Home Latest News ಅನ್ನದಾತನ ಕಣ್ಣಲ್ಲಿ ನೀರು ತರಿಸುತ್ತಿರುವ ಈರುಳ್ಳಿ
Latest News

ಅನ್ನದಾತನ ಕಣ್ಣಲ್ಲಿ ನೀರು ತರಿಸುತ್ತಿರುವ ಈರುಳ್ಳಿ

Share
ಈರುಳ್ಳಿ onion lost from rain chikkamagaluru
Share

ಚಿಕ್ಕಮಗಳೂರು: ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ ಈರುಳ್ಳಿ ಬೆಳೆಗೆ ಈ ಬಾರಿ ಬಂಪರ್ ಬೆಲೆ ಬಂದಿದೆ, ಇದರಿಂದಾಗಿ ರೈತರ ಕಣ್ಣಲ್ಲಿ ಪನ್ನೀರು ಬರಬೇಕಿತ್ತು ಆದರೆ ಬರುತ್ತಿರುವುದು ಕಣ್ಣೀರು.

ಈರುಳ್ಳಿ ಬೆಳೆಗೆ ಹವಮಾನ ಬಹಳ ಮುಖ್ಯ ಮತ್ತು ಶ್ರಮ ಕೂಡ ಅಷ್ಟೇ ಮುಖ್ಯ. ರೈತರು ಇದಕ್ಕಾಗಿ ತುಂಬಾ ಶ್ರಮ ಹಾಕುತ್ತಾರೆ ಆದರೆ ಪ್ರಕೃತಿ ಕೈ ಕೊಟ್ಟರೆ ಶ್ರಮವೆಲ್ಲಾ ಹೊಳೆಯಲ್ಲಿ ಹುಣಸೇಹಣ್ಣು ಕದರಿದಂತೆ ಆಗುತ್ತದೆ. ಇದೇ ಪರಿಸ್ಥಿತಿ ಜಿಲ್ಲೆಯ ರೈತರಿಗೆ ಒದಗಿದೆ.

ಇದನ್ನು ಓದಿ: ಭಾರಿ ಮಳೆ: ಚಿಕ್ಕಮಗಳೂರಿನಲ್ಲಿ ಸೇತುವೆಗಳು ಜಲಾವೃತ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಂಪರ್ ಕ್ರಾಪ್ ಆಗಿ ರೈತರ ಕೈಗೆ ಸಿಗಬೇಕಿದ್ದ ಈರುಳ್ಳಿ ಇದೀಗ ಹವಮಾನ ವೈಪರೀತ್ಯಗಳಿಂದಾಗಿ ಕೈಗೆ ಬಂದಿದ್ದು ಬಾಯಿಗೆ ಬರಲಿಲ್ಲ ಎಂದು ಬೆಳೆಗಾರರು ಕೊರಗುತ್ತಿದ್ದಾರೆ. ಒಳ್ಳೆಯ ಬೆಲೆಯಿದೆ ಅದರೆ ಅಕಾಲಿಕ ಮಳೆಯಿಂದಾಗಿ ಬೆಳೆಗಾರರಿಗೆ ಭಾರೀ ನಷ್ಟವಾಗಿದೆ. ಅಕಾಲಿಕ ಮಳೆಯಿಂದಾಗಿ ನೂರಕ್ಕೆ ಮೂವತ್ತರಿಂದ ನಲವತ್ತುರಷ್ಟು ಪ್ರತಿಶಃತ ಬೆಳೆ ಸಿಕ್ಕಿದ್ದು ಅರವತ್ತರಷ್ಟು ನಷ್ಟವಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಜ್ಜಂಪುರ ತಾಲ್ಲೂಕಿನ ಶಿವನಿ ಹೋಬಳಿಯ ಕೆಲ ಭಾಗದಲ್ಲಿ ಅಜ್ಜಂಪುರ ಹೋಬಳಿಯ ಕೆಲ ಭಾಗದಲ್ಲಿ ಅಂದರೆ ಸರಿಸುಮಾರಾಗಿ ಹದಿನೈದು ಸಾವಿರ ಹೆಕ್ಟೇರನಿಂದ ಇಪ್ಪತ್ತು ಸಾವಿರ ಹೆಕ್ಟೇರ್ ನಷ್ಟು ಮತ್ತು ಕಡೂರು ತಾಲ್ಲೂಕಿನ ಹಿರೇನಲ್ಲೂರು ಹೋಬಳಿಯ ಕೆಲ ಭಾಗ ಮತ್ತು ಚೌಳಹಿರಿಯೂರು ಭಾಗದ ಕೆಲವು ಕಡೆ ಈರುಳ್ಳಿ ಬೆಳೆಯಲಾಗುತ್ತದೆ ಆದರೆ ಅಕಾಲಿಕ ಮಳೆಯಿಂದಾಗಿ ರೈತರು ಕಂಡ ಕನಸಿಗೆ ಬೆಂಕಿ ಇಟ್ಟಂಗಾಗಿದೆ. ಬೆಲೆ ಇದೆ ಆದರೆ ಬೆಳೆ ಇಲ್ಲ ಎಂದು ರೈತರು ಕೊರಗುತ್ತಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...