Home Latest News ದೇವಿರಮ್ಮ ಬೆಟ್ಟ ಹತ್ತುವಾಗ ರೀಲ್ಸ್ ಮಾಡಿದ್ರೆ ಹುಷಾರ್ : ಎಸ್ಪಿ ವಿಕ್ರಮ್ ಅಮಟೆ ವಾರ್ನಿಂಗ್
Latest News

ದೇವಿರಮ್ಮ ಬೆಟ್ಟ ಹತ್ತುವಾಗ ರೀಲ್ಸ್ ಮಾಡಿದ್ರೆ ಹುಷಾರ್ : ಎಸ್ಪಿ ವಿಕ್ರಮ್ ಅಮಟೆ ವಾರ್ನಿಂಗ್

Share
Share

ಚಿಕ್ಕಮಗಳೂರು : ಸಮುದ್ರ ಮಟ್ಟದಿಂದ ಸುಮಾರು 3 ಸಾವಿರ ಅಡಿ ಎತ್ತರದ ಪಿರಮಿಡ್ ಆಕಾರದ ಬೆಟ್ಡದ ತುದಿಯಲ್ಲಿ ನೆಲೆ‌ ನಿಂತು ವರ್ಷಕ್ಕೊಮ್ಮೆ ದರ್ಶನ ನೀಡೋ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಿಂಡಿಗ ದೇವೀರಮ್ಮನ ಭಕ್ತರಿಗೆ ಖಾಕಿ ಪಡೆ ಕಠಿಣ ಸಂದೇಶ ರವಾನಿಸಿದೆ. ಮಳೆ ಬಂದು ಬೆಟ್ಟ ಜಾರುತ್ತಿದೆ. ಬೆಟ್ಟ ಹತ್ತುವಾಗ ಮಾರ್ಗ ಮಧ್ಯೆ ಸೆಲ್ಫಿ ತೆಗೆದುಕೊಳ್ಳುವುದು, ರೀಲ್ಸ್ ಮಾಡುವುದು, ಫೋಟೋ ಸೆಷನ್ ಮಾಡುವುದು ಕಂಡು ಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ Dr ವಿಕ್ರಂ ಅಮಟೆ ಎಚ್ಚರಿಕೆ ನೀಡಿದ್ದಾರೆ. ನಾಳೆ ಬುಧವಾರ ಸಂಜೆ 4 ಗಂಟೆಯಿಂದ ಗುರುವಾರ ಸಂಜೆವರೆಗೂ ಬೆಟ್ಟ ಹತ್ತಿ ದೇವೀರಮ್ಮನ ದರ್ಶನಕ್ಕೆ ದೇವಾಲಯ ಆಡಳಿತ ಮಂಡಳಿ ಅವಕಾಶ ಕಲ್ಪಿಸಿದೆ. ಹಾಗಾಗಿ, ಸುಮಾರು 1 ಲಕ್ಷಕ್ಕೂ ಅಧಿಕ ಭಕ್ತರು ಬೆಟ್ಟ ಹತ್ತುವ ಸಾಧ್ಯತೆ ಇದ್ದು ಜಿಲ್ಲಾಡಳಿತ ಸರ್ವ ಸಕಲ‌ ಸಿದ್ಧತೆ ಮಾಡಿಕೊಂಡಿದೆ. ಆದರೆ, ಬೆಟ್ಡ ಹತ್ತುವ ಮಾರ್ಗದಲ್ಲಿ ಡ್ಯಾನ್ಸ್ ಮಾಡುವುದು, ಫೋಟೋ ಸೆಷನ್ ಮಾಡುವುದು, ಸೆಲ್ಫಿಗಾಗಿ ಭಕ್ತರಿಗೆ ತೊಂದರೆ ಕೊಡುವುದು, ರೀಲ್ಸ್ ಮಾಡುವುದು ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಮಗಳೂರಿನ ಊರ ದೇವತೆ ದೇವೀರಮ್ಮನ ನೋಡಲು ಲಕ್ಷಕ್ಕೂ ಅಧಿಕ ಭಕ್ತರು ಬರುವ ಹಿನ್ನೆಲೆ ಪೊಲೀಸರ ಬೆಟ್ಟ ಹತ್ತುವ ಮಾರ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. ಮಲ್ಲೇನಹಳ್ಳಿ ಮಾರ್ಗ, ಮಾಣಿಕ್ಯಾಧಾರ ಮಾರ್ಗ, ಅರಿಶಿನಗುಪ್ಪೆ ಹಾಗೂ ಕಾಫಿ ತೋಟದ ಒಳಗಿಂದ ಒಟ್ಟು ನಾಲ್ಕು ಮಾರ್ಗದಲ್ಲಿ ಹತ್ತುವ ಬೆಟ್ಟಕ್ಕೆ ನಾಲ್ಕು ಮಾರ್ಗದಲ್ಲೂ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಿದ್ದಾರೆ. ಸುಮಾರು 3 ಕಿ.ಮೀ. ಎತ್ತದ ಬೆಟ್ಟದಲ್ಲಿ ಪ್ರತಿ 1 ಕಿ.ಮೀ.ಗೆ ಒಂದು ಪೊಲೀಸರ ತಂಡವನ್ನ ನಿಯೋಜನೆ ಮಾಡಲಾಗಿದೆ. ಬೆಟ್ಟದ ಮಾರ್ಗದ 5 ಕಡೆ ಮೆಗಾಫೋನ್ ಮೂಲಕ ಭಕ್ತರಲ್ಲಿ ಜಾಗೃತಿ ಮೂಡಿಸಲಿದ್ದಾರೆ.‌ ಮಾರ್ಗದುದ್ದಕ್ಕೂ ಅಲ್ಲಲ್ಲೇ, ಪೊಲೀಸ್, ಆರೋಗ್ಯ ಸಿಬ್ಬಂದಿ, ಅಗ್ನಿಶಾಮಕ, ಸ್ವಯಂಸೇವಕರು ಭಕ್ತರ ಅನುಕೂಲಕ್ಕೆ ಸಿದ್ಧರಿರ್ತಾರೆ. ಬೆಟ್ಟ ಹತ್ತಲು ಸುಸ್ತಾದರೆ ರೋಪ್ (ಹಗ್ಗ) ಹಿಡಿದು ಹತ್ತೋದಕ್ಕೂ ಸ್ವಯಂ ಸೇವಕರು, ಪೊಲೀಸ್, ಅಗ್ನಿಶಾಮಕ ಸಿಬ್ಬಂದಿಗಳು ನೆರವಿಗೆ ಬರಲಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...