ್ಯ ತನ್ನ ಅಕ್ಕನನ್ನು ಕೊಲೆ ಮಾಡಿರುವುದಾಗಿ ಚಿಕ್ಕಮಗಳೂರಿನ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಹಿರೇಶ್ ನನ್ನು ಬಂಧಿಸಿದ್ದಾರೆ. ಕೊಲೆ ನಡೆದ ಎನ್ಎಂಡಿಸಿ ಗ್ರಾಮದ ಮನೆಗೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಸಚಿನ್ ಕುಮಾರ್ ತಮ್ಮ ಸಿಬ್ಬಂದಿಗಳ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಲಲಿತಾ ಹಾಗೂ ಹಿರೇಶ್ ದಂಪತಿಗಳಿಗೆ ಯಾವುದೇ ಮಕ್ಕಳಿರಲಿಲ್ಲ ಎಂದು ತಿಳಿದು ಬಂದಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...