Home Latest News ಕಳಚಿದ ಹಿರಿಯ ಕಮ್ಯುನಿಷ್ಟ್ ಕೊಂಡಿ : ಕಾರ್ಮಿಕ ಮುಖಂಡ ಗುಣಶೇಖರನ್ ನಿಧನ
Latest News

ಕಳಚಿದ ಹಿರಿಯ ಕಮ್ಯುನಿಷ್ಟ್ ಕೊಂಡಿ : ಕಾರ್ಮಿಕ ಮುಖಂಡ ಗುಣಶೇಖರನ್ ನಿಧನ

Share
Share

ಚಿಕ್ಕಮಗಳೂರು : ಕಮ್ಯುನಿಸ್ಟ್ ಪಕ್ಷ ಹಾಗೂ ಕಾರ್ಮಿಕ ಮುಖಂಡ ಕೆ.ಗುಣಶೇಖರನ್ (72) ನಿಧನರಾಗಿದ್ದಾರೆ. ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ನಿಧನದಿಂದ ಕಾರ್ಮಿಕ ವರ್ಗಕ್ಕೆ ತುಂಬಲಾರದ ನಷ್ಟವಾಗಿದೆ.
ಕೆ.ಗುಣಶೇಖರನ್ ತಂದೆ ಕೇಶವ ಮೇಸ್ತ್ರಿ 60 ರ ದಶಕದಲ್ಲಿ ತೋಟಕಾರ್ಮಿಕರ ಸಂಘಟನೆ ಪ್ರಾರಂಭಿಸಲು ಎಂ.ಸಿ.ನರಸಿಂಹನ್ ಜೊತೆ ಗೂಡಿದವರು ತಂದೆಯಂತೆ ಮಗನು ಸಂಘಟನೆ ಜೊತೆ ಜೊತೆಯಲ್ಲಿ ಬೆಳೆದವರು .

ಸಕಲೇಶಪುರದ ಕಾಡುಮನೆ ಎಸ್ಟೇಟ್ ನಲ್ಲಿ ಮಂಡಲ ಪಂಚಾಯತಿ ಉಪಾಧ್ಯಕ್ಷರಾಗಿ ನಂತರ ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಿ ತೋಟ ಕಾರ್ಮಿಕರ ಸಂಘಟನೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಅಧ್ಯಕ್ಷರಾಗಿ ಪೂರ್ಣ ಅವಧಿ ಮುಖಂಡರಾಗಿ ಚಿಕ್ಕಮಗಳೂರು ಜಿಲ್ಲೆ ಅಷ್ಟೇ ಅಲ್ಲ ಹಾಸನ ಮತ್ತು ಕೊಡುಗು ಜಿಲ್ಲೆಯಲ್ಲಿ ಸಂಘಟನೆ ಕಟ್ಟಿದವರು.
ತೋಟ ಕಾರ್ಮಿಕರ ಜೊತೆಗೆ ರಬ್ಬರ್ ಕಾರ್ಮಿಕರನ್ನು ಸಂಘಟಿಸಿದವರು. ಕಮ್ಯೂನಿಸ್ಟ್‌ ಪಕ್ಷದ ರಾಜ್ಯ ಶಿಸ್ತು ಸಮಿತಿ ಸದಸ್ಯರಾಗಿ, ಕಾಫಿ ಬೋರ್ಡ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ಮಿತ ಭಾಷಿಯಾಗಿದ್ದ ಗುಣಶೇಖರನ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕಾರ್ಮಿಕರು ಗುಂಪು, ಗುಂಪಾಗಿ ಬರುತ್ತಿದ್ದರು. ಕಮ್ಯುನಿಸ್ಟ್ ಮುಖಂಡರು ಹಾಗೂ ವಿವಿಧ ಪಕ್ಷದ ಗಣ್ಯರು ಅಂತಿಮ ದರ್ಶನ ಪಡೆದರು.

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....