Home Latest News ದತ್ತ ಜಯಂತಿ ಹಿನ್ನೆಲೆ ಡಿ.ಸಿ ಎಸ್ಪಿ ಸ್ಥಳ ಪರಿಶೀಲನೆ
Latest News

ದತ್ತ ಜಯಂತಿ ಹಿನ್ನೆಲೆ ಡಿ.ಸಿ ಎಸ್ಪಿ ಸ್ಥಳ ಪರಿಶೀಲನೆ

Share
Share

ಚಿಕ್ಕಮಗಳೂರು : ಕಾಫಿನಾಡ ವಿವಾದಿತ ದತ್ತಪೀಠದಲ್ಲಿ ದತ್ತ ಜಯಂತಿ ಹಿನ್ನೆಲೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹಾಗೂ ಎಸ್ಪಿ ವಿಕ್ರಂ ಅಮಟೆ ದತ್ತಪೀಠ ಮಾರ್ಗದ ಚೆಕ್ ಪೋಸ್ಟ್, ಕಿರಿದಾದ ರಸ್ತೆ, ಅಪಾಯದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ನಗರದ ಅಲ್ಲಂಪುರದಿಂದ ದತ್ತಪೀಠವರೆಗಿನ ಸುಮಾರು 30 ಕಿ.ಮೀ. ದೂರವನ್ನ ಪರಿಶೀಲನೆ ನಡೆಸಿದ್ದಾರೆ.

ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ದತ್ತಪೀಠದ ಮಾರ್ಗ ಹಾವುಬಳುಕಿನ ಮೈಕಟ್ಟಿನ ರಸ್ತೆಯಾಗಿದೆ. ಈ ವರ್ಷದ ನಿರಂತರ ಮಳೆಯಿಂದ ಮಾರ್ಗ ಮಧ್ಯೆ ಅಲ್ಲಲ್ಲೇ ಭೂ ಕುಸಿತ ಹಾಗೂ ಗುಡ್ಡ ಕುಸಿತ ಕೂಡ ಸಂಭವಿಸಿದೆ. ಕೆಲವೆಡೆ ಸಿಂಗಲ್ ರೋಡ್ ರೀತಿಯಂತಹಾ ಮಾರ್ಗವೂ ಇರೋದ್ರಿಂದ ಟ್ರಾಫಿಕ್ ಜಾಮ್ ಉಂಡಾಗದಂತೆ, ಭಕ್ತರ ಹಿತದೃಷ್ಟಿಯಿಂದ ಬಂದೋಬಸ್ತ್ ಮಾಡುವ ನಿಟ್ಟಿನಲ್ಲಿ ಪರಿಶೀಲನೆ ನಡೆಸಿದ್ದಾರೆ. ದತ್ತಪೀಠದಲ್ಲೂ ಪಾರ್ಕಿಂಗ್ ವ್ಯವಸ್ಥೆಯನ್ನ ಪರಿಶೀಲನೆ ನಡೆಸಿದ್ದು ಟ್ರಾಫಿಕ್ ಜಾಮ್ ಉಂಟಾಗದಂತೆ ಕ್ರಮಕೈಗೊಂಡಿದ್ದಾರೆ. ದತ್ತಜಯಂತಿಯ ಕೊನೆ ದಿನವಾದ 14ರಂದು ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಗಾಡಿಗಳಲ್ಲಿ ಬರುವ ಸುಮಾರು 20 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಂಪೂರ್ಣ ಬಂದೋಬಸ್ತ್ ಕಲ್ಪಿಸಿದೆ. ಜೊತೆಗೆ, ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿರುವ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ 4500ಕ್ಕೂ ಅಧಿಕ ಪೊಲೀಸರು ದತ್ತಪೀಠ ಹಾಗೂ ಜಿಲ್ಲಾದ್ಯಂತ ಹದ್ದಿನ ಕಣ್ಣಿಟ್ಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...