Home Latest News ದೇವಿರಮ್ಮ ಬೆಟ್ಟದಲ್ಲಿ ಕಾಲ್ತುಳಿತ ಸಂಭವಿಸಿಲ್ಲ : ಚಿಕ್ಕಮಗಳೂರು ಎಸ್ಪಿ ಸ್ಪಷ್ಟನೆ
Latest News

ದೇವಿರಮ್ಮ ಬೆಟ್ಟದಲ್ಲಿ ಕಾಲ್ತುಳಿತ ಸಂಭವಿಸಿಲ್ಲ : ಚಿಕ್ಕಮಗಳೂರು ಎಸ್ಪಿ ಸ್ಪಷ್ಟನೆ

Share
Share

ಚಿಕ್ಕಮಗಳೂರು : ದೇವಿರಮ್ಮ ಬೆಟ್ಟ ಹತ್ತಿ ದೇವರ ದರ್ಶನದ ವೇಳೆ ಕಾಲ್ ತುಳಿತ ಎಂಬ ಸುಳ್ಳು ಸುದ್ದಿ ಹಾಗೂ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಎಸ್ ಪಿ ವಿಕ್ರಂ ಅಮಟೆ ಸ್ಪಷ್ಟನೆ ನೀಡಿದ್ದಾರೆ.

3800 ಅಡಿ ಎತ್ತರದಲ್ಲಿರೋ ದೇವಿರಮ್ಮ ಬೆಟ್ಟದಲ್ಲಿ ತಾಯಿಯ ದರ್ಶನ ಪಡೆಯುತ್ತಿರುವ ವೇಳೆ ನೂರಾರು ಜನರು ಕಾಲ್ತುಳಿತಕ್ಕೆ ಒಳಪಟ್ಟು ಗಾಯಗೊಂಡಿದ್ದಾರೆ ಎಂದು ಕೆಲ ರಾಷ್ಟ್ರೀಯ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರೋ ವಿಕ್ರಂ ಅಮಟೆ, ಇದು ಸತ್ಯಕ್ಕೆ ದೂರವಾದ ಮಾಹಿತಿ ಎಂದಿದ್ದಾರೆ. ಬೆಟ್ಟ ಹತ್ತುವಾಗ ಇಬ್ಬರು ಮಹಿಳೆಯರು ಮಾತ್ರ ಪ್ರಜ್ಞೆ ತಪ್ಪಿದ್ದರು. ಪ್ರಜ್ಞೆ ತಪ್ಪಿದವರನ್ನು ಆಂಬುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಆ ಇಬ್ಬರು ಮಹಿಳೆಯರು ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಈ ಮಹಿಳೆಯರು ಉಪವಾಸ ಇದ್ದು ಬೆಟ್ಟ ಹತ್ತುತ್ತಿದ್ದ ಕಾರಣ ಪ್ರಜ್ಞೆ ತಪ್ಪಿ ಅಸ್ವಸ್ಥರಾಗಿದ್ದರು. ಇನ್ನುಳಿದಂತೆ ಮೂವರಿಗೆ ಕಾಲು ಜಾರಿ ಟ್ವಿಸ್ಟ್ ಆಗಿ ಬಿದ್ದಿದ್ದರಿಂದ ಸಣ್ಣಪುಟ್ಟ ಗಾಯಗಳಾಗಿದೆ. ಅವರುಗಳನ್ನು ಸಹ ಪೋಲಿಸ್ ರಕ್ಷಣಾ ತಂಡ ರಕ್ಷಣೆ ಮಾಡಿ ಚಿಕಿತ್ಸೆ ಕೊಡಿಸಿ ತಮ್ಮ ಮನೆ ಗಳಿಗೆ ಕಳುಹಿಸಿ ಕೊಟ್ಟಿದ್ದಾರೆ. ಆದರೆ ಕೆಲವು ಮಾಧ್ಯಮಗಳಲ್ಲಿ ಕಾಲ್ತುಳಿತ ಹಾಗೂ ಸಾವಿರಾರು ಜನರಿಗೆ ಗಾಯ ಎಂಬ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ್ದು ಇದು ಸತ್ಯಕ್ಕೆ ದೂರವಾದ ಮಾಹಿತಿ ಎಂದು ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ ಮಾಧ್ಯಮಗಳಿಗೆ ಮನವಿ ಮಾಡಿರುವ ಚಿಕ್ಕಮಗಳೂರು ಎಸ್ಪಿ ಡಾ ವಿಕ್ರಮ್ ಅಮಟೆ ಯಾವುದೇ ಮಾಹಿತಿಗಳು ಬೇಕಾದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಬೇಕಾಗಿ ಕೇಳಿಕೊಂಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...