Home Latest News ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ನಕಲಿ : ನಿಲುಗುಳಿ ಪದ್ಮನಾಭ
Latest News

ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ನಕಲಿ : ನಿಲುಗುಳಿ ಪದ್ಮನಾಭ

Share
Share

ಚಿಕ್ಕಮಗಳೂರು : ವಿಕ್ರಂಗೌಡನ ಹತ್ಯೆ ತೀವ್ರ ಖಂಡನೀಯ ಸಿ.ಎಂ ಹಾಗೂ ಗೃಹ ಸಚಿವರು ಎನ್ ಕೌಂಟರ್ ಸಮರ್ಥಿಸಿ ಕೊಂಡಿರೋದು ದುರಾದೃಷ್ಟಕರ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ನಕ್ಸಲ್ ನಿಲಗುಳಿ ಪದ್ಮನಾಭ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ವಿಕ್ರಂ ಗೌಡನ ಹತ್ಯೆ ಅತ್ಯಂತ ಖಂಡನೀಯವಾಗಿದ್ದು ಯಾರು ಅದನ್ನು ಒಪ್ಪುವಂತದ್ದಲ್ಲ, ಸತ್ಯವನ್ನು ತಿಳಿದುಕೊಳ್ಳದೆ ಒಮ್ಮುಖ ವರದಿ ನೋಡಿ ಹತ್ಯೆಯ ಸಮರ್ಥನೆ ಮಾಡಿಕೊಳ್ಳುತ್ತಿರುವುದು ಯಾರೂ ಕೂಡ ಒಪ್ಪುಲ್ಲ. ಪೊಲೀಸರ ಎನ್ ಕೌಂಟರ್ ಕಥೆಯನ್ನು ಎನ್ಕೌಂಟರ್ ಗೊತ್ತಿರೋರು ಯಾರೂ ಕೂಡ ಒಪ್ಪಿಕೊಳ್ಳುವುದಿಲ್ಲ. ಇದು ಪ್ರಜಾತಂತ್ರವಾದಿಯೂ ಒಪ್ಪುವ ವಿಚಾರವೇ ಅಲ್ಲ. ಹತ್ಯೆ ಕಪೋಲ ಕಲ್ಪಿತವಾಗಿ ಸೃಷ್ಟಿ ಮಾಡಿರುವ ಎನ್ಕೌಂಟರ್. ಎಲ್ಲೋ ಹಿಡಿದು ಹಿಂಸೆ ನೀಡಿ ಸಾಯಿಸಿ ಕೊನೆಗೆ ಪೀತಬೈಲಿಗೆ ತಂದು ಮೃತ ದೇಹ ಹಾಕಿದ್ದಾರೆ.

ಇದರ ಜೊತೆಗೆ ಹತ್ಯೆಯ ಬಗ್ಗೆ ಮಾಧ್ಯಮದವರಿಗೂ ತಿಳಿಯದಂತೆ ಯಾರಿಗೂ ಮುಖ ತೋರಿಸದೆ ಎಲ್ಲಾ ವಿಚಾರವನ್ನು ವಂಚಿಸಿದ್ದಾರೆ. ಆರೋಪಿಯನ್ನು ಕೊಲೆ ಮಾಡಿ ಎಂದು ಎಲ್ಲೂ ಕೂಡ ಸಂವಿಧಾನದಲ್ಲಿ ಹೇಳಿಲ್ಲ. ವಿಕ್ರಂ ಗೌಡ ಎನ್ ಕೌಂಟರ್ ಬಗ್ಗೆ ಕೂಲಂಕುಶ ನ್ಯಾಯಾಂಗ ತನಿಖೆ ಆಗಬೇಕೆಂದು ಮಾಜಿ ನಕ್ಸಲ್ ನಿಲಗುಳಿ ಪದ್ಮನಾಭ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...