Home Latest News ಚಿಕ್ಕಮಗಳೂರಿನ ಬಿಜೆಪಿ ಭೀಷ್ಮನಿಗೆ ಇದೆಂತಾ ದುಸ್ಥಿತಿ ಬಂತು
Latest News

ಚಿಕ್ಕಮಗಳೂರಿನ ಬಿಜೆಪಿ ಭೀಷ್ಮನಿಗೆ ಇದೆಂತಾ ದುಸ್ಥಿತಿ ಬಂತು

Share
Share

ಚಿಕ್ಕಮಗಳೂರು : ಕೇಸರಿ ಪಂಜೆ. ವೈಟ್ ಶರ್ಟ್. ಗಡ್ಡ-ಕೂದಲೆಲ್ಲಾ ಬಿಳಿ. ರಸ್ತೆ ಬದಿ ಕುಳಿತಿರುವ ಇವ್ರ ಹೆಸರು ವಿಠಲ್ ಆಚಾರ್ಯ. ವಯಸ್ಸು 92. ಮೂಲತಃ ಉಡುಪಿ ಜಿಲ್ಲೆಯವರು. ಆದ್ರೆ, ಕರ್ಮಭೂಮಿ ಕಾಫಿನಾಡು ಚಿಕ್ಕಮಗಳೂರು. ದಶಕಗಳಿಂದ ಇಲ್ಲೇ ನೆಲೆಯೂರಿರೋ ಇವರು ಆರ್.ಎಸ್.ಎಸ್. ಕಟ್ಟಾಳು. 7ನೇ ವಯಸ್ಸಿನಿಂದ 84ನೇ ವಯಸ್ಸಿನವರೆಗೆ ಸಂಘಕ್ಕಾಗಿ ಜೀವ ತೇಯ್ದಿದ್ದಾರೆ. 1975ರಲ್ಲಿ ಅಂದಿನ ಪ್ರಧಾನಿ ದೇಶದ ಮೇಲೆ ಎಮರ್ಜೆನ್ಸಿ ಹೇರಿದಾಗ ಅದರ ವಿರುದ್ಧ ಹೋರಾಡಿ ಯಡಿಯೂರಪ್ಪ, ಪಿ.ಜಿ.ಆರ್.ಸಿಂಧ್ಯಾ, ಶಂಕರಮೂರ್ತಿ, ಕಲ್ಲಡ್ಕ ಪ್ರಭಾಕರ್ ಭಟ್ ಜೊತೆ ಬೆಳಗಾವಿ-ಬಳ್ಳಾರಿ ಜೈಲಿನಲ್ಲಿ ದಿನ ಕಳೆದಿದ್ದಾರೆ. ಚಿಕ್ಕಮಗಳೂರು ನಗರಸಭೆ ಸದಸ್ಯರಾಗಿದ್ದ ಇವರು, ಜನಸಂಘದಿಂದ ವಿಧಾನಸಭೆ ಚುನಾವಣೆಗೂ ಸ್ಪರ್ಧಿಸಿದ್ದರು. ಕರ್ನಾಟಕದ ಅಯೋಧ್ಯೆ ಎಂದೇ ಕರೆಸಿಕೊಳ್ಳೋ ದತ್ತಪೀಠದ ಹೋರಾಟದಲ್ಲೂ ಸಿ.ಟಿ.ರವಿ, ಕಾರ್ಕಳ ಸುನೀಲ್ ಕುಮಾರ್ ಬೆನ್ನೆಲುಬಾಗಿ ನಿಂತವರು. ಆದರೆ, ಇಂದು ಬೀದಿಯಲ್ಲಿ ಜೀವನ ಕಳೆಯುತ್ತಿದ್ದಾರೆ. ನಾಲ್ಕು ಗಂಡು, ಒಂದು ಹೆಣ್ಣು ಮಗುವಿದ್ದು ಎಲ್ಲರೂ ಡಾಕ್ಟ್ರು-ಇಂಜಿನಿಯರ್. ಕೊಟ್ಯಾಂತರ ಆಸ್ತಿ ಇದ್ರು ಇಂದು ಅನಾಥರಾಗಿ ಸಂಧ್ಯಾಕಾಲವನ್ನ ಬೀದಿ ಬದಿ ಕಳೆಯುತ್ತಿದ್ದಾರೆ

92 ವರ್ಷದ ವಿಠಲ್ ಆಚಾರ್ಯ ಜೀವನದಲ್ಲಿ 107 ಪ್ರಕೃತಿ ಯಜ್ಞ ಮಾಡಿದ್ದಾರೆ. ಅದು ನಿಲ್ಲಬಾರದು ಅನ್ನೋದು ಇವ್ರ ಬಯಕೆ. ನಿಸ್ವಾರ್ಥವಾಗಿ ಪ್ರಕೃತಿಗೆ ಮಾಡುವ ಯಜ್ಞವದು. ಈ ಯಜ್ಞಕ್ಕೆ ಹಾಕುವ ವಸ್ತುಗಳು ಕಾರ್ಬನ್ ಡೈಆಕ್ಸೈಡ್ ಆದರೂ ಕೂಡ ಪ್ರಕೃತಿ ಅದನ್ನ ಪಡೆದು ನಮಗೆ ಆಕ್ಸಿಜನ್ ನೀಡುತ್ತೆ. ಅದು ನಿಲ್ಲಬಾರದು ಅಂತ ಈ ಇಳಿವಯಸ್ಸಲ್ಲಿ ಹೋರಾಡ್ತಿದ್ದಾರೆ. ಇಂದಿನ ಪೀಳಿಗೆ ಜನರಿಗೆ ಆಸಕ್ತಿ ಇಲ್ಲ. ಯಜ್ಞ ನಿಲ್ಲಬಾರದು ಅಂತ ಬ್ಯಾಂಕಿನಲ್ಲಿ 25 ಲಕ್ಷ ಹಣವಿಟ್ಟು ಪ್ರತಿವರ್ಷ ಯಜ್ಞ ಮಾಡ್ತಿದ್ರಂತೆ. ಆದ್ರೆ, ತಾನು ಸತ್ತ ನಂತರವೂ ಯಜ್ಞ ನಿಲ್ಲಬಾರದು ಅಂತ ಮಕ್ಕಳಿಗೆ ಆಸ್ತಿ ಮಾಡಿ, ಅವರಿಗೊಂದು ದಡ ಮುಟ್ಸಿ ಯಜ್ಞಕ್ಕೆ ಅಂತ ಒಂದು ಸೈಟ್ ಇಟ್ಕೊಂಡಿದ್ದರು. ಆ ಸೈಟ್ ಮಾರಿ ಅಥವ ಅದರಲ್ಲಿ ಕಾಂಪ್ಲೆಕ್ಸ್ ಕಟ್ಟಿ ಟ್ರಸ್ಟ್ ನಿರ್ಮಿಸಿ ಬಂದ ಹಣದಲ್ಲಿ ಯಜ್ಞ ನಡೆಸಬೇಕು ಅನ್ನೋದು ಇವ್ರ ಬಯಕೆ. ಹೋರಾಟ. ಕೊನೆ ಆಸೆ. ಆದರೆ, ಇವರಿಗೆ ಹೆತ್ತಮಕ್ಕಳೇ ಮೋಸ ಮಾಡಿದ್ದಾರಂತೆ. ಮಕ್ಕಳೇ ಮೋಸ ಮಾಡಿದ್ದಾರೆಂದು ಅವರ ಅನ್ನ ನನಗೆ ಬೇಡ ಅಂತ ಮನೆ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ಮಾಡ್ತಿದ್ದಾರೆ.

ಒಟ್ಟಾರೆ ಇವ್ರಿಗೆ ಇರೋ ಮಕ್ಕಳೆಲ್ಲರೂ ಸಿರಿವಂತರೆ, ಆದರೂ, ಈ ಇಳಿವಯಸ್ಸಿನಲ್ಲಿ ಮಕ್ಕಳ ಮನೆಗೆ ಹೋಗದೇ ಬೇರೆಡೆ ಇದ್ದು 84 ವರ್ಷ ಆಗೋವರೆಗೂ ಹೇಗೋ ಪ್ರಕೃತಿ ಯಜ್ಞ ಮಾಡಿದ್ದಾರೆ. ಆದರೀಗ ತಾನೇ ಕಷ್ಟ ಪಟ್ಟು ಮಾಡಿದ್ದ ಜಾಗ ಇಲ್ಲ. ಆ ಜಾಗ ಟ್ರಸ್ಟ್‍ಗೆ ಕೊಡಲೇಬೇಕು. ಪ್ರತಿವರ್ಷ ಪ್ರಕೃತಿಯಜ್ಞ ನಡೆಯಲೇಬೇಕು. ನಿಲ್ಲಬಾರದು ಅಂತ ಬೀದಿಯಲ್ಲಿ ಕುಳಿತು ಹೋರಾಟ ಮಾಡುವಂತಾಗಿರೋದು ನಿಜಕ್ಕೂ ದುರಂತ.

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...