Home Latest News ಕಾಡಾನೆ ವಿರುದ್ಧ ಸಿಡಿದೆದ್ದ ರೈತ ಸಂಘ : ಡಿಎಫ್ಓ ಕಚೇರಿಗೆ ಮುತ್ತಿಗೆ
Latest News

ಕಾಡಾನೆ ವಿರುದ್ಧ ಸಿಡಿದೆದ್ದ ರೈತ ಸಂಘ : ಡಿಎಫ್ಓ ಕಚೇರಿಗೆ ಮುತ್ತಿಗೆ

Share
Share

ಚಿಕ್ಕಮಗಳೂರು : ಕಾಡಾನೆ ಬೀಟಮ್ಮ ಗ್ಯಾಂಗ್ ಸ್ಥಳಾಂತರಕ್ಕೆ ಒತ್ತಾಯಿಸಿ ಅರಣ್ಯ ಇಲಾಖೆಯ ಡಿಎಫ್ ಓ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ರೈತ ಸಂಘ ಇಂದು ಪ್ರತಿಭಟನೆ ನಡೆಸಿತು. ಇದಕ್ಕೂ ಮೊದಲು ನಗರದ ತಾಲೂಕು ಕಚೇರಿಯಿಂದ ಆಜಾದ್ ಪಾರ್ಕ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತೆಡೆ ನಡೆಸಿದರು.

ನಿರಂತರ ಆನೆ ಹಾವಳಿಗೆ ಕಂಗೆಟ್ಟ ಮಲೆನಾಡಿಗರ ಆಕ್ರೋಶ ಇಂದು ಕಟ್ಟೆ ಹೊಡೆದಿತ್ತು, ಕರ್ನಾಟಕ ರೈತ ಸಂಘ ಇಂದು ಬೀದಿಗಿಳಿದು ಚಳುವಳಿ ನಡೆಸಿದ್ದು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮಾನವ ಸರಪಳಿ ನಡೆಸಿ ಅರಣ್ಯ ಇಲಾಖೆ ವಿರುದ್ಧ ಸಿಡಿದೆದ್ದಿದ್ದರು ನಂತರ ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲು ಮುಂದಾದ ರೈತರು ಡಿಎಫ್ಓ ಕಚೇರಿಗೆ ತೆರಳಿದರು.
ಚಿಕ್ಕಮಗಳೂರು ತಾಲೂಕಿನ ಮಲೆನಾಡು ಭಾಗದ ರೈತರಿಗೆ ಕಳೆದ ತಿಂಗಳಿನಿಂದ ಕಂಗಾಲಾಗಿದ್ದಾರೆ

26 ಆನೆಗಳ ಹಾವಳಿಯಿಂದ ಹೈರಾಣಾಗಿರೋ ಮಲೆನಾಡಿಗರಿಗೆ ಅಡಿಕೆ, ಕಾಫಿ-ಮೆಣಸು, ಬಾಳೆ-ಭತ್ತ ಯಾವ ಬೆಳೆಯನ್ನೂ ಬಿಡದೆ ಆನೆಗಳ ಹಿಂಡು ನಾಶಪಡಿಸುತ್ತಿವೆ
20 ದಿನದಲ್ಲಿ 30 ಲಕ್ಷಕ್ಕೂ ಅಧಿಕ ನಾನಾ ಬೆಳೆಗಳನ್ನು ನಾಶಪಡಿಸಿ ಇನ್ನೂ ಅಲ್ಲಿಯೇ ಬೀಡು ಬಿಟ್ಟಿರುವ ಬೀಟಮ್ಮ ಗ್ಯಾಂಗ್ ಕಾಫಿ ಗಿಡಗಳನ್ನ ಬುಡಸಮೇತ ಕಿತ್ತು ಹಾಕುತ್ತಿವೆ.
ಚಿಕ್ಕಮಗಳೂರು ನಗರದ ಸುತ್ತಳತೆಯಲ್ಲಿರೋ ಕಾಡಾನೆಗಳ ಹಿಂಡು ಇನ್ನೂ ಇದ್ದು ಕೂಡಲೇ ಆನೆ ಹಾವಳಿಗೆ ಬ್ರೇಕ್ ಹಾಕಬೇಕೆಂದು ರೈತರು ಆಗ್ರಹಿಸಿದ್ದಾರೆ. ಪ್ರತಿಭಟನೆ ನಂತರ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಸರ್ಕಾರ ಬೆಳೆಹಾನಿಗೆ ದಯಾಪರಿಹಾರ ಕೊಡ್ತೀವಿ ಅನ್ನುತ್ತೆ, 1 ಲಕ್ಷ ನಷ್ಟವಾಗಿದ್ರೆ ಕೇವಲ 5 ಸಾವಿರ ಕೊಟ್ರೆ ಆನೆ ಬಾಯಿಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗುತ್ತೆ. ವೈಜ್ಞಾನಿಕ ಪರಿಹಾರ ನೀಡಬೇಕು. ಆನೆ ಹಾವಳಿಗೆ ಶಾಶ್ವತ ಬ್ರೇಕ್ ಹಾಕಬೇಕು ಎಂದು ಒತ್ತಾಯಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...