Home Latest News ಕಾಡಾನೆಗಳ ಹಾವಳಿ ತಪ್ಪಿಸಲು ಒತ್ತಾಯಿಸಿ ನಾಳೆ ಅರಣ್ಯ ಇಲಾಖೆ ಮುತ್ತಿಗೆ
Latest News

ಕಾಡಾನೆಗಳ ಹಾವಳಿ ತಪ್ಪಿಸಲು ಒತ್ತಾಯಿಸಿ ನಾಳೆ ಅರಣ್ಯ ಇಲಾಖೆ ಮುತ್ತಿಗೆ

Share
Share

ಚಿಕ್ಕಮಗಳೂರು : ಬೀಟಮ್ಮ ಕಾಡಾನೆಗಳ ಗ್ಯಾಂಗ್ ಅನ್ನು ಕೂಡಲೇ ಸ್ಥಳಾಂತರ ಮಾಡುವಂತೆ ಒತ್ತಾಯಿಸಿ ನಾಳೆ ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ತಿಳಿಸಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ನಗರದ ತಾಲೂಕು ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಮುತ್ತಿಗೆ ಹಾಕಲಾಗುವುದು ಎಂದು ಅವರು ತಿಳಿಸಿದ್ದಾರೆ. ‌

ಕಾಡಾನೆಗಳಿಂದ ಇಷ್ಟೊಂದು ಹಾನಿ ಸಂಭವಿಸಿದ್ದರೂ ಇದುವರೆಗೂ ಜಿಲ್ಲಾಧಿಕಾರಿ ರೈತರ ಜೊತೆಯಾಗಲಿ ಸಂತ್ರಸ್ತರ ಜೊತೆಯಾಗಲಿ ಯಾವುದೇ ಸಭೆಯನ್ನು ಕರೆದಿಲ್ಲ ಕನಿಷ್ಟ ಸಮಸ್ಯೆ ಕೇಳಿಲ್ಲ ಎಂದು ಆರೋಪಿಸಿರುವ ಗುರುಶಾಂತಪ್ಪ ಇದುವರೆಗೂ ಆನೆ ದಾಳಿಯಿಂದ ನಷ್ಟ ಉಂಟಾದವರೆಗೆ 9 ಕೋಟಿ ಪರಿಹಾರ ನೀಡಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ ಆದರೆ ಇದು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ ಎಂದರು.

ಇದೇ ವೇಳೆ ಮಾತನಾಡಿದ ಅವರು ಮಳಲೂರು, ದಂಬದಹಳ್ಳಿ ಬಿಗ್ಗನಹಳ್ಳಿ ತಗಡೂರು ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಕಾಫಿ ಭತ್ತ ಶುಂಠಿ ಜೋಳದ ಬೆಳೆಗಳು ನಾಶ ವಾಗಿದ್ದು ಕೇವಲ ದಯಾ ಪರಿಹಾರ ಕೊಟ್ಟರೆ ಸಾಲದು ಬದಲಾಗಿ ಈಗ ಕೊಡುತ್ತಿರುವುದಕ್ಕೆ ದುಪ್ಪಟ್ಟು ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...