Home namma chikmagalur ಒಕ್ಕಲಿಗರ ಹೆಮ್ಮೆಯ ಬೆಳ್ಳಿ ಭವನ ಲೋಕಾರ್ಪಣೆಗೆ ಸಿದ್ದ
namma chikmagalur

ಒಕ್ಕಲಿಗರ ಹೆಮ್ಮೆಯ ಬೆಳ್ಳಿ ಭವನ ಲೋಕಾರ್ಪಣೆಗೆ ಸಿದ್ದ

Share
Share

ಚಿಕ್ಕಮಗಳೂರು : ಜಿಲ್ಲಾ ಒಕ್ಕಲಿಗರ ಸಂಘವು 25 ವರ್ಷಗಳ ಹಿಂದೆ ವಿಜಯಪುರದಲ್ಲಿ ಕಲ್ಯಾಣ ಮಂಟಪ ನಿರ್ಮಾಣ ಮಾಡಿದ್ದ ಸವಿನೆನಪಿಗಾಗಿ “ಬೆಳ್ಳಿ ಭವನ ” ವನ್ನು ಬಾಲಗಂಗಾಧರ ಸ್ವಾಮೀಜಿ ವೃತ್ತದಲ್ಲಿ ವಾಣಿಜ್ಯ ಸಂಕೀರ್ಣ (ಮಾಲ್ )ನಿರ್ಮಿಸಿ ಹಿರಿಯರನ್ನು ಸ್ಮರಿಸುವ ಕೆಲಸ ಎಲ್ಲರೂ ಮೆಚ್ಚುವಂತದ್ದು.

1937 ರಲ್ಲಿ ತಾಲ್ಲೂಕು ಒಕ್ಕಲಿಗರ ಸಂಘ ಪ್ರಾರಂಭವಾಗಿ 80_90 ರ ದಶಕದಲ್ಲಿ ಹಿರಿಯರ ದೂರದೃಷ್ಟಿ ದಾನ ಮತ್ತು ಶ್ರಮದಿಂದ ಜಿಲ್ಲೆಯಲ್ಲಿ ಬೃಹತ್ ಕಲ್ಯಾಣ ಮಂಟಪ ನಿರ್ಮಾಣ ಮಾಡಲಾಯಿತು.
ಪ್ರಸ್ತುತ ಟಿ.ರಾಜಶೇಖರ ಅಧ್ಯಕ್ಷತೆಯಲ್ಲಿ ಪದಾಧಿಕಾರಿಗಳು ಮತ್ತು ಹಿರಿಯರ ಮಾರ್ಗದರ್ಶನದಲ್ಲಿ ಹತ್ತು ಕೋಟಿ ವೆಚ್ಚದ ಕಟ್ಟಡ ನಾಳೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ಯವರ ಸಾನಿಧ್ಯದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸೇರಿದಂತೆ ಹಲವು ಜನಪ್ರತಿನಿಧಿಗಳು ಭಾಗವಹಿಲಿದ್ದಾರೆ.
1937 ರಲ್ಲಿ ಒಕ್ಕಲಿಗರ ವಿದ್ಯಾರ್ಥಿಗಳು ಬಾಳೆಹಳ್ಳಿ ನಾಗಮ್ಮ ಹೆಗ್ಗಡತಿಯವರ ನಿವಾಸದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಮಾತನಾಡಿಸಲು ಉಳಿಕೆರೆ ದೇವೇಗೌಡ ಸೇರಿದಂತೆ ಹಲವು ಹಿರಿಯರು ಬಂದು ಹೋಗುತ್ತಿದ್ದರು ಅಲ್ಲಿದ್ದ ಒಕ್ಕಲಿಗರ ವಿದ್ಯಾರ್ಥಿ ನಿಲಯ ಎಂಬ ಬೋರ್ಡ್ ತಾಲ್ಲೂಕು ಒಕ್ಕಲಿಗರ ಸಂಘ ಪ್ರಾರಂಭವಾಗಲು ಕಾರಣವಾಯಿತು ಉಳಿಕೆರೆ ದೇವೇಗೌಡ ಅಧ್ಯಕ್ಷರಾದರೆ ಕಾರ್ಯದರ್ಶಿಯಾಗಿ ಕಳವಾಸೆ ಅಣ್ಣೇಗೌಡರಾಗಿದ್ದರು ಮುಂದೆ 1962 ರಲ್ಲಿಜಿಲ್ಲಾಒಕ್ಕಲಿಗರ ಸಂಘವಾಗಿ ಇಂದು ಬೃಹತ್ ಒಕ್ಕಲಿಗರ ಸಂಘವಾಗಿ ಬೆಳೆದಿರುವುದು ದಾಖಲೆ.ಸಣ್ಣ ಸಿದ್ದೇಗೌಡ ಅಧ್ಯಕ್ಷರಾಗಿ ಸಣ್ಣ ತಮ್ಮೇಗೌಡರು ಕಾರ್ಯದರ್ಶಿ ಯಾಗಿ ಹಲವು ಹಿರಿಯರ ಶ್ರಮದಿಂದ 1999 ರಲ್ಲಿ ವಿಜಯಪುರದಲ್ಲಿ ನಿರ್ಮಾಣ ಮಾಡಿದ ಕಲ್ಯಾಣ ಮಂಟಪ ಸ್ಮರಣೀಯ.
ಒಕ್ಕಲಿಗರ ಸಂಘಕ್ಕೆ ಜಾಗ ಪಡೆದ ಹೋರಾಟ ಕೂಡ ಮರೆಯುವಂತಿಲ್ಲ ಜಾನಪದ ವಿದ್ವಾಂಸ ಜಿಲ್ಲಾಧಿಕಾರಿ ಹೆಚ್.ಎಲ್.ನಾಗೇಗೌಡ ಸಹಕಾರವನ್ನು ಸ್ಮರಿಸುತ್ತಾರೆ.
1962 ರಲ್ಲಿ ಅಂದಿನ ಮುಖ್ಯಮಂತ್ರಿ ನಿಜಲಿಂಗಪ್ಪ ವಿದ್ಯಾರ್ಥಿ ನಿಲಯಕ್ಕೆ ಅಡಿಗಲ್ಲು ಹಾಕಿ ಅವರೇ ಉದ್ಘಾಟಿಸಿದ್ದು ಮತ್ತು 1999 ರಲ್ಲಿ ಮುಖ್ಯಮಂತ್ರಿ ಜೆ.ಹೆಚ್.ಪಟೇಲರು ಕಲ್ಯಾಣ ಮಂಟಪ ಉದ್ಘಟಿಸಿದ್ದು ಕೂಡ ವಿಶೇಷ ಎನ್ನುತ್ತಾರೆ ನಿರ್ದೇಶಕ ಚಂದ್ರಪ್ಪ.
ಜನಪರ ಮತ್ತು ವಿಧ್ಯಾರ್ಥಿಗಳ ಹಿತಕಾಯುವಲ್ಲಿ ಒಕ್ಕಲಿಗರ ಸಂಘ ಶ್ರಮಿಸುತ್ತಿರುವುದನ್ನು ಅಭಿನಂದಿಸಲೇ ಬೇಕು ಸಂಘವು ಇನ್ನಷ್ಟು ಮತ್ತಷ್ಟು ಉನ್ನತವಾಗಿ ಬೆಳೆಯಲಿ ಬೆಳಗಲಿ.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...