Home Latest News ನೌಕರರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಗೆದ್ದು ಬೀಗಿದ ದೇವೇಂದ್ರ
Latest News

ನೌಕರರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಗೆದ್ದು ಬೀಗಿದ ದೇವೇಂದ್ರ

Share
Share

ಚಿಕ್ಕಮಗಳೂರು : ಗುಡ್ಡದ ತುದಿಯಲ್ಲಿ ನಿಂತರೆ ಮಾತ್ರ ಮತ್ತೊಂದು ಗುಡ್ಡದ ತುದಿ ಕಾಣುವುದು. ನಾನು ಗುಡ್ಡದ ಕೆಳಗೆ ನಿಂತು ನೋಡಿದರೆ ಏನು ಕಾಣಲಿಲ್ಲ ಎಂಬಂತ ಫಲಿತಾಂಶ ಚಿಕ್ಕಮಗಳೂರು ನೌಕರರ ಸಂಘದ ಚುನಾವಣೆಯಲ್ಲಿ ಬಂದಿದೆ.

ಕಳೆದ ಒಂದು ತಿಂಗಳಿಂದ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ನೌಕರರಿಗಿಂತ ರಾಜಕಾರಣಿಗಳು ಆಟ ಆಡ್ಡಿದ್ದು ಮಾತ್ರ ನಿಜ.
73 ಮತದಾರರಲ್ಲಿ 72 ಜನ ಮತ ಚಲಾವಣೆ ಮಾಡಿದ್ದು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ ದೇವೇಂದ್ರ ಅತ್ಯಧಿಕ 46 ಮತ ಪಡೆದು ಅಯ್ಕೆ ಆದರೆ ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಪೂರ್ಣೇಶ್ 45 ಪಡೆದರೆ ರಾಜ್ಯ ಪರಿಷತ್ ಸ್ಥಾನಕ್ಕೆ ಮಂಜುನಾಥ್ ಎರಡು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಹೇಮಂತ್ ಬಣದ ಇಬ್ಬರು ಸೋತರೆ ಒಬ್ಬರು ಗೆದ್ದಿದ್ದಾರೆ.
ಕಳೆದ ಒಂದು ತಿಂಗಳಿಂದ ಜಿದ್ದಾ,ಜಿದ್ದಿನಲ್ಲಿ ಪೈಪೋಟಿ ನಡೆಸಿ ಆರೋಪ ,ಪ್ರತ್ಯಾರೋಪದಲ್ಲಿ ಮುಳುಗಿದ್ದ ಚುನಾವಣೆಯಲ್ಲಿ ನೌಕರರು ಸ್ವಾಭಿಮಾನ ಮೆರೆದಿದ್ದಾರೆ ಎಂದು ಹೇಳುವುದರ ಜೊತೆಗೆ ಕುತಂತ್ರಕ್ಕೆ ಉತ್ತರ ಕೊಟ್ಟಿದ್ದಾರೆ ಎಂದು ನೂತನವಾಗಿ ಅಯ್ಕೆಯಾಗಿರುವ ಅಧ್ಯಕ್ಷ ದೇವೇಂದ್ರ ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ರಾದ ಎಸ್,ಎಲ್,ಬೋಜೇಗೌಡ ಮತ್ತು ಮಾಜಿ ಎಂ,ಎಲ್,ಸಿ ಗಾಯಿತ್ರಿ ಶಾಂತೇಗೌಡ ಹೇಮಂತ್ ಕುಮಾರ್ ಪರ ಬ್ಯಾಟಿಂಗ್ ಮಾಡಿ ಕ್ಲೀನ್ ಬೋಲ್ಡ್ ಆದರೆ ಕಾಂಗ್ರೆಸ್ ವಕ್ತಾರ ಹೆಚ್,ಹೆಚ್.ದೇವರಾಜ್ ಮ್ಯಾನ್ ಅಫ್ ದ ಮ್ಯಾಚ್ ಆಗಿದ್ದಾರೆ.

ರೆಸಾರ್ಟ್, ಗುಂಡು,ತುಂಡುಗಳಿಗೆ ನೌಕರರು ಬಲಿಯಾಗದೆ ಹೀಗೂ ಉಂಟೇ ಎಂಬ ಫಲಿತಾಂಶ ಬಂದಿದೆ.
ರಾಜಕಾರಣಿಗಳ ವಿರುದ್ದ ಶೆಡ್ಡು ಹೊಡೆದ ದೇವೇಂದ್ರನ ಶಕ್ತಿ ಮಾತ್ರ ನಿಗೂಢ. ಮಂಜುನಾಥ್ ಸ್ವಾಮಿಯನ್ನು ಗೌರವ ಅಧ್ಯಕ್ಷ ರನ್ನಾಗಿ ರಾಜ್ಯ ಪರಿಷತ್ ನಲ್ಲಿ ಸೋತ ಅಭ್ಯರ್ಥಿ ಚೇತನ್ ರಾಜ್ಯ ಮಂಡಳಿಗೆ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಪದ್ಮನಾಭ ಅವರನ್ನು ನೇಮಿಸಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....