Home Latest News ಬೆಂಗಳೂರು ಟ್ರಾಫಿಕ್ ಜಾಮ್ ಮೀರಿಸಿದ ಮುಳ್ಳಯ್ಯನಗಿರಿ ವಾಹನ ದಟ್ಟಣೆ
Latest News

ಬೆಂಗಳೂರು ಟ್ರಾಫಿಕ್ ಜಾಮ್ ಮೀರಿಸಿದ ಮುಳ್ಳಯ್ಯನಗಿರಿ ವಾಹನ ದಟ್ಟಣೆ

Share
Share

ಚಿಕ್ಕಮಗಳೂರು :

ಸಾಲು-ಸಾಲು ರಜೆ ಹಿನ್ನೆಲೆಯಲ್ಲಿ ಕಾಫಿನಾಡಲ್ಲಿ ಪ್ರವಾಸಿಗರ ಜಾತ್ರೆಯೇ ನೆರೆದಿದೆ. ಗಿರಿಶ್ರೇಣಿಯಲ್ಲಂತೂ ವಾಹನಗಳು ಸಾವಿರಾರು ಸಂಖ್ಯೆಯಲ್ಲಿ ಸಾಲುಗಟ್ಟಿ ಟ್ರಾಫಿಕ್ ಜಾಮ್ ಆಗಿದೆ.

ಮುಳ್ಳಯ್ಯನಗಿರಿ, ಐ.ಡಿ ಪೀಠದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನಗಳ ದಟ್ಟಣೆಯಿಂದಾಗಿ ಮುಳ್ಳಯ್ಯನಗಿರಿ ಯಲ್ಲಿ ಪ್ರವಾಸಿಗರು ಪರದಾಡ್ತಿದ್ದಾರೆ
ಮುಂದೆ ಸಾಗಲು ಆಗದೆ ಗಂಟೆ ಗಟ್ಟಲೇ ನಿಂತಲ್ಲೇ ನಿಂತು ಪ್ರವಾಸಿಗರು ಹೈರಾಣಾಗಿದ್ದಾರೆ.

ಸೂಕ್ಷ್ಮ ಪ್ರದೇಶವಾಗಿರುವ ಬೆಟ್ಟಗಳ ಸಾಲಿನಲ್ಲಿ ಪರಿಶೀಲನೆ ನಡೆಸಿರುವ ಜೀಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಡೆಂಜರ್ ಪ್ಲೇಸ್ ಎಂದು ಗುರುತಿಸಿದ್ದರೂ ಪ್ರವಾಸಿಗರು ಬರುವುದು ಕಡಿಮೆ ಆಗಿಲ್ಲ, ಅತಿಯಾದ ವಾಹನ ದಟ್ಟಣೆಗೆ ಪರಿಸರ ಪ್ರೇಮಿಗಳು ಅಸಮಾಧಾನ ಕೂಡ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ಮುಳ್ಳಯ್ಯನಗಿರಿ ಭಾಗಕ್ಕೆ ನಿಗಧಿತ ಟೂರಿಸ್ಟ್ ಬಿಡುವಂತೆ ಮನವಿ ಮಾಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಸತತವಾಗಿ ರಜೆಗಳು ಇರುವುದರಿಂದ ಚಿಕ್ಕಮಗಳೂರು ತಾಲೂಕಿನ ಪಶ್ಚಿಮ ಘಟ್ಟಗಳ ತಪ್ಪಲಿನ ಪ್ರವಾಸಿ ತಾಣಗಳು ತುಂಬಿ ತುಳುಕುತ್ತಿವೆ. ಇದನ್ನು ನೋಡಿದರೆ ಬೆಂಗಳೂರು ಟ್ರಾಫಿಕ್ ಅನ್ನು ಮೀರಿಸುವಂತೆ ವಾಹನ ದಟ್ಟಣೆ ಏರ್ಪಟ್ಟಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...