Home Latest News ಆಜಾದ್ ಪಾರ್ಕ್ ನಲ್ಲಿ ನಡೆದಿದ್ದು ಮಹಿಷ ದಸರಾ ಆಚರಣೆನಾ ? ನಗರದಲ್ಲಿ ನೂರಾರು ಪೊಲೀಸರನ್ನು ನಿಯೋಜಿಸಿದ್ದು ಏಕೆ
Latest News

ಆಜಾದ್ ಪಾರ್ಕ್ ನಲ್ಲಿ ನಡೆದಿದ್ದು ಮಹಿಷ ದಸರಾ ಆಚರಣೆನಾ ? ನಗರದಲ್ಲಿ ನೂರಾರು ಪೊಲೀಸರನ್ನು ನಿಯೋಜಿಸಿದ್ದು ಏಕೆ

Share
Share

ಚಿಕ್ಕಮಗಳೂರು : ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಅನುಮತಿ ನೀಡದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಚಿಕ್ಕಮಗಳೂರು ನಗರದಲ್ಲಿ ಪ್ರತಿಭಟನಾರ್ಥಕವಾಗಿ ಮಹಿಷಾಸುರನ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸರ್ಕಾರದ ನಿಲುವನ್ನು ಖಂಡಿಸಲಾಯಿತು.

ಜಿಲ್ಲಾಧಿಕಾರಿ ಅನುಮತಿ ನಿರಾಕರಣೆ ಮಧ್ಯೆಯೂ ವಿವಿಧ ದಲಿತ ಪರ ಸಂಘಟನೆಗಳು ಮಹಿಷಾಸುರನ ಭಾವಚಿತ್ರ ಹಿಡಿದು ಘೋಷಣೆ ಕೂಗಿದರು. ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮಹಿಷ ದಸರಾ ಆಚರಣೆಗೆ ಅಥವಾ ಯಾವುದೇ ಚಟುವಟಿಕೆಗಳಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅನುಮತಿ ಕೊಟ್ಟಿರಲಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ದಲಿತ ಸಂಘಟನೆಯ ಇಬ್ಬರಿಗೆ ನೋಟಿಸ್ ಕೂಡ ಜಾರಿ ಮಾಡಿದ್ದರು. ಆದರೆ, ಇಂದು ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ 25ಕ್ಕೂ ಹೆಚ್ಚು ದಲಿತ ಮುಖಂಡರು ಮಹಿಷಾಸುರನ ಬ್ಯಾನರ್ ಗೆ ಪುಷ್ಪಾರ್ಚನೆ ಮಾಡಿ ಜೈಕಾರ ಕೂಗಿದರು. ಮಹಿಷ ರಾಜನಿಂದಲೇ ಮೈಸೂರಿಗೆ ಮೈಸೂರು ಅಂತ ಹೆಸರು ಬಂದಿದ್ದು. ಆತ ಬೌದ್ಧ ಧರ್ಮದ ಪ್ರಚಾರಕನಾಗಿದ್ದ, ಆದಿವಾಸಿ ಮಹಾರಾಜನ ವಿರುದ್ಧ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿರುವುದು ಖಂಡನಿಯ. ಖಾದಿ-ಕಾವಿ ಹಾಗೂ ಕಿಡಿಗೇಡಿಗಳಿಂದ ಮಹಿಷ ದಸರಾ ಆಚರಣೆಗೆ ವಿರೋಧ ವ್ಯಕ್ತವಾಗುತ್ತಿದೆ. ಈ ಆಚರಣೆಯನ್ನು ಪ್ರತಿ ವರ್ಷವೂ ಮಾಡೇ ತೀರುತ್ತೇವೆ ತಡೆಯಲು ಯಾರಿಂದ ಸಾಧ್ಯವಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಅನುಮತಿ ನಿರಾಕರಿಸಿದ್ದರು. ಆದರೆ, ನಾವು ಅವರಿಗೆ ಮನವಿ ಮಾಡಿದ್ದೇವು. ಯಾವುದೇ ಕಾರಣಕ್ಕೂ ಮಹಿಷ ಆಚರಣೆ ತಡೆಯಲು ಸಾಧ್ಯವಿಲ್ಲ ಎಂದು ದಲಿತ ಮುಖಂಡರು ಮಹಿಷಾಸುರನಿಗೆ ಪುಷ್ಪಾರ್ಚನೆ ಮಾಡಿದ್ರು. ಇದೇ ವೇಳೆ, ಮುನ್ನೆಚ್ಚರಿ ಕಾರ್ಯಕ್ರಮವಾಗಿ 25ಕ್ಕೂ ಹೆಚ್ಚು ಸಬ್ ಇನ್ಸ್ಪೆಕ್ಟರ್ ಸೇರಿ ನೂರಕ್ಕೂ ಹೆಚ್ಚು ಪೊಲೀಸರು ನಗರದಾದ್ಯಂತ ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....