Home Latest News ಮತ್ತೆ ಭೀತಿ ಹುಟ್ಟಿಸಿದ ಬೀಟಮ್ಮ ಅಂಡ್ ಟೀಂ : ಕಾಫಿ ಬಾಳೆ ತೋಟಗಳಿಗೆ ಲಗ್ಗೆ
Latest News

ಮತ್ತೆ ಭೀತಿ ಹುಟ್ಟಿಸಿದ ಬೀಟಮ್ಮ ಅಂಡ್ ಟೀಂ : ಕಾಫಿ ಬಾಳೆ ತೋಟಗಳಿಗೆ ಲಗ್ಗೆ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರಿನ ಮಲೆನಾಡು ಭಾಗಕ್ಕೆ ಬೀಟಮ್ಮ ಮತ್ತು ಆನೆಗಳ ತಂಡ ಲಗ್ಗೆ ಇಟ್ಟಿರುವುದು ಜಿಲ್ಲೆಯ ಮಲೆನಾಡಿನ ಭಾಗದಲ್ಲಿ ಬಾರಿ ಆತಂಕಕ್ಕೆ ಕಾರಣವಾಗಿದೆ. ಕಾಫಿ ತೋಟ ಸೇರಿದಂತೆ ಕೃಷಿ ಜಮೀನುಗಳ ಮೇಲೆ ದಾಳಿ ಮಾಡುತ್ತಿರುವ ಆನೆಗಳ ಗುಂಪು ಕಾಫಿ ತೋಟದ ಮಾಲೀಕರು ಕಂಗಾಲಾಗುವಂತೆ ಮಾಡಿದೆ.

ಕಳೆದ ಆರು ಏಳು ತಿಂಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಹಾಗೂ ಚಿಕ್ಕಮಗಳೂರು ತಾಲೂಕಿನ ಹಲವು ಗ್ರಾಮಗಳಲ್ಲಿ ತೋಟಗಳನ್ನು ಮಾಡುವ ಮೂಲಕ ರೈತರು ಹಾಗೂ ಕಾಫಿ ಬೆಳೆಗಾರರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಆದರೆ ಇದೀಗ ಮತ್ತೆ ಜಿಲ್ಲೆಗೆ ಬೀಟಮ್ಮ ಮತ್ತು ಆನೆಗಳ ತಂಡ ಆಗಮಿಸಿರುವುದರಿಂದ ಭಯಗೊಳ್ಳುವಂತೆ ಆಗಿದೆ.

ಚಿಕ್ಕಮಗಳೂರು ತಾಲೂಕಿನ ತುಡುಕೂರು ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಲೀಲಾ ಜಾಲವಾಗಿ ಕಾಫಿ ತೋಟಗಳಿಗೆ ನುಗ್ಗಿ ದಾಳಿ ಮಾಡುತ್ತಿರುವ ಕಾಡಾನೆಗಳು ಅಪಾರ ಪ್ರಮಾಣದ ಬೆಳೆ ನಾಶಕ್ಕೆ ಕಾರಣವಾಗಿದೆ.

ಆನೆಗಳು ಕಾಫಿ ತೋಟಕ್ಕೆ ನುಗ್ಗಿದ ಪರಿಣಾಮ ಆತಂಕಗೊಂಡಿರುವ ಕಾಫಿ ಕಾರ್ಮಿಕರು ತೋಟದ ರಸ್ತೆಯಲ್ಲಿ ಕಾಫಿ ಬೀಜಗಳನ್ನು ಚೆಲ್ಲಾಡಿಕೊಂಡು ಓಡಿ ಹೋಗಿರುವ ಘಟನೆಯೂ ಸಂಭವಿಸಿದೆ.

ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳೀಯ ಅರಣ್ಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಆಲ್ದೂರು ವ್ಯಾಪ್ತಿಯ ಹತ್ತಾರು ಗ್ರಾಮಗಳ ಜನರಿಗೆ ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ,...