Home Latest News ಕೆಎಸ್ಆರ್ ಟಿಸಿ ಕಚೇರಿ ಸಿಬ್ಬಂದಿಗಳನ್ನು ಕೂಡಿ ಹಾಕಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ
Latest News

ಕೆಎಸ್ಆರ್ ಟಿಸಿ ಕಚೇರಿ ಸಿಬ್ಬಂದಿಗಳನ್ನು ಕೂಡಿ ಹಾಕಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

Share
Share
  1. ಚಿಕ್ಕಮಗಳೂರು : ಹಾಸನದ ಜನ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ಹೋದ ಹಿನ್ನೆಲೆ ಬಸ್ ಗಳ ಕೊರತೆಯಿಂದ ಪ್ರಯಾಣಿಕರು ಪರದಾಡಿದ್ದು ರೊಚ್ಚಿಗೆದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕೆಎಸ್ಆರ್ ಟಿಸಿ ಮುಖ್ಯ ಕಚೇರಿ ಸಿಬ್ಬಂದಿಗಳನ್ನು ಕೂಡಿ ಹಾಕಿ ಬೀಗ ಹಾಕಿದ ಘಟನೆ ಇಂದು ಸಂಜೆ ನಡೆದಿದೆ.

ಹಾಸನ ಸಮಾವೇಶಕ್ಕೆ ಜನರು ತೆರಳಲು ಬಸ್ ಗಳು ಹೋಗಿದ್ದರಿಂದ ಚಿಕ್ಕಮಗಳೂರಿನಲ್ಲಿ ಕೆಎಸ್ಆರ್ ಟಿಸಿ ಬಸ್ ಗಳ ಕೊರತೆ ಉಂಟಾಗಿ ಸಂಜೆ ವೇಳೆಗೆ ವಿದ್ಯಾರ್ಥಿಗಳು ಮನೆಗೆ ತೆರಳಲು ಪರದಾಡ ಬೇಕಾಯಿತು ಗಂಟೆ ಗಟ್ಟಲೇ ಕಾದರು ಬಸ್ ಗಳು ಬಾರದ ಕಾರಣ ಪ್ರಯಾಣಿಕರು ದಿಢೀರ್ ಪ್ರತಿಭಟನೆ ನಡೆಸಿದರು.

ಸಾರ್ವಜನಿಕರ ಜೊತೆಗೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬಿಜೆಪಿ ಯುವ ಮೋರ್ಚಾ ಸೇರಿದಂತೆ ಹಲವು ಸಂಘಟನೆಗಳ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಬಸ್ ಗಳನ್ನು ಬಿಡಬೇಕು ಎಂದು ಪಟ್ಟು ಹಿಡಿದು ಕುಳಿತರು ಗಂಟೆ ಗಟ್ಟಲೇ ಪ್ರತಿಭಟಿಸಿದರೂ ಬಸ್ ಗಳು ಬಾರದ ಕಾರಣ ಕಚೇರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ನೌಕರರು ಒಳಗೆ ಇರುವಾಗಲೇ ಕಚೇರಿಯ ಬಾಗಿಲು ಮುಚ್ಚಿ ಬೀಗ ಹಾಕಲಾಯಿತು. ‌

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಕಾರ್ಯದರ್ಶಿ ಸಚಿನ್ ಕುಮಾರ್ ಸೇರಿದಂತೆ ಹಲವರು ರಾಜ್ಯ ಸರ್ಕಾರ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು ಎಲ್ಲ ಮಾಯ ನಾಳೆ ಬಸ್ಸು ಮಾಯ ಎನ್ನುತ್ತಾ ಖಾಲಿ ಖಾಲಿ ಬಸ್ ಖಾಲಿ ಸಿದ್ದರಾಮಯ್ಯ ಜಾಲಿ, ಜಾಲಿ ಜಾಲಿ ಎಂದು ವ್ಯಂಗ್ಯ ಮಾಡಿದರು. ನಗರ ಪೊಲೀಸ್ ಠಾಣೆ ಪ್ರಭಾರ ಇನ್ಸ್ಪೆಕ್ಟರ್ ಸಚಿನ್ ಕುಮಾರ್ ಹಾಗೂ ಸಿಬ್ಬಂದಿ ಪ್ರತಿಭಟನಾ ಕಾರರನ್ನು ಸಮಾಧಾನ ಪಡಿಸಲು ಹರಸಾಹಸ ಪಟ್ಟರು

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...