Home namma chikmagalur ಜಿಲ್ಲೆಯ ಹಲವೆಡೆ ಮಳೆ ಆರ್ಭಟ : ಸಿಡಿಲು ಬಡಿದು ಎತ್ತು ಸಾವು
namma chikmagalur

ಜಿಲ್ಲೆಯ ಹಲವೆಡೆ ಮಳೆ ಆರ್ಭಟ : ಸಿಡಿಲು ಬಡಿದು ಎತ್ತು ಸಾವು

Share
Share

ಚಿಕ್ಕಮಗಳೂರು :
ಭಯಂಕರ ಗುಡುಗು-ಸಿಡಿಲಿನ ಧಾರಾಕಾರ ಮಳೆಗೆ ಹೊಲದಲ್ಲಿ ಮೇಯುತ್ತಿದ್ದ ಹಸು ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಕರ್ತಿಕೆರೆ ಗ್ರಾಮದಲ್ಲಿ ನಡೆದಿದೆ.‌ ಚಿಕ್ಕಮಗಳೂರು ನಗರ ಸೇರಿದಂತೆ
ಮಲೆನಾಡ ಕೆಲ ಭಾಗಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರು ನಗರ, ಮೂಡಿಗೆರೆ‌ ಹಾಗೂ ಮೂಡಿಗೆರೆಯ ಗ್ರಾಮೀಣ ಭಾಗದಲ್ಲಿ ಧಾರಾಕಾರ ಮಳೆ ಸುರಿದಿದೆ. ಬೆಳಿಗ್ಗೆಯಿಂದ ಬಿಸಿಲಿನ ವಾತಾವರಣವಿದ್ದ ಜಿಲ್ಲೆಯಲ್ಲಿ ಮಧ್ಯಾಹ್ನದ ಬಳಿಕ ಇದ್ದಕ್ಕಿದ್ದಂತೆ ಧಾರಾಕಾರ ಮಳೆ ಸುರಿದಿದೆ. ಭಾರಿ ಮಳೆ ಸುರಿದ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಳ್ಳುವುದರ ಜೊತೆ ಜನ ಹೈರಾಣಾಗಿದ್ದಾರೆ. ಮಳೆಗಾಲದ ಮಳೆಯಂತೆ ಮನಸ್ಸೋಇಚ್ಛೆ ಸುರಿದ ಮಳೆಯಿಂದ ಅಡಿಕೆ-ಕಾಫಿ-ಮೆಣಸು ಬೆಳೆಗಾರರು ಕಂಗಾಲಾಗಿದ್ದಾರೆ. ಕಾಫಿ-ಅಡಿಕೆ-ಮೆಣಸು ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳು. ಈ ಬೆಳೆಗಳಿಂದಲೇ ಬದುಕು ಕಟ್ಟಿಕೊಂಡಿರುವ ಸಾವಿರಾರು ಕುಟುಂಬಗಳು ಜಿಲ್ಲೆಯಲ್ಲಿವೆ. ಆದರೆ, ಈ ವರ್ಷ ಜನವರಿಯಿಂದಲೂ ನಿರಂತರವಾಗಿ ಮಳೆ ಸುರಿದಿದೆ. ಮಲೆನಾಡಿನಲ್ಲಿ ಮುಂಗಾರು ಮಳೆ ಯತೇಚ್ಛವಾಗಿ ಸುರಿದಿತ್ತು. ಇದೀಗ, ಹಿಂಗಾರು ಕೂಡ ಒಂದೇ ಸಮನೆ ಸುರಿಯುತ್ತಿದ್ದು ಅಡಿಕೆ-ಕಾಫಿ-ಮೆಣಸಿಗೆ ಕೊಳೆ ರೋಗದ ಭೀತಿ ಆವರಿಸಿದೆ. ಸಾಲದಕ್ಕೆ ಕಾಫಿ-ಅಡಿಕೆ-ಮೆಣಸು ಕೊಯ್ಲಿಗೆ ಬಂದಿದೆ. ಇಂತಹಾ ಸಮಯದಲ್ಲಿನ ಈ ಭಾರೀ ಮಳೆ ಬೆಳೆಗಳ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತೆ ಅನ್ನೋದು ಮಲೆನಾಡಿಗರ ಆತಂಕ.

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....