Home Latest News ದತ್ತಪೀಠದ ಅರ್ಚಕ ರಾಜೀನಾಮೆ : ಕಾರಣವೇನು ಗೊತ್ತಾ ?
Latest News

ದತ್ತಪೀಠದ ಅರ್ಚಕ ರಾಜೀನಾಮೆ : ಕಾರಣವೇನು ಗೊತ್ತಾ ?

Share
Share

ಚಿಕ್ಕಮಗಳೂರು : ವಿವಾದಿತ ಇನಾಮ್ ದತ್ತಾತ್ರೇಯ ಪೀಠಕ್ಕೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕ ಮಾಡಿದ್ದ ಇಬ್ಬರು ಅರ್ಚಕರಲ್ಲಿ ಶೃಂಗೇರಿಯ ಶ್ರೀಧರ್ ರಾಜೀನಾಮೆ ನೀಡಿದ್ದಾರೆ. ವಯಕ್ತಿಕ ಕಾರಣಗಳನ್ನ ಕೊಟ್ಟು ಮುಜರಾಯಿ ಇಲಾಖೆಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಸದ್ಯ ದತ್ತಪೀಠದಲ್ಲಿ ತೀರ್ಥಹಳ್ಳಿ ಮೂಲದ ಶಿವರಾಮ್ ಭಟ್ ಕಾರ್ಯ ನಿರ್ವಹಿಸಿತ್ತಿದ್ದಾರೆ. ಅವರ ಜೊತೆಗೆ ಬಿಸಗ್ನಿ ಮಠದ ಮಹೇಶ್ ಅರ್ಚಕರಾಗಿ ನೇಮಿಸಲಾಗಿದೆ.

ಹೈಕೋರ್ಟ್ ನಿರ್ದೇಶನದಂತೆ ಈ ಹಿಂದೆ ಇಬ್ಬರು ಅರ್ಚಕರನ್ನು ನೇಮಿಸಲಾಗಿತ್ತು ಆದರೆ ವರ್ಷ ಕಳೆದರೂ ಸರಿಯಾಗಿ ದಸ್ತಕ್ ಅಂದರೆ ಗೌರವಧನ ಸರಿಯಾಗಿ ನೀಡುತ್ತಿಲ್ಲ ಎಂಬ ಆರೋಪ ಕೂಡ ಇತ್ತು. ಈ ಮಧ್ಯೆ ಅರ್ಚಕರಾದ ಶ್ರೀಧರ್ ತಮ್ಮ ಕೆಲಸದಿಂದ ನಿರ್ಗಮನ ಹೊಂದಿದ್ದಾರೆ. ಕೌಟುಂಬಿಕ ಕಾರಣಗಳನ್ನು ನೀಡಿ ರಾಜೀನಾಮೆ ನೀಡಿದ್ದರೂ ಕೂಡಾ ರಾಜ್ಯ ಸರ್ಕಾರ ಮುಜರಾಯಿ ಇಲಾಖೆ ಅವರನ್ನು ನಡೆಸಿಕೊಂಡ ರೀತಿಯ ಬಗ್ಗೆ ಸಾಕಷ್ಟು ಬೇಸರ ವ್ಯಕ್ತಪಡಿಸುತ್ತಿದ್ರು ಇದೀಗ ದತ್ತಗುಹೆಯಲ್ಲಿ ಕುಂಕುಮ ಹಚ್ಚಿದ ಪ್ರಕರಣ ಹಸಿಯಾಗಿರುವ ನಡುವೆ ಅರ್ಚಕರ ಬದಲಾವಣೆ ದತ್ತ ಭಕ್ತರಲ್ಲಿ ಗೊಂದಲ ಹಾಗೂ ಬೇಸರ ಮೂಡಿರುವುದು ಮಾತ್ರ ಸುಳ್ಳಲ್ಲ

Share

Leave a comment

Leave a Reply

Your email address will not be published. Required fields are marked *

Don't Miss

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ ಪಟ್ಟಣದ ಗುಣವಂತೆ ಗ್ರಾಮದಲ್ಲಿರುವ ಕಸ ಹಾಗೂ ಮಲ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ ವಿಮೆಗೆ ನೋಂದಣಿ ಹೆಚ್ಚು ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು....

Related Articles

ESA ಕರಡು ಅಧಿಸೂಚನೆ: ಭೌತಿಕ ಸರ್ವೆ ಬಳಿಕವೇ ಅಂತಿಮ ಅಧಿಸೂಚನೆಗೆ ಒತ್ತಾಯ

ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ (ESA) ಕುರಿತ 7ನೇ ಕರಡು ಅಧಿಸೂಚನೆಯಲ್ಲಿ ಚಿಕ್ಕಮಗಳೂರು...

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿ.ಪಿ.ಐ. ಪ್ರತಿಭಟನೆ

ಚಿಕ್ಕಮಗಳೂರು: ನಿವೇಶನ ರಹಿತ ಬಡ ಕೂಲಿ ಕಾರ್ಮಿಕರಿಗೆ ನಿವೇಶನ ಒದಗಿಸುವುದು, ಎಸ್‌ಐಆರ್‌ ಪರಿಷ್ಕರಣೆಯಲ್ಲಿನ ಲೋಪ ಸರಿಪಡಿಸುವುದು...

ಚಲಿಸುತ್ತಿದ್ದ ಎಲೆಕ್ಟಿಕ್ ಬೈಕ್‌ನಲ್ಲಿ ಏಕಾಏಕಿ ಬೆಂಕಿ

ಕಡೂರು : ಚಲಿಸುತ್ತಿದ್ದ ಎಲೆಕ್ಟಿಕ್ ಬೈಕ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ...

ಅಪಪ್ರಚಾರಕ್ಕೆ ನೊಂದ ಯುವಕ-ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ಸಮೀಪ ಯುವಕ-ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಮೃತರನ್ನು...