Home Political News ಎಸ್ಎಲ್ ಭೋಜೇಗೌಡ ರಾಜಕೀಯ ಚದುರಂಗದಾಟ : ಬುಗುರಿ ತಿರುಗಿಸೋ ನಿಸ್ಸೀಮ
Political News

ಎಸ್ಎಲ್ ಭೋಜೇಗೌಡ ರಾಜಕೀಯ ಚದುರಂಗದಾಟ : ಬುಗುರಿ ತಿರುಗಿಸೋ ನಿಸ್ಸೀಮ

Share
Share

ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ ರಾಜಕೀಯ ಬುಗುರಿ ಆಡಿಸುವುದರಲ್ಲಿ ನೀಸ್ಸಿಮರು ಒಮ್ಮೆ ಬುಗುರಿ ಆದರೆ ಮತ್ತೊಂದು ಬಾರಿ ಚಾಟಿ ರೀತಿ ಹೇಗೆ ಬೇಕೋ ಹಾಗೆ ಬೀಸುತ್ತಾರೆ.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಬೀಸಿದವರು ಸ್ಥಳೀಯ ಸಂಸ್ಥೆಯ ಚುನಾವಣೆ ಗೆ ಬಿಜೆಪಿಯವರು ಇವರ ಪರ ಚಾಟಿ ಬಿಸುವಂತೆ ಮಾಡಿಕೊಂಡರು ಇದೇ ರಾಜಕೀಯವಲ್ಲವೇ ?

ಜಿಲ್ಲೆಯಲ್ಲಿ ನಡೆದ ನಗರಸಭೆ ಮತ್ತು ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಚಿಕ್ಕಮಗಳೂರು ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಚಾಟಿ ಬೀಸಿದರೆ ಮೂಡಿಗೆರೆ ಪಟ್ಟಣ ಪಂಚಾಯಿತಿಯಲ್ಲಿ ದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಪತ್ನಿ ಮಂಜುಳಾ ಕಾಂಗ್ರೆಸ್ ಸೇರಿ ಅಧ್ಯಕ್ಷರಾದರು ಆದರೆ ರಂಜನ್ ಅಜಿತ್ ಕೂಡ ಜಾತ್ಯಾತೀತ ಜನತಾ ದಳದ ಜಿಲ್ಲಾ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ. ಇದನ್ನು ನೋಡಿದರೆ ಗೌಡರ ಚಾಟಿಯ ಮಸಲತ್ತು ಹೇಗಿದೆ ಎಂಬುದು ಮೂಡರಿಗೂ ತಿಳಿಯುತ್ತದೆ.
ದಳದ ಸಂಪೂರ್ಣ ಹಿಡಿತ ಭೋಜೇಗೌಡರ ಬಳಿಯಿದೆ ಎಂಬುದು ಎಲ್ಲರಿಗೂ ಗೊತ್ತು ದಳದ ಮುಖಂಡರು ಉಗಿಯುವಂತೆ ಇಲ್ಲ ನುಂಗುವಂತೆ ಇಲ್ಲ ಎಂಬ ಅಡಕತ್ತರಿಯಲ್ಲಿ ಸಿಕ್ಕಿಕೊಂಡಿದ್ದಾರೆ.

ಕಾಂಗ್ರೆಸ್ ನವರಿಗೆ ಒಂದು ಬಣ್ಣದ ಬುಗುರಿ ಬಿಟ್ಟರೆ ಬಿಜೆಪಿಯವರಿಗೆ ಮತ್ತೊಂದು ಬಣ್ಣದ ಬುಗುರಿ ಬಿಟ್ಟು ಎರಡು ಪಕ್ಷದವರು ಗಿರಿ,ಗಿರಿ ತಿರುಗುವಂತೆ ಮಾಡಿದ್ದಾರೆ ಎಂದುಮೂರು ಪಕ್ಷದವರು ಮಾತನಾಡುತ್ತಿದ್ದಾರೆ. ಜಿಲ್ಲಾ ರಾಜಕಾರಣದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ವಿರೋಧ ಪಕ್ಷದವರಿಗೆ ವಿಧಾನ ಪರಿಷತ್ ಸದಸ್ಯ ಭೋಜೇಗೌಡರೇ ಎಲ್ಲಾ ತೀರ್ಮಾನ ತೆಗೆದುಕೊಳ್ಳುವ ನಾಯಕರಾಗಿದ್ದಾರೆ. ಅಧಿಕಾರ ಮುಖ್ಯ ಎಂದು ಎಲ್ಲರೂ ಹೊಂದಾಣಿಕೆಯ ರಾಜಕಾರಣದಲ್ಲಿ ತಲ್ಲೀನರಾಗಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಕೇಂದ್ರ ಸರ್ಕಾರದ ಅನುದಾನ ಹಾಗೂ ತೆರಿಗೆ ಪಾಲು ಕುರಿತು ನಮ್ಮ ಸರ್ಕಾರ ‘ಶ್ವೇತಪತ್ರ’ ಪತ್ರ

ವಿಧಾನಸಭೆ:  ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು...

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಎಂಬ ನಾಟಕ…!

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಲು ತುದಿಗಾಲಿನಲ್ಲಿ ನಿಂತಿದ್ದವರಿಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಲು...

ಬಿ.ಎಲ್.ಶಂಕರ್ ರಾಜಕೀಯ ಹಿನ್ನಡೆ ಏಕೆ ?

ಚಿಕ್ಕಮಗಳೂರು: ಬಿ.ಎಲ್.ಶಂಕರ್ ರಾಜಕೀಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದೊಡ್ಡ ಶಕ್ತಿಯಾಗಿದ್ದವರು ಹಿನ್ನಡೆ ಅನುಭವಿಸುತ್ತಿರುವುದು ಏಕೆ ?...

ಬಿ.ಎಲ್.ಶಂಕರ್ ಗೆ ಮತ್ತೆ ಮತ್ತೆ ಮಿಸ್…?

ಚಿಕ್ಕಮಗಳೂರು: ರಾಜ್ಯ ಸಭೆ ಅಥವಾ ವಿಧಾನ ಪರಿಷತ್ ಸ್ಥಾನಗಳಿಗೆ ಆಯ್ಕೆ ಮಾಡುವಾಗ ಬಿ.ಎಲ್.ಶಂಕರ್ ಹೆಸರು ಎವರೆಸ್ಟ್...