Home Latest News ವಾಮಮಾರ್ಗದಲ್ಲಿ ದೇವೆಂದ್ರ ನೌಕರರ ಸಂಘದ ಚುನಾವಣೆ ನಡೆಸುತ್ತಿದ್ದಾರೆ : ಹೇಮಂತ್ ಆರೋಪ
Latest News

ವಾಮಮಾರ್ಗದಲ್ಲಿ ದೇವೆಂದ್ರ ನೌಕರರ ಸಂಘದ ಚುನಾವಣೆ ನಡೆಸುತ್ತಿದ್ದಾರೆ : ಹೇಮಂತ್ ಆರೋಪ

Share
Share

ಚಿಕ್ಕಮಗಳೂರು : ವಾಮಮಾರ್ಗಗಳ ಮೂಲಕ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ ಅಕ್ರಮವಾಗಿ ಚುನಾವಣೆ ನಡೆಸಲು ಮುಂದಾಗಿದ್ದಾರೆ ಎಂದು ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಹೇಮಂತ್ ಗಂಭೀರವಾಗಿ ಆರೋಪಿಸಿದ್ದಾರೆ.

ನೂರಾರು ಸದಸ್ಯರನ್ನು ಅನರ್ಹಗೊಳಿಸಿ ಏಕ ಪಕ್ಷಿಯ ನಿರ್ಧಾರ ಕೈಗೊಂಡು ಮತ ಪಟ್ಟಿಯಲ್ಲಿ ಹೆಸರುಗಳೇ ಇಲ್ಲದಂತೆ ಮಾಡಿದ್ದಾರೆ. ಅಲ್ಲದೆ ಚುನಾವಣೆಯ ವೇಳೆ ನಿರ್ದೇಶಕರುಗಳಿಗೆ ಆಮಿಷ, ಬೆದರಿಕೆಯನ್ನು ಒಡ್ಡಿದ್ದು, ಹತಾಶರಾಗಿ ನಮ್ಮ ವಿರುದ್ಧ ಆಣೆ-ಪ್ರಮಾಣ ಹಾಗೂ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಹೇಮಂತ್ ಹಾಗೂ ತಂಡ ದೇವೇಂದ್ರಪ್ಪ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿದ್ದಾರೆ. ತಾವು ನಿರ್ಮಿಸಿರುವ ಲೇಔಟ್ ಸೈಟ್ಗಳ ಮಾರಾಟಕ್ಕೆ ಮತ್ತೊಮ್ಮೆ ಅಧ್ಯಕ್ಷರಾಗಲು ಮುಂದಾಗಿದ್ದಾರೆ. ಈ ಹಿಂದೆ ನೌಕರರ ಕ್ಯಾಂಟೀನ್ ನಿರ್ಮಿಸಲು ರಸೀದಿ ನೀಡದೆ ಲಕ್ಷಾಂತರ ರೂಪಾಯಿ ವಸೂಲಿ ಮಾಡಿದ್ದಾರೆ. ಸುಳ್ಳು ಭರವಸೆಗಳನ್ನು ನೀಡಿ ಹೆಸರಿಗೆ ತಕ್ಕಂತೆ ದೇವೇಂದ್ರ ಅವರ ಕುತಂತ್ರ ಹಲವು ನಡೆಸಿದ್ದಾರೆ ಎಂದು ಪ್ರಾಥಮಿಕ ಶಿಕ್ಷಕರ ಸಂಘದ ನೌಕರರ ತಾಲೂಕು ಅಧ್ಯಕ್ಷ ಕಿರಣ್ ಕುಮಾರ್ ಇದೆ ವೇಳೆ ಆರೋಪಿಸಿದರು.

ಜೂನಿಯರ್ ಕಾಲೇಜಿನ ಉಪನ್ಯಾಸಕ ಮಂಜುನಾಥ್ ಅಧ್ಯಕ್ಷ ಸ್ಥಾನದ ಆಕಾಂಕ್ಷೆ ಎಂದು ತಿಳಿದು ಅವರು ಸ್ಪರ್ಧಿಸಲೇಬಾರದೆಂದು ಅವರನ್ನು ಅನರ್ಹಗೊಳಿಸಿ ಪಾರದರ್ಶಕತೆ ಇಲ್ಲದೆ ಮತದಾರರ ಪಟ್ಟಿಯಿಂದಲೇ ಕೈ ಬಿಟ್ಟಿದ್ದಾರೆ. ಈ ಬಗ್ಗೆ ನೌಕರರ ಸಂಘದ ರಾಜ್ಯಾಧ್ಯಕ್ಷರಿಗೆ ಪತ್ರ ಬರೆದರು ಯಾವುದೇ ಉತ್ತರ ಇನ್ನೂ ಬಂದಿಲ್ಲ ಎಂದು ಮಂಜುನಾಥ್ ಆರೋಪಿಸಿದರು.

ಇಡೀ ಚುನಾವಣೆ ಪ್ರಕ್ರಿಯೆ ಬಗ್ಗೆ ಸಾಕಷ್ಟು ಅನುಮಾನಗಳು ಇದ್ದು, ಚುನಾವಣಾ ಅಧಿಕಾರಿಗೆ ಈಗಾಗಲೇ ದೂರು ನೀಡಿದ್ದೇವೆ. ಆದರೂ ಚುನಾವಣೆಗೆ ಇನ್ನೇನು ಎರಡು ದಿನ ಬಾಕಿ ಇರುವಂತೆ ಮತ್ತಷ್ಟು ಅಕ್ರಮಗಳು ನಡೆಯುವ ಸಂಶಯವಿದೆ. ಹಾಗಾಗಿ ಈ ಬಗ್ಗೆ ಚುನಾವಣಾ ಅಧಿಕಾರಿ ಗಮನಹರಿಸಬೇಕು ಎಂದು ಹೇಮಂತ್ ಮತ್ತು ತಂಡದವರು ಒತ್ತಾಯಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...