Home Crime News ಖಡಕ್ ಐಪಿಎಸ್ ಅಧಿಕಾರಿ ಬಿ.ಕೆ ಸಿಂಗ್ ನಗರಕ್ಕೆ ಎಂಟ್ರಿ : ಅನ್ವರ್ ಕೊಲೆ ಕೇಸ್ ಜಾಡು ಹಿಡಿದು ತನಿಖೆ
Crime News

ಖಡಕ್ ಐಪಿಎಸ್ ಅಧಿಕಾರಿ ಬಿ.ಕೆ ಸಿಂಗ್ ನಗರಕ್ಕೆ ಎಂಟ್ರಿ : ಅನ್ವರ್ ಕೊಲೆ ಕೇಸ್ ಜಾಡು ಹಿಡಿದು ತನಿಖೆ

Share
Share

ಚಿಕ್ಕಮಗಳೂರು : ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಅನ್ವರ್ ಕೊಲೆಯಾಗಿ ಆರು
ವರ್ಷ ಕಳೆದಿದ್ದು ಇದುವರೆಗೂ ಕೊಲೆಗಾರ ಪತ್ತೆಯಾಗಿಲ್ಲ, ಈ ಹಿನ್ನೆಲೆಯಲ್ಲಿ ಸಿಓಡಿ ಎಡಿಜಿಪಿ ಬಿ.ಕೆ. ಸಿಂಗ್ ಪ್ರಕರಣದ ತನಿಖೆಗೆ ಇಳಿದಿದ್ದು ಶನಿವಾರ ನಗರಕ್ಕೆ ಆಗಮಿಸಿ ಘಟನೆಯಮಾಹಿತಿ ಕಲೆ ಹಾಕಿದ್ದಾರೆ.

ಬಿಜೆಪಿ ಮುಖಂಡ ಅನ್ವರ್ ಅವರನ್ನು 2018 ಜೂ.22 ರಂದು ಗೌರಿಕಾಲುವೆ ಗುಡ್ ಮಾರ್ನಿಂಗ್ ಶಾಪ್ ಸಮೀಪದಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ಇಡೀ ಚಿಕ್ಕಮಗಳೂರು ನಗರವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣವನ್ನು 2019ರಲ್ಲಿ ಅಂದಿನ ಬಿಜೆಪಿ ಸರ್ಕಾರ ಸಿಓಡಿಗೆ ವಹಿಸಿತ್ತು. ಆದರೂ ಅನ್ವರ್ ಕೊಲೆ ಪ್ರಕರಣದ ಆರೋಪಿಗಳ ಪತ್ತೆ ಸಾಧ್ಯವಾಗಿರಲಿಲ್ಲ.

ಅನ್ವರ್ ಕೊಲೆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕೆಂದು ಅನ್ವರ್ ಕುಟುಂಬದವರು ಚಿಕ್ಕಮಗಳೂರು ನಗರದಲ್ಲಿ ಅನೇಕ ಬಾರೀ ಪ್ರತಿಭಟನೆ ನಡೆಸಿ ಸರ್ಕಾರವನ್ನು ಆಗ್ರಹಿಸಿದ್ದರು. ಜತೆಗೆ ಕೊಲೆ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಇಲ್ಲವೇ ದಯಾಮರಣಕ್ಕೆ ಅನುಮತಿ ನೀಡುವಂತೆ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದ ಘಟನೆ ನಡೆದಿತ್ತು.
ಕುಟುಂಬಸ್ಥರು ಪೊಲೀಸ್ ಇಲಾಖೆ, ರಾಜ್ಯ ಸರ್ಕಾರದ ಮೇಲೆ ಎಷ್ಟೇ ಒತ್ತಡ ತಂದರೂ ಕೊಲೆ ಆರೋಪಿಗಳ ಸುಳಿವಿಲ್ಲ. ಪ್ರಕರಣ ನಡೆದು ಆರು ವರ್ಷಗಳು ಕಳೆದಿದ್ದು, ನ್ಯಾಯಕ್ಕಾಗಿ ಮೊರೆ ಇಟ್ಟಿದ್ದ ಕುಟುಂಬ ಕೈಚೆಲ್ಲಿ ಕುಳಿತ್ತಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಎಡಿಜಿಪಿ ಬಿ.ಕೆ.ಸಿಂಗ್ ಅವರು ಖುದ್ದು ತನಿಖೆಗೆ ಇಳಿದಿದ್ದಾರೆ. ಶನಿವಾರ ನಗರಕ್ಕೆ ಆಗಮಿಸಿದ ಅವರು, ಅನ್ವರ್ ಕೊಲೆ ನಡೆದ ಜಾಗ, ಅಲ್ಲಿನ ಮಾರ್ಗಗಳು‌ ಸೇರಿ ದಂತೆ ಪ್ರಕರಣಕ್ಕೆ ಸಂಬಂ ಧಿಸಿದ ಮಾಹಿತಿಯನ್ನು ಪ್ರಕರಣದ ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.
ಬಾಾಾಾಾ

ಎಡಿಜಿಪಿ ಬಿ.ಕೆ.ಸಿಂಗ್ ಅವರು ಈ ಹಿಂದೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಸದ್ಯ ಅನ್ವರ್ ಕೊಲೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದು, ನ್ಯಾಯಕ್ಕಾಗಿ ಹಂಬಲಿಸುತ್ತಿದ್ದ ಅನ್ವರ್ ಕುಟುಂಬದಲ್ಲಿ ಆಶಾ ಭಾವನೆ ಮೂಡಿಸಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

ಮುಂಜಾಗ್ರತಾ ಕ್ರಮವಾಗಿ ಪೋಲಿಯೊ ಲಸಿಕೆ ಹಾಕಿಸಿ

ಚಿಕ್ಕಮಗಳೂರು:ಯಾವುದೇ ರೋಗ ಬಂದ ಮೇಲೆ ಪರದಾಡುವುದಕ್ಕಿಂತ, ಅದು ಬರುವ ಮುನ್ನವೇ ತಡೆಯುವುದು ಬುದ್ಧಿವಂತಿಕೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಮುಂಜಾಗ್ರತಾ ಕ್ರಮವಾಗಿ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಕರೆ ನೀಡಿದರು. ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ  ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ನಮ್ಮ ದೇಶದಲ್ಲಿ ಹಲವು ವರ್ಷಗಳ ಹಿಂದೆಯೇ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಯಶಸ್ವಿಯಾಗಿ ಪ್ರಾರಂಭಿಸಲಾಯಿತು. ಅಂದಿನ ಪ್ರಧಾನಿ ಪಿ.ವಿ. ನರಸಿಂಹರಾವ್ ಹಾಗೂ ಅಂದಿನ ಮುಖ್ಯಮಂತ್ರಿ ಹೆಚ್.ಡಿ. ದೇವೇಗೌಡ ಅವರ...

Related Articles

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...