Home namma chikmagalur ಭಾರಿ ಮಳೆ: ಚಿಕ್ಕಮಗಳೂರಿನಲ್ಲಿ ಸೇತುವೆಗಳು ಜಲಾವೃತ
namma chikmagalur

ಭಾರಿ ಮಳೆ: ಚಿಕ್ಕಮಗಳೂರಿನಲ್ಲಿ ಸೇತುವೆಗಳು ಜಲಾವೃತ

Share
ಭಾರಿ ಮಳೆ, Heavy rain: Bridges flooded in Chikkamagalur
Share

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಸುರಿಯುತ್ತಿರುವ ಮಹಾಮಳೆಗೆ ಮಲೆನಾಡಿನ ಕೆಲ ಭಾಗಗಳು ಕಂಗಾಲಾಗಿವೆ. ಭಾರೀ ಮಳೆಗೆ ಗ್ರಾಮೀಣ ಭಾಗದಲ್ಲಿ ಸೇತುವೆಗಳು ಜಲಾವೃತಗೊಂಡಿವೆ.

ಹಳ್ಳ ದಾಟಲು ಮುತ್ತೋಡಿ ವ್ಯಾಪ್ತಿಯ ಗ್ರಾಮದ ಜನರು ಪರದಾಡುತ್ತಿದ್ದಾರೆ. ವೃದ್ಧೆಯೊಬ್ಬರನ್ನ ಗ್ರಾಮಸ್ಥನೊಬ್ಬನು ಕೈಗಳಲ್ಲಿ ಹೊತ್ತು ಸಾಗಿದ ಘಟನೆಯೂ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಮಲಗಾರು ಗ್ರಾಮದಲ್ಲಿ ಈ ಪರಿಸ್ಥಿತಿ ಉಂಟಾಗಿದೆ. ಮಲಗಾರು ಗ್ರಾಮ ಮುತ್ತೋಡಿ ಅರಣ್ಯ ವ್ಯಾಪ್ತಿಯ ಕುಗ್ರಾಮವಾಗಿದ್ದು, ನಿನ್ನೆ ಸಂಜೆ ಸುರಿದ ಭಾರೀ ಮಳೆಯಿಂದ ತೀವ್ರ ಪ್ರಮಾಣದ ನೀರು ಸೇತುವೆ ಮೇಲೆ ಹರಿಯುತ್ತಿದೆ. ಈ ಕಿರು ಸೇತುವೆ ತುಂಬಿ ಮಲಗಾರು ಗ್ರಾಮದ ಜನರು ಪರದಾಟ ಪಡುವಂತಾಗಿದೆ.

ಇದನ್ನು ಓದಿ: ಜಿಲ್ಲೆಯ ಹಲವೆಡೆ ಮಳೆ ಆರ್ಭಟ : ಸಿಡಿಲು ಬಡಿದು ಎತ್ತು ಸಾವು

ಮತ್ತೊಂದೆಡೆ ಇತಿಹಾಸದಲ್ಲಿ ಕಂಡು ಕೇಳರಿಯದ ಮಳೆಗೆ ಮುಳ್ಳಯ್ಯನ ಗಿರಿ ಪ್ರದೇಶದ ಜನ ಬೆಚ್ಚಿಬಿದ್ದಿದ್ದಾರೆ ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶದಲ್ಲಿ 2 ಅಡಿ ಮಳೆ ನೀರು ಹರಿಯುತ್ತಿದೆ.  ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲಿನಲ್ಲಿ ಅಲ್ಲೋಲ-ಕಲ್ಲೋಲವೇ ಉಂಟಾಗಿದೆ.

ಐ.ಡಿ ಪೀಠದ ರಸ್ತೆಯಲ್ಲಿ 2 ಅಡಿ ಎತ್ತರದಲ್ಲಿ ಮಳೆ ನೀರು ಹರಿಯುತ್ತಿದೆ. ಎಷ್ಟೇ ಮಳೆ ಬಂದರೂ ಪಶ್ಚಿಮ ಘಟ್ಟಕ್ಕೆ ಲೆಕ್ಕವೇ ಅಲ್ಲ ಆದರೂ ಸಾವಿರಾರು ಅಡಿ ಆಳ, ಮುಗಿಲೆತ್ತರದ ಬೆಟ್ಟಗುಡ್ಡಗಳ ಪಶ್ಚಿಮ ಘಟ್ಟಗಳ ತಪ್ಪಲು ಭಾರೀ ಮಳೆಗೆ ನಲುಗಿ ಹೋಗಿದೆ. ವಾಯುಭಾರ ಕುಸಿತದ ಮಳೆಯ ಅಬ್ಬರಕ್ಕೆ ಪಶ್ಚಿಮ ಘಟ್ಟವೇ ಬೆದರಿದೆ ವಾರಾಂತ್ಯ ಹಿನ್ನೆಲೆ ಆಗಮಿಸಿದ್ದ ಪ್ರವಾಸಿಗರು ಮಳೆರಾಯನ ಅಬ್ಬರಕ್ಕೆ ತೊಯ್ದು ತೊಪ್ಪೆ ಆಗಿದ್ದಾರೆ ಮಳೆ ಮಧ್ಯೆ ಸಿಲುಕಿ ಮುಳ್ಳಯ್ಯನ ಗಿರಿ ಸಹವಾಸವೇ ಬೇಡ ಎಂದು ಪ್ರವಾಸಿಗರು ಹೇಳುವಂತಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...