Home Political News ಎಲ್ಲಾ ವಕ್ಫ್ ಆಸ್ತಿ ಅಂದ್ರೆ ಜನ ಕಾಲಲ್ಲಿರೋದು ಕೈಗೆ ತಗೋತಾರೆ : ಸಿ.ಟಿ ರವಿ
Political News

ಎಲ್ಲಾ ವಕ್ಫ್ ಆಸ್ತಿ ಅಂದ್ರೆ ಜನ ಕಾಲಲ್ಲಿರೋದು ಕೈಗೆ ತಗೋತಾರೆ : ಸಿ.ಟಿ ರವಿ

Share
Share

ಚಿಕ್ಕಮಗಳೂರು : ಕಾಂಗ್ರೆಸಿಗಿಂತ ಬಿಜೆಪಿ ಅವಧಿಯಲ್ಲೆ ಹೆಚ್ಚು ವಕ್ಫ್ ನೋಟಿಸ್ ನೀಡಿದ್ದಾರೆಂಬ ಹೇಳಿಕೆ ವಿಚಾರ ದಿನದಿಂದ ದಿನಕ್ಕೆ ತೀವ್ರ ಸ್ವರೂಪದ ರಾಜಕೀಯ ತಿರುವು ಪಡೆಯುತ್ತಿದೆ. ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಸಿಟಿ ರವಿ ದಾನದ ಆಸ್ತಿ ಬೇರೆ, ಕಂಡ ಕಂಡವರ ಆಸ್ತಿ ವಕ್ಫ್ ಬೋರ್ಡಿಗೆ ಬರೆಯೋದು ಬೇರೆ, ದಾನದ ಆಸ್ತಿಯನ್ನು ಪ್ರಭಾವಿಗಳು ದುರ್ಬಳಕೆ ಮಾಡಿಕೊಂಡಿರುವುದು ಅನ್ವರ್ ಮಾನಪ್ಪಾಡಿ ವರದಿಯಲ್ಲಿ ಉಲ್ಲೇಖವಿದೆ ಎಂದು ಸಿ.ಟಿ ರವಿ ಹೇಳಿದ್ದಾರೆ.

ನಾವು ಆ ಆಸ್ತಿಯನ್ನು ಉಳಿಸಿ ಎಂದು ಹೇಳಿದ್ದು ಹೌದು, ಈಗ ಎಲ್ಲಾ ನಂದು-ನಂದು ಅಂತ ಕಂಡ ಕಂಡವರ ಆಸ್ತಿಗೆ ಕಣ್ಣಾಕುವ ಕೆಲಸ ಆಗುತ್ತಿದೆ. ದೇವಸ್ಥಾನ ವಿಧಾನಸೌಧ ಸಂಸತ್ತು ಎಲ್ಲಾ ನಮ್ದು ಅನ್ನೋದು ಬಕಾಸುರ ಸಂಸ್ಕೃತಿ ಅಂತ ಹೇಳಿದ್ದು ನಾನು. ಜನ ಬರಿ ಬಡಿಗೆ ತೆಗೆದುಕೊಳ್ಳಲ್ಲ, ಬಡಿಗೆ ಜೊತೆ ಕಾಲಿನಲ್ಲಿ ಇರೋದನ್ನ ತೆಗೆದುಕೊಳ್ಳುತ್ತಾರೆ. ರೈತರ ಆಸ್ತಿ ದೇವಸ್ಥಾನ, ಸ್ಮಶಾನ, ಶಾಲೆ, ಆಸ್ಪತ್ರೆ, ಕೆರೆಯನ್ನು ಅತಿಕ್ರಮಿಸಿಕೊಳ್ಳೋಕೆ ಯಾವತ್ತು ಆದೇಶಿಸಲ್ಲ. 1500 ವರ್ಷದ ದೇವಸ್ಥಾನವನ್ನು ಅತಿಕ್ರಮಿಸಿ ಎಂದು ಬಿಜೆಪಿ ಯಾವತ್ತಾದರೂ ಹೇಳಿತ್ತಾ ಎಂದು ಪ್ರಶ್ನಿಸಿದರು.

ರೈತರ 18,000 ಎಕರೆಯನ್ನ ದಾಖಲೆ ಇಲ್ಲದೆ ವಕ್ಫ್ ಬೋರ್ಡಿಗೆ ಮಾಡುವುದಕ್ಕೆ ನಾವು ಎಂದಾದರೂ ಹೇಳಿದ್ವಾ… ದುರ್ಬಳಕೆ ಆಗಿರೋ ದಾನದ ಆಸ್ತಿಯನ್ನು ತೆಗೆದುಕೊಳ್ಳುವುದಕ್ಕೆ ನಾವು ಈಗಲೂ ಬದ್ದ, ದಾನ ಬೇರೆ ಕಂಡವರ ಆಸ್ತಿಗೆ ಕಣ್ಣು ಹಾಕೋದು ಬೇರೆ ಎಂದು ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...