Home Latest News ನೌಕರರ ಸಂಘದ ಅಧ್ಯಕ್ಷ ದೇವೇಂದ್ರಗೆ ಪಿ.ಯು ಬೋರ್ಡ್ ನೋಟಿಸ್ : ಭೋಜೇಗೌಡ ನಿಂದನೆ ಪ್ರಕರಣ
Latest News

ನೌಕರರ ಸಂಘದ ಅಧ್ಯಕ್ಷ ದೇವೇಂದ್ರಗೆ ಪಿ.ಯು ಬೋರ್ಡ್ ನೋಟಿಸ್ : ಭೋಜೇಗೌಡ ನಿಂದನೆ ಪ್ರಕರಣ

Share
Share

ಚಿಕ್ಕಮಗಳೂರು : ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಗೆದ್ದು ಬೀಗಿದ ದೇವೇಂದ್ರ ಅವರಿಗೆ ಎಂಎಲ್.ಸಿ ಭೋಜೇಗೌಡರ ಗುಮ್ಮ ಕಾಡುತ್ತಿದೆ. ಪೈಪೋಟಿ ಭರಾಟೆಯಲ್ಲಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿದ್ದ ದೇವೇಂದ್ರ ಭೋಜೇಗೌಡರ ಮೇಲೆ ಮಾಡಿದ ಆರೋಪಗಳು ಇದೀಗ ಅವರಿಗೆ ಮುಳುವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾಹಿತಿಯೊಂದರ ಪ್ರಕಾರ ಸರ್ಕಾರಿ ಉಪನ್ಯಾಸಕರಾಗಿ ರುವ ದೇವೇಂದ್ರರಿಗೆ ನೋಟೀಸ್ ಕೊಟ್ಟಿದೆ ಎನ್ನಲಾಗಿದೆ.

ಮಳೆ ಬಿಟ್ಟರು ಮರದ ಹನಿ ನಿಂತಿಲ್ಲ ಎಂಬ ಮಾತಿನಂತೆ ನೌಕರರ ಚುನಾವಣೆ ಮುಗಿದರೂ ನೂತನ ಅಧ್ಯಕ್ಷರಿಗೆ ಕಾಟ ತಪ್ಪಲಾರದು ಎಂಬಂತಾಗಿದೆ, ಎರಡನೇ ಬಾರಿ ಅಯ್ಕೆ ಆಗಿರುವ ದೇವೇಂದ್ರರವರಿಗೆ ಪಿ.ಯು.ಬೋರ್ಡ್ ನಿಂದ ನೋಟಿಸ್ ನೀಡಿದೆ ಎಂಬ ಮಾಹಿತಿ ತಿಳಿದು ಬಂದಿದ್ದು ದೇವೇಂದ್ರ ದಿಢೀರ್ ಬೆಂಗಳೂರಿಗೆ ದೌಡಾಯಿಸಿದ್ದಾರಡೆ

ನೌಕರರ ಚುನಾವಣೆ ವೇಳೆ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ರನ್ನು ನಿಂದಿಸಿದ್ದು, ಸರ್ಕಾರಿ ನೌಕರರಾಗಿ ಜನಪ್ರತಿನಿಧಿಗಳಿಗೆ ಅವಮಾನ ಮಾಡಿರುವ ನಿಮ್ಮ ಮೇಲೆ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂದು ಕಾರಣ ಕೇಳಿ ಶೊಕಾಸ್ ನೋಟಿಸ್ ನೀಡಲಾಗಿದೆ ಎಂದು ನೌಕರರು ಮಾತನಾಡುತ್ತಿದ್ದಾರೆ. ಈ ನಡುವೆ ಭೋಜೇಗೌಡ ಹಠಕ್ಕೆ ಬೀದಿದ್ದು ದೇವೇಂದ್ರ ವಿರುದ್ಧ ಕಾನೂನು ಹೋರಾಟ ಮಾಡಲು ಮುಂದಾಗಿದ್ದಾರೆ

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...