Home Latest News ಬಸವಣ್ಣನಂತೆ ಹೊಳೆಗೆ ಹಾರಿ ಸಾಯಿರಿ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ
Latest News

ಬಸವಣ್ಣನಂತೆ ಹೊಳೆಗೆ ಹಾರಿ ಸಾಯಿರಿ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ

Share
Share

ಚಿಕ್ಕಮಗಳೂರು : ವಕ್ಫ್ ವಿರೋಧಿ ಸಭೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಬಸವಣ್ಣನವರಂತೆ ಹೊಳೆ ಹಾರಿ ಸಾಯಿರಿ ಎಂಬ ಹೇಳಿಕೆಗೆ ಚಿಕ್ಕಮಗಳೂರು ಜಾಗತಿಕ ಲಿಂಗಾಯಿತ ಮಹಾಸಭಾ ಹಾಗೂ ಕೆಪಿಸಿಸಿ ವಕ್ತಾರ ರವೀಶ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಗಂಗಾಧರಪ್ಪ, ಯತ್ನಾಳ್ ಬಸವಣ್ಣನವರ ಆಸ್ಥಾನದಲ್ಲಿ ಇದ್ದ ಕೊಂಡಿ ಮಂಚಣ್ಣ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಕೂಡಲೇ ಅವರು ಸಮಾಜದ ಕ್ಷಮೆ ಕೇಳಬೇಕು. ತಪ್ಪಿದಲ್ಲಿ ರಾಜ್ಯಾದ್ಯಂತ ಲಿಂಗಾಯಿತ ಸಮಾಜ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

ಇದೆ ವೇಳೆ ಮಾತನಾಡಿದ ‌ ಜಯ ಬಸವನಂದ ಸ್ವಾಮೀಜಿ, ಬಸನಗೌಡ ಯತ್ನಾಳ್ ಅತ್ಯಂತ ಕೀಳು ಮಟ್ಟದ ವಿವೇಕ ರಹಿತ ಅಸಂಬದ್ಧ ಹೇಳಿಕೆಯನ್ನು ನೀಡಿರುತ್ತಾರೆ. ಎಲ್ಲಾ ಜಾತಿ ವರ್ಗದವರನ್ನು ಸಮಾನವಾಗಿ ಕಂಡು ಸಮಾನತೆ ಸಾರಿದ ಮೇರು ಪರ್ವತ ಆದ ವಿಶ್ವಗುರು ಬಸವಣ್ಣನವರು, ಯತ್ನಾಳ್ ಹೇಳಿದಂತೆ ಹೊಳೆ ಹಾರಿ ಸಾವನ್ನಪ್ಪಿಲ್ಲ. ಯತ್ನಾಳ್ ಯಾರನ್ನೊ ಓಲೈಸಲು ಅಧಿಕಾರದ ಆಸೆಗಾಗಿ, ಕೆಲವರನ್ನು ಮೆಚ್ಚಿಸಲು ಬಸವಣ್ಣನವರನ್ನು ಅವಮಾನಿಸಿದ್ದಾರೆ. ಇವರಿಗೆ ಲಿಂಗಾಯಿತರಿಗೆ ಇರಬೇಕಾದ ಆಚಾರವಾಗಲಿ, ಸಂಸ್ಕಾರವಾಗಲಿ ಇಲ್ಲದಿರುವುದು ದುರದೃಷ್ಟಕರ ಹಗ್ಗದ ಪ್ರಚಾರಕ್ಕಾಗಿ ರಾಜಕೀಯ ತೆವಲಿಗಾಗಿ ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಯಾರ ಬಗ್ಗೆ ಮಾತನಾಡುತ್ತಿದ್ದೇನೆ ಎಂಬ ಕನಿಷ್ಠ ಜ್ಞಾನವು ಇವರಲ್ಲಿ ಕಂಡು ಬರುತ್ತಿಲ್ಲ, ಇವರ ಹೇಳಿಕೆ ಬಸವ ಭಕ್ತರಿಗೆ ಅವಮಾನಿಸಿದಂತೆ ಕಾಣುತ್ತಿದೆ ಎಂದು ಸ್ವಾಮೀಜಿ ಹೇಳಿದರು.

ಕೆಪಿಸಿಸಿ ವಕ್ತಾರ ರವೀಶ್ ಕ್ಯಾತನಬೀಡು ಖಂಡನೆ..!

ಬಸನಗೌಡ ಪಾಟೀಲ್ ಯತ್ನಾಳ್ ಬಸವಣ್ಣ ಅವರ ಬಗ್ಗೆ ನೀಡಿದ ಹೇಳಿಕೆಗೆ ಕೆಪಿಸಿಸಿ ವಕ್ತಾರ ರವೀಶ್ ಕ್ಯಾತನಬೀಡು ಹಸಾ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಯತ್ನಾಳ್ ಹೇಳಿಕೆ ಸಾಕಷ್ಟು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದ್ದು, ಇದನ್ನು ಸಂಘ ಪರಿವಾರ ಹುನ್ನಾರದಿಂದ ಹೇಳಿಸಿದ್ದು, ಈ ಬಗ್ಗೆ ಯಾವುದೇ ಬಿಜೆಪಿ ಶಾಸಕರು ಮಾತನಾಡುತ್ತಿಲ್ಲ ಏಕೆ ಯಾರೋ ಯತ್ನಾಳ್ರನ್ನು ಆಡಿಸುತ್ತಿದ್ದಾರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ ಆದರೆ ಬಿಜೆಪಿ ಸಂಘ ಪರಿವಾರದಂತಹ ಪಟ್ಟ ಭದ್ರ ಹಿತಾಸಕ್ತಿಗಳ ಕೈವಾಡದಿಂದ ಈ ರೀತಿ ಹೇಳಿಕೆಗಳನ್ನು ಯತ್ನಾಳ ಮೂಲಕ ಆಡಿಸುತ್ತಿದ್ದಾರೆ. ಈ ತಕ್ಷಣ ಯತ್ನಾಳ್ ಕನ್ನಡದ ಜನತೆಯ ಕ್ಷಮೆ ಯಾಚಿಸಬೇಕು. ನಾಳಿಗೆಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ರವೀಶ್ ಹೇಳಿದರು.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...