ಚಿಕ್ಕಮಗಳೂರು: ದತ್ತಮಾಲಾ ಅಭಿಯಾನಕ್ಕೆ ರಜತ ಮಹೋತ್ಸವ ಹಿನ್ನೆಲೆಯಲ್ಲಿ ಈ ಬಾರಿಯ ದತ್ತ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ವಿಶ್ವ ಹಿಂದೂ ಪರಿಷತ್ ಬಜರಂಗದಳ ನಿರ್ಧರಿಸಿದೆ. ನಾಳೆ ಸಂಜೆ 7ಕ್ಕೆ ಗೆ ಚಿಕ್ಕಮಗಳೂರು ನಗರದ ಅಲಂಕಾರದ ಉದ್ಘಾಟನೆ ನಡೆಯಲಿದೆ ಎಂದು ಬಜರಂಗದಳ ಜಿಲ್ಲಾ ಸಹ ಸಂಚಾಲಕ ಶಾಮ್ ವಿ ಗೌಡ ತಿಳಿಸಿದ್ದಾರೆ.
ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ದತ್ತಮಾಲಾ ಅಭಿಯಾನ ಡಿಸೆಂಬರ್ 6 ರಿಂದ ಆರಂಭಗೊಳ್ಳಲಿದ್ದು, 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ದತ್ತ ಜಯಂತಿ ಉತ್ಸವವನ್ನು ಅದ್ದೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ. ಚಿಕ್ಕಮಗಳೂರಿನ ಪ್ರತಿ ಹಿಂದೂಖಹ ಮನೆ ಹಾಗೂ ಕಟ್ಟಡಗಳ ಮೇಲೆ ಕೇಸರಿ ಧ್ವಜವನ್ನು ಹಾರಿಸಿ, ನಗರದ ಎಲ್ಲಾ ವಾರ್ಡ್ಗಳಲ್ಲಿ ದತ್ತ ಜಯಂತಿ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಲಂಕಾರ ಮಾಡಲಾಗುವುದು.
ಕೇಸರಿ ಬಂಟಿಂಗ್ಸ್ ಹಾಗೂ ದ್ವಜಗಳಿಂದ ಇಡೀ ನಗರವನ್ನ ಕೇಸರಿಮಯಗೊಳಿಸಲಾಗುವುದು, ಜೊತೆಗೆ ಡಿಸೆಂಬರ್ 13ರಂದು ನಡೆಯುವ ಬೃಹತ್ ಶೋಭ ಯಾತ್ರೆ ಸಂಚರಿಸುವ ಮಾರ್ಗದಲ್ಲಿ ಸಂಪೂರ್ಣ ಕೇಸರಿಮಯ ಮಾಡಲಾಗುವುದು ಎಂದು ಶ್ಯಾಮ್ ತಿಳಿಸಿದ್ದಾರೆ. ಹಿಂದೂದು ಕಾರ್ಯಕರ್ತರಲ್ಲಿ ಧಾರ್ಮಿಕ ಭಾವನೆಗಳ ಜೊತೆ ಆಧ್ಯಾತ್ಮಿಕ ಭಾವನೆಗಳನ್ನು ಜೋಡಿಸುವ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
Leave a comment