Home Latest News ಚಿಕ್ಕಮಗಳೂರಿನ ಹೆಮ್ಮೆಯ ಗೊ.ರು.ಚ ಮಂಡ್ಯ ಸಾಹಿತ್ಯ ಸಮ್ಮೇಳನಾಧ್ಯಕ್ಷ
Latest News

ಚಿಕ್ಕಮಗಳೂರಿನ ಹೆಮ್ಮೆಯ ಗೊ.ರು.ಚ ಮಂಡ್ಯ ಸಾಹಿತ್ಯ ಸಮ್ಮೇಳನಾಧ್ಯಕ್ಷ

Share
Share

ಚಿಕ್ಕಮಗಳೂರು : ಮಂಡ್ಯದಲ್ಲಿ ಡಿಸೆಂಬರ್ 20 ನೇ ತಾರೀಖಿನಿಂದ ಮೂರು ದಿನಗಳ ಕಾಲ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗೊಂಡೇದಹಳ್ಳಿ ರುದ್ರಪ್ಪ ಚನ್ನಬಸಪ್ಪ ಸರ್ವಾನುಮತದಿಂದ ಅಯ್ಕೆಯಾಗಿದ್ದಾರೆ. ಗೊ,ರು,ಚ ಎಂದೇ ನಾಡಿನಾದ್ಯಂತ ಚಿರಪರಿಚಿತರಾಗಿರುವ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಗೊಂಡೇದಹಳ್ಳಿಯ 96 ವಯಸ್ಸಿನ ಗೊ,ರು,ಚ ಶಿಕ್ಷಕರಾಗಿ ವೃತ್ತಿ ಆರಂಭಿಸಿ ವಾರ್ತಾ ಇಲಾಖೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯಲ್ಲಿ ಸೇವೆ ಸಲ್ಲಿಸಿದವರು.

ತರೀಕೆರೆ ತಾಲ್ಲೂಕಿನಿಂದ ಆರಂಭವಾದ ಸಾಹಿತ್ಯ, ವಚನ ಸಾಹಿತ್ಯ ಮತ್ತು ಜಾನಪದ ಸಾಹಿತ್ಯ ನಾಡಿನಾದ್ಯಂತ ತಲುಪಿವೆ. 1967 ರಲ್ಲಿ ತರೀಕೆರೆಯಲ್ಲಿ ನಡೆದ “ವಿಶ್ವ ಜಾನಪದ ಸಮ್ಮೇಳನದ ರೂವಾರಿಗಳಾಗಿದ್ದ ಇವರ ಜೊತೆಗೆ ಜಾನಪದ ಗಾರುಡಿಗ ಕೆ.ಆರ್. ಲಿಂಗಪ್ಪರವರ ಶ್ರಮದಿಂದ ತಂದ ಜಾನಪದ ಅಕರ ಗ್ರಂಥ ” ಹೊನ್ನ ಬಿತ್ತೇವು ಹೊಲಕ್ಕೆಲ್ಲಾ” ಒಂದು ದಾಖಲೆಯಾಗಿದೆ. ನಾಡಿನಲ್ಲಿ ದೊರೆಯಬಹುದಾದ ಎಲ್ಲಾ ಪ್ರಶಸ್ತಿಗಳನ್ನು ಮೂಡಿಗೆರಿಸಿಕೊಂಡಿರುವ ಇವರು ಚಿಕ್ಕಮಗಳೂರು ಜಿಲ್ಲೆಯ ಸಾಹಿತಿಯಾಗಿ ಸಮ್ಮೇಳನದ ಅಧ್ಯಕ್ಷರಾಗಿರುವುದು ಇದೇ ಪ್ರಥಮ ಎಂಬ ದಾಖಲೆ ಕೂಡ ಸಲ್ಲುತ್ತದೆ.

ವಚನ ಸಾಹಿತ್ಯ, ಜಾನಪದ ಸಾಹಿತ್ಯದಲ್ಲಿ ಜೀವಮಾನವನ್ನು ಬೀಸೆಕಲ್ಲಿನಂತೆ ಜೀವನವನ್ನು ಸವೆಸಿರುವ ಇವರು ಅನೇಕ ಗ್ರಂಥಗಳನ್ನು ತಂದಿದ್ದು ಸಾಕ್ಷಿಕಲ್ಲು ಮತ್ತು ಬೆಳ್ಳಕ್ಕಿ ಹಿಂಡು ಬೆದ್ಯರವೋ ಹಾಗೂ ಬೆಂಗಳೂರಿನಿಂದ ಗೊಂಡೇದಹಳ್ಳಿ ಯವರೆಗೆ ಇವರ ಜೀವನ ಕಥನ ಸಾಕ್ಷಿಗುಡ್ಡೆಗಳು.
ರಾಜ್ಯ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾಗಿ ಪರಿಷತ್ ಹಳ್ಳಿ,ಹಳ್ಳಿ,ಮನೆ,ಮನೆ ತಲುಪಿದ್ದು ಕೂಡ ದಾಖಲೆ. 96 ವಯಸ್ಸಿನ ಗೊ,ರು,ಚ ಸಭೆಯಲ್ಲಿ ಮಾತನಾಡಲು ನಿಂತರೆ ಕಂಚಿನ ಕಂಠಕ್ಕೆ ಎಲ್ಲರೂ ತಲೆಬಾಗಿ ಕೈ ಮುಗಿಯುತ್ತಾರೆ. ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಯಾರಾಗುತ್ತಾರೆ ಎಂಬ ವಿವಾದಕ್ಕೆ ತೆರೆ ಎಳೆಯಲು ಅರ್ಹ ಸಮರ್ಥ, ಹಿರಿಯ ವಿದ್ವಾಂಸರಾದ ಗೂ,ರು,ಚ ಅಯ್ಕೆ ಸಮರ್ಥವಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...