Home Latest News ಪದವೀಧರ ಸಹಕಾರ ಸಂಘದಲ್ಲಿ ಭಾರೀ ಅವ್ಯವಹಾರ : ನಿರ್ದೇಶಕ ಗೋಪಾಲಗೌಡ ಆರೋಪ
Latest News

ಪದವೀಧರ ಸಹಕಾರ ಸಂಘದಲ್ಲಿ ಭಾರೀ ಅವ್ಯವಹಾರ : ನಿರ್ದೇಶಕ ಗೋಪಾಲಗೌಡ ಆರೋಪ

Share
Share

ಚಿಕ್ಕಮಗಳೂರು : ಪದವಿಧರ ಪತ್ತಿನ ಸಹಕಾರ ಸಂಘದಲ್ಲಿ ಕಟ್ಟಡ ನಿರ್ಮಾಣ ಸೇರಿದಂತೆ ಹಲವು ಅವ್ಯವಹಾರ ಆಗಿದ್ದು, ಇದಕ್ಕೆಲ್ಲ ಹಿಂದಿನ ಬ್ಯಾಂಕಿನ ಅಧ್ಯಕ್ಷ ಲೋಕಪ್ಪ ಗೌಡ ಕಾರಣ ಎಂದು ಪತ್ತಿನ ಸಹಕಾರ ಸಂಘದ ನಿರ್ದೇಶಕ ಬಿ.ಟಿ ಗೋಪಾಲಗೌಡ ಆರೋಪಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು ನೂತನವಾಗಿ ನಿರ್ಮಾಣವಾಗಿರುವ ಸಂಘದ ಕಟ್ಟಡ ನಿರ್ಮಾಣಕ್ಕೆ ಟೆಂಡರ್ ಕರೆದಿರುವುದಿಲ್ಲ, ತಾವೇ ಕಾನೂನು ಬಾಹಿರವಾಗಿ ವಸ್ತುಗಳನ್ನು ಖರೀದಿಸಿ ಕಟ್ಟಡ ನಿರ್ಮಾಣ ಮಾಡಿದ್ದಾರೆ. 92 ಲಕ್ಷ ಹಣ ಮಂಜೂರಾಗಿದ್ದರು ಒಂದು ಕೋಟಿ 22 ಲಕ್ಷಕ್ಕೂ ಹೆಚ್ಚು ಖರ್ಚು ಮಾಡಿ ಅಕ್ರಮ ಎಸಗಿದ್ದಾರೆ. ಈ ಮೂಲಕ 33 ಲಕ್ಷ ದುರುಪಯೋಗ ಆಗಿದೆ ಅಷ್ಟೇ ಅಲ್ಲದೆ ಸಂಘದ ಹಳೆಯ ಪೀಠೋಪಕರಣಗಳ ಹರಾಜು ಪ್ರಕ್ರಿಯೆಯಲ್ಲೂ ಕೂಡಾ ಅವ್ಯವಹಾರ ನಡೆದಿದೆ. ಇನ್ನೇನು ಸಂಘದ ಚುನಾವಣೆ ಸಮೀಪಿಸುತ್ತಿದ್ದು, ಅಧ್ಯಕ್ಷರು ಮತ್ತು ಅವರ ತಂಡ ಸಾವಿರಾರು ಜನರನ್ನು ಅನರ್ಹಗೊಳಿಸಿದೆ ಕೇವಲ 354 ಸದಸ್ಯರಿಗೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸುವ ಅರ್ಹತೆ ನೀಡಿದ್ದಾರೆ ‌. ವಿವಿಧ ಕಾರಣಗಳನ್ನು ನೀಡಿ ಬೈಲಾದಲ್ಲಿರುವ ಮಾನದಂಡಗಳನ್ನು ಗಾಳಿಗೆ ತೂರಿದ್ದಾರೆ. ಬ್ಯಾಂಕಿನ ಮ್ಯಾನೇಜರ್ ನಾರಾಯಣಸ್ವಾಮಿ ಕೂಡ ಈ ಎಲ್ಲಾ ಅಕ್ರಮಗಳಲ್ಲಿ ಪಾತ್ರಧಾರಿಯಾಗಿದ್ದು ಸಹಕಾರಿ ಕಾನೂನನ್ನು ಸಂಪೂರ್ಣ ಉಲ್ಲಂಘನೆ ಮಾಡಿದ್ದಾರೆ ಎಂದು ದೂರಿದ್ದಾರೆ.

ಈ ಕುರಿತು ಒಂದು ವರ್ಷದ ಹಿಂದೆ ಸಹಕಾರ ಸಂಘಗಳ ರಿಜಿಸ್ಟರ್ ಗೆ ದೂರು ನೀಡಿದರೂ ಯಾವುದೇ ಪ್ರಯೋಜನ ಆಗಿಲ್ಲ, ಸ್ಥಳೀಯ ಡಿಎಆರ್ ಕಳೆದ ಹಲವು ವರ್ಷಗಳಿಂದ ಒಂದೇ ಒಂದು ಬಾರಿಯೂ ಬ್ಯಾಂಕಿನ ಲೆಕ್ಕಪತ್ರಗಳ ಪರಿಶೀಲನೆ ನಡೆಸಿಲ್ಲ ಎನ್ನುವ ಮಾಹಿತಿ ತಿಳಿದು ಬಂದಿದೆ. ಹೀಗೆ ಅಕ್ರಮಗಳು ನಡೆದರೆ ಸಂಘದ ಗತಿ ಮುಂದೇನು ಎನ್ನುವ ಆತಂಕ ಮನೆ ಮಾಡಿದೆ ಎಂದು ಗೋಪಾಲ ಗೌಡ ಹೇಳಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...