Home Political News ವಕ್ಫ್ ಆಸ್ತಿ ಮುಸ್ಲಿಂರದ್ದಲ್ಲ : ಎಂ.ಪಿ.ಕುಮಾರಸ್ವಾಮಿ , ಸಿ.ಟಿ ರವಿಗೆ ವಕ್ಫ್ ತರ ವಿಷಯ ಬಿಟ್ಟು ಬೇರೆ ರಾಜಕೀಯ ಗೊತ್ತಿಲ್ಲ
Political News

ವಕ್ಫ್ ಆಸ್ತಿ ಮುಸ್ಲಿಂರದ್ದಲ್ಲ : ಎಂ.ಪಿ.ಕುಮಾರಸ್ವಾಮಿ , ಸಿ.ಟಿ ರವಿಗೆ ವಕ್ಫ್ ತರ ವಿಷಯ ಬಿಟ್ಟು ಬೇರೆ ರಾಜಕೀಯ ಗೊತ್ತಿಲ್ಲ

Share
Share

ಚಿಕ್ಕಮಗಳೂರು : ವಕ್ಫ್ ಬೋರ್ಡ್ ಆಸ್ತಿ ಸಂಪೂರ್ಣ ಸರ್ಕಾರದ್ದಾಗಿದ್ದು, ಈ ಬಗ್ಗೆ ಕೆಲವರು ಕೆಸರೆರಚಾಟದಲ್ಲಿ ತೊಡಗಿದ್ದಾರೆ ಎಂದು ಮಾಜಿ ಶಾಸಕ ಎಂ ಪಿ ಕುಮಾರಸ್ವಾಮಿ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು 1998 ರಲ್ಲೇ ಸುಪ್ರೀಂ ಕೋರ್ಟ್ ಆದೇಶದಲ್ಲಿ ಸ್ಪಷ್ಟವಾಗಿ ವಕ್ಫ್ ಆಸ್ತಿ ಸರ್ಕಾರದ್ದು ಎಂಬ ಉಲ್ಲೇಖವಿದೆ, ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಈ ಬಗ್ಗೆ ಕೂಲಂಕುಶ ಚರ್ಚಿಸಿ ತಿದ್ದುಪಡಿ ತಂದು ಶಾಶ್ವತ ಪರಿಹಾರಕ್ಕೆ ಮುಂದಾಗಬೇಕು ಎಂದು ಅವರು ಹೇಳಿದರು.

ಕೆಲವರು ಮುಖವಾಡ ಧರಿಸಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ವಕ್ಫ್ ಯಾವುದೇ ಮುಸ್ಲಿಮರ ಆಸ್ತಿಯಲ್ಲ, ವಕ್ಫ್ ಹಾಗೂ ಮುಜರಾಯಿಗೆ ಇಲಾಖೆಗಳಿಗೆ ಸರ್ಕಾರಗಳು ಒಬ್ಬ ಸಚಿವರನ್ನು ನೇಮಿಸಿಲಾಗಿರುತ್ತದೆ, ಯಾವುದೇ ಮಂತ್ರಿಯನ್ನು ಖಾಸಗಿ ಆಸ್ತಿ ಕಾಯಲು ನೇಮಿಸಿರುವುದಿಲ್ಲ. ಕಳೆದ 2020ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ 300ಕ್ಕೂ ಹೆಚ್ಚು ನೋಟಿಸ್ ಗಳನ್ನು ವಕ್ಫ್ ಮುಖಾಂತರ ಆಗಿನ ಸಚಿವೆ ಶಶಿಕಲಾ ಜೊಲ್ಲೆ ಆದೇಶದಂತೆ ನೋಟಿಸ್ ಹೊರಡಿಸಲಾಗಿತ್ತು.
ಆದರೆ ಇಂದು ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿರುವವರು ಕೆಸರೆರಚಾಟವನ್ನು ನಿಲ್ಲಿಸಬೇಕು ಎಂದು ಎಂಪಿ ಕುಮಾರಸ್ವಾಮಿ ಒತ್ತಾಯಿಸಿದರು.

ಇದೆ ವೇಳೆ ಸಿಟಿ ರವಿ ವಿರುದ್ಧ ಕೂಡ ಎಂ.ಪಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ರವಿ ಕೆಲಸವೇ ಇಂತಹ ವಿಷಯಗಳಲ್ಲಿ ರಾಜಕೀಯ ಮಾಡುವುದು, ದತ್ತಪೀಠ ವಕ್ಫ್ ಆಸ್ತಿ ಎಂದು ಯಾರು ಹೇಳಿಲ್ಲ, ಭೂ ಕಾಯ್ದೆ ಅಥವಾ ಯಾವುದೇ ಇನಾಂ ಭೂಮಿ ಇದ್ದರೂ ಸರ್ಕಾರ ವಶಪಡಿಸಿಕೊಳ್ಳಬೇಕು. ಬೇರೆ ವಿಷಯಗಳಲ್ಲಿ ರಾಜಕೀಯ ಮಾಡಲು ರವಿಗೆ ಬರುವುದಿಲ್ಲ ಎಂದು ಟೀಕಿಸಿದರು. ರಾಜ್ಯ ಸರ್ಕಾರ ಈ ಬಗ್ಗೆ ಯಾವುದೇ ಬಿಲ್ ಪಾಸ್ ಮಾಡಿದರು ಅಂತಿಮವಾಗಿ ಕೇಂದ್ರ ಸರ್ಕಾರವೇ ಅಂತಿಮ ನಿರ್ಧಾರ ಕೈಗೊಳ್ಳಬೇಕು.

ಇದೀಗ ಹಿಂದೂ ಮುಸ್ಲಿಂ ಎಂದು ಅನವಶ್ಯಕವಾಗಿ ಸಮಾಜದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ. ರೈತರ ಅನುಕೂಲಕ್ಕಾಗಿ ಸಮಾಜದ ಸ್ವಾಸ್ಥ್ಯ ಕಾಪಾಡಲು ಕ್ರಮ ಕೈಗೊಳ್ಳಬೇಕು ಎಷ್ಟೋ ಜನರಿಗೆ ವಾಸ್ತವವೇ ಗೊತ್ತಿಲ್ಲ.‌ ಯಾರು ಏಕ ಪಕ್ಷಿಯವಾಗಿ ಈ ಬಗ್ಗೆ ಮಾತನಾಡಬಾರದು ಎಂದರು

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...