Home State News ಮುಂದಿನ ಮೂರು ದಿನಗಳು ಪ್ರವಾಸ ಮುಂದೂಡಿ : ಚಿಕ್ಕಮಗಳೂರು ಜಿಲ್ಲಾಡಳಿತ ಸೂಚನೆ
State News

ಮುಂದಿನ ಮೂರು ದಿನಗಳು ಪ್ರವಾಸ ಮುಂದೂಡಿ : ಚಿಕ್ಕಮಗಳೂರು ಜಿಲ್ಲಾಡಳಿತ ಸೂಚನೆ

Share
Share

 

ಚಿಕ್ಕಮಗಳೂರು : ಪ್ರವಾಸಿಗರೇ… ಸದ್ಯಕ್ಕೆ ಕಾಫಿನಾಡ ಪ್ರವಾಸ ಮುಂದೂಡಿ ನಾಳೆಯಿಂದ 3 ದಿನ ಕಾಫಿನಾಡಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಒಂದು ವಾರ ಅಥವಾ ಮಳೆ ನಿಲ್ಲೋವರೆಗೂ ನಿಮ್ಮ ಪ್ರವಾಸ ಮುಂದೂಡಿ ಎಂದು
ಪ್ರವಾಸಿಗರಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ಮನವಿ ಮಾಡಿದೆ.

ಜಿಲ್ಲೆಯಲ್ಲಿ ವಾಡಿಕೆಗಿಂತ ಅಕಾಲಿಕ ಮಳೆ ಹೆಚ್ಚಾಗುತ್ತಿದೆ, ನದಿ-ಹಳ್ಳ-ಕೆರೆ ಗಳು ತುಂಬಿ ಕೆಲವೆಡೆ ಅಪಾಯದ ಮಟ್ಟದಲ್ಲಿವೆ ಅಲ್ಲದೇ ಮಲೆನಾಡಿನ ಅಲ್ಲಲ್ಲೇ ಭೂಕುಸಿತ ಕೂಡ ಉಂಟಾಗಿದೆ. ಮಲೆನಾಡಿನಲ್ಲಿ ಧರೆ, ಬೆಟ್ಟ-ಗುಡ್ಡ ಕುಸಿಯುವ ಸಂಭವ ಕೂಡ ಎದುರಾಗಿದೆ. ಇದರಿಂದಾಗಿ ನಿಮ್ಮ ಟ್ರಕ್ಕಿಂಗ್ ಹಾಗೂ ಪ್ರವಾಸ ಕಾರ್ಯಕ್ರಮಗಳನ್ನು ಮುಂದಿನ ಒಂದು ವಾರಗಳ ಕಾಲ ಮುಂದೂಡಿ ಎಂದು ಡಿ.ಸಿ ಕಚೇರಿಯಿಂದ ಸಲಹೆ ನೀಡಲಾಗಿದೆ. ಸಾರ್ವಜನಿಕರು ಹಾಗೂ ಹೊರ ಜಿಲ್ಲೆಗಳಿಂದ ಬರುವ ಪ್ರವಾಸಿಗರು ನದಿಪಾತ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.
ಅಲ್ಲದೇ ಬಟ್ಟೆಗಳು ಹಾಗೂ ಜಾನುವಾರುಗಳನ್ನು ತೊಳೆಯಲು ಕೆರೆ-ಕಟ್ಟೆಗಳ ಬಳಿ ಹೋಗದಂತೆ ಸಹಾ ಎಚ್ಚರಿಕೆ ಕೊಡಲಾಗಿದೆ.
ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಪ್ರವಾಸಿಗರು-ಸ್ಥಳಿಯರಿಗೆ ಮನವಿ ಮಾಡಲಾಗಿದೆ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ ಅದರಲ್ಲೂ ಮುಳ್ಳಯ್ಯನಗಿರಿ ಐ.ಡಿ ಪೀಠ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿದೆ

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ರಾಮಚಂದ್ರ ರಾವ್ ಅಲಿಯಾಸ್ ಕಾಮುಕ ರಾವ್ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯ

ರಾಮಚಂದ್ರ ರಾವ್ ಅಲಿಯಾಸ್ ಕಾಮಚಂದ್ರ ರಾವ್ ನಿವೃತ್ತಿ ಅಂಚಿನಲ್ಲಿ ಕಾಮ ಪುರಾಣದಲ್ಲಿ ಸಿಲುಕಿ ಒದ್ದಾಡುತ್ತಿದ್ದಾರೆ. ಮಾಡಿದ್ದು...

ಚಿಕಿತ್ಸೆ ಫಲಕಾರಿಯಾಗದೆ ಸಾಲುಮರದ ತಿಮ್ಮಕ್ಕ ನಿಧನ

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ....

ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೋ ! ಭ್ರಾಂತಿಯೋ ?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿ ಎರಡೂವರೆ ವರ್ಷ ಪೂರೈಸುತ್ತಿದೆ.ಸರ್ಕಾರ ರಚನೆಯಾದಾಗಿನಿಂದ ಇಲ್ಲಿಯವರೆಗೆ “ಮುಖ್ಯಮಂತ್ರಿ” ಬದಲಾಗುತ್ತಾರೆ...

ಅಭ್ಯರ್ಥಿ ಗರಿಷ್ಠ ವಯೋಮಿತಿಯಲ್ಲಿ ಒಮ್ಮೆ ಅನ್ವಯವಾಗುವಂತೆ 3 ವರ್ಷ ಸಡಿಲಿಕೆ

ಚಿಕ್ಕಮಗಳೂರು:  ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು...