Home ತರೀಕೆರೆ ದಸರಾ ಜಂಗಿ ಕುಸ್ತಿಗೆ ಅದ್ದೂರಿ ಚಾಲನೆ
Homenamma chikmagalurTarikere

ತರೀಕೆರೆ ದಸರಾ ಜಂಗಿ ಕುಸ್ತಿಗೆ ಅದ್ದೂರಿ ಚಾಲನೆ

Share
Share

ಚಿಕ್ಕಮಗಳೂರು :
ತರೀಕೆರೆ :

ದಸರಾ ಹಬ್ಬದ ಸಂದರ್ಭದಲ್ಲಿ ಮೈಸೂರಿನಲ್ಲಿ ನಡೆಯುವ ಕುಸ್ತಿ ಪಂದ್ಯ ಬಿಟ್ಟರೆ ತರೀಕೆರೆಯಲ್ಲಿ ನಡೆಯುವ ಕುಸ್ತಿ ಪಂದ್ಯಾವಳಿಗಳು ಹೆಸರು ಮತ್ತು ಕೀರ್ತಿಗೆ ಭಾಜನವಾಗಿದೆ.

ಪಾಳೇಗಾರರ ಕಾಲದಲ್ಲಿ ಪ್ರಾರಂಭವಾದ ತರೀಕೆರೆ ಕುಸ್ತಿ ಪಂದ್ಯಗಳು ಪ್ರತಿ ವರ್ಷವೂ ಅದ್ದೂರಿಯಾಗಿ ನಡೆಯುತ್ತಿವೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಮತ್ತು ಅನ್ಯ ರಾಜ್ಯಗಳಿಂದ ಕುಸ್ತಿಪಟುಗಳು ಆಗಮಿಸುತ್ತಾರೆ. ಇಲ್ಲಿನ “ಬೆಳ್ಳಿ ಗಧೆ” ಕುಸ್ತಿ ಎಲ್ಲೆಡೆ ಪ್ರಖ್ಯಾತಿ ಪಡೆದಿದೆ.
ಈ ಹಿಂದೆ ಕುಸ್ತಿಪಟುಗಳಿಗೆ ಮನೆಯಲ್ಲಿ ಆತಿಥ್ಯ ನೀಡುವುದರ ಮೂಲಕ ತರೀಕೆರೆಯ ಜನ ಕುಸ್ತಿಕಾಳಗಕ್ಕೆ ಉತ್ತೇಜನ ನೀಡುತ್ತಿದ್ದರು. ಇತ್ತೀಚಿನ ವರ್ಷಗಳಲ್ಲಿ ಶ್ರೀ ರೇವಣಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಕುಸ್ತಿ ಪಟುಗಳಿಗೆ ಆತಿಥ್ಯ ನೀಡಲಾಗುತ್ತಿದೆ. ದಿವಂಗತ ಮಾಜಿ ಶಾಸಕ ಟಿ.ಹೆಚ್.ಶಿವಶಂಕರಪ್ಪನವರ ನೇತೃತ್ವದಲ್ಲಿ ಅಧುನಿಕ ಸ್ಪರ್ಶ ನೀಡಿ ಕುಸ್ತಿ ವೀಕ್ಷಿಸಲು ಬರುವ ಜನರಿಗೆ ಕುಳಿತುಕೊಳ್ಳಲು ಸ್ಟೇಡಿಯಂ ಸ್ವರೂಪ ಕೊಡಲಾಗಿದೆ. ಇಂದಿನಿಂದ ಮೂರು ದಿನಗಳಕಾಲ ನಡೆಯುವ ಕುಸ್ತಿ ಕಾಳಗಕ್ಕೆ ಚಾಲನೆ ನೀಡಲಾಗಿದ್ದು ಮಂಗಳವಾರ ಬೆಳ್ಳಿ ಗಧೆ ಕುಸ್ತಿ ನಡೆಯುತ್ತದೆ.

ಶ್ರೀ ಗುರು ರೇವಣಸಿದ್ದೇಶ್ವರ ಕುಸ್ತಿ ಸಂಘದ ಅಧ್ಯಕ್ಷರಾದ ಜಯಸ್ವಾಮಿ ಕಾರೆ ನೇತೃತ್ವದಲ್ಲಿ ಅಯೋಜನೆ ಮಾಡಲಾಗಿದೆ. ಹಿರಿಯ ಕುಸ್ತಿ ಪಟುಗಳಾದ ವಗ್ಗಪ್ಪರ ಮಂಜಣ್ಣ, ಸೀನಣ್ಣ,ಪುರಸಭಾ ಅಧ್ಯಕ್ಷ ವಂಸತಕುಮಾರ್, ಉಪಾಧ್ಯಕ್ಷ ಗಿರಿಜಾ ಪ್ರಕಾಶ್, ಪುರಸಭಾ ಸದಸ್ಯರಾದ ದಾದಪೀರ್, ಟಿ.ಜಿ.ಮಂಜುನಾಥ್ ಮಾಜಿ ಪುರಸಭಾ ಅಧ್ಯಕ್ಷ ಬೈಟು ರಮೇಶ್ ಮತ್ತು ವಿವಿಧ ಸಮಾಜದ ಮುಖಂಡರು ಜಂಗಿಕುಸ್ತಿ ಪಂದ್ಯವಳಿ ಯಶಸ್ವಿ ಯಾಗಲೇಂದು ಶುಭಹಾರೈಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...