Home Latest News ಚಂದ್ರಶೇಖರ ಸ್ವಾಮೀಜಿ ಕೇಸ್ ಹಿಂಪಡೆಯದಿದ್ದರೆ ಉಗ್ರ ಹೋರಾಟ : ಪ್ರವೀಣ್ ಖಾಂಡ್ಯ
Latest News

ಚಂದ್ರಶೇಖರ ಸ್ವಾಮೀಜಿ ಕೇಸ್ ಹಿಂಪಡೆಯದಿದ್ದರೆ ಉಗ್ರ ಹೋರಾಟ : ಪ್ರವೀಣ್ ಖಾಂಡ್ಯ

Share
Share

ಚಿಕ್ಕಮಗಳೂರು : ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಚಂದ್ರಶೇಖರನಾಥ ಸ್ವಾಮೀಜಿಯವರ ಮೇಲೆ ದಾಖಲಿಸಿರುವ ಎಫ್ ಐ ಆರ್ ಹಿಂಪಡೆಯಬೇಕೆಂದು ಹಿಂದೂ ಹಿತರಕ್ಷಣಾ ವೇದಿಕೆ ಒತ್ತಾಯಿಸಿದೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಹಿಂದೂ ಹಿತರಕ್ಷಣಾ ವೇದಿಕೆಯ ಮುಖಂಡ ಪ್ರವೀಣ್ ಖಾಂಡ್ಯ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಸ್ಲಿಂ ಧರ್ಮ ಗುರುಗಳು ಸಂವಿಧಾನ ವಿರೋಧಿ ಹೇಳಿಕೆಗಳು ನೀಡಿದಾಗ ಅವರ ಮೇಲೆ ಪ್ರಕರಣ ದಾಖಲಿಸುವುದಿಲ್ಲ. ಆದರೆ ಬಡ ರೈತರ ಪರ ದಲಿತರ ಆಸ್ತಿಯನ್ನು ವಕ್ಫ್ ಬೋರ್ಡ್ ಕಾನೂನು ಬಾಹಿರವಾಗಿ ದಾಖಲೆ ನೋಟಿಸ್ ನೀಡಿದರು ರಾಜ್ಯ ಸರ್ಕಾರ ಚಕಾರ ಎತ್ತುವುದಿಲ್ಲ, ಆದರೆ ಚಂದ್ರಶೇಖರನಾಥ ಸ್ವಾಮೀಜಿಯವರಂತ ಸಂತರನ್ನು ಗುರಿಯಾಗಿಸಿ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಕೂಡಲೇ ಪ್ರಕರಣವನ್ನು ಹಿಂಪಡೆಯಬೇಕು, ತಪ್ಪಿದಲ್ಲಿ ರಾಜ್ಯ ವ್ಯಾಪಿ ಹಿಂದೂ ಪರ ಸಂಘಟನೆಗಳು ಒಗ್ಗೂಡಿ ಬೃಹತ್ ಹೋರಾಟ ರೂಪಿಸಲಾಗುವುದು, ಅಲ್ಲದೆ ಇಂದು ಮತ್ತು ನಾಳೆ ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ವಿವಿಧ ಸಂಘಟನೆಗಳ ಹಿಂದೂ ಪರ ಮುಖಂಡರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಕಂಸಾಗರ ಗ್ರಾಮದ ಕೆಂಚಪ್ಪ...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಕಚೇರಿ ಆವರಣದಲ್ಲಿ ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿದ ಕೆಲವೇ ಗಂಟೆಗಳಲ್ಲಿ ರಾಷ್ಟ್ರಧ್ವಜವನ್ನು ಕೆಳಗಿಳಿಸಲಾಗಿದೆ ಎಂಬ ಆರೋಪ...

Related Articles

ಕಾಫಿಕಿಂಗ್ ಸಿದ್ಧಾರ್ಥಹೆಗ್ಗಡೆ ಹೆಸರು ಶಾಶ್ವತವಾಗಿ ಉಳಿಸುವ ಕಾರ್ಯ ಮಾಡಬೇಕಿದೆ

ಮೂಡಿಗೆರೆ: ಕಾಫಿ ಡೇ ಮಾಲೀಕ ದಿವಂಗತ ವಿ.ಜಿ.ಸಿದ್ಧಾರ್ಥ ಹೆಗ್ಗಡೆ ಅವರು ತಮ್ಮ ಸಂಪೂರ್ಣ ಜೀವನವನ್ನು ಕಾಫಿ...

ವಿಮಾನ ನಿಲ್ದಾಣಕ್ಕಾಗಿ ಜಮೀನ ಸ್ವಾಧೀನಕ್ಕೆ ರೈತರ ವಿರೋಧ

ಚಿಕ್ಕಮಗಳೂರು: ನಗರದ ಹೊರವಲಯದಲ್ಲಿ ಕಿರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಗುರುತಿಸಲಾಗಿರುವ ಪ್ರದೇಶ ಕೃಷಿ ಅವಲಂಬಿತವಾಗಿದ್ದು, ಅತ್ಯಂತ...

ಎತ್ತಿನಭುಜ ಚಾರಣದಕ್ಕೆ ಟ್ರಕ್ಕಿಂಗ್‌ ಬಂದು ಸಮಸ್ಯೆ ಎದುರಿಸುತ್ತಿರುವ ಪ್ರವಾಸಿಗರು

ಮೂಡಿಗೆರೆ : ವಾರಾಂತ್ಯದ ಮಜಾ ಕಳೆಯಲು ಬೆಟ್ಟಗುಡ್ಡಗಳತ್ತ ಮುಖ ಮಾಡಿದ ಚಾರಣಪ್ರಿಯರಿಗೆ ನಿರಾಶೆಯ ಜೊತೆಗೆ ಕಾಡಿನ...

₹1.39 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಅಜ್ಜಂಪುರ: ಮನೆಯ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಬೀರುವಿನ ಲಾಕರ್‌ನಲ್ಲಿದ್ದ ಚಿನ್ನಾಭರಣ, ಬೆಳ್ಳಿ ವಸ್ತುಗಳು...