Home Latest News ದತ್ತ ಜಯಂತಿ ಹಿನ್ನೆಲೆ ಡಿ.ಸಿ ಎಸ್ಪಿ ಸ್ಥಳ ಪರಿಶೀಲನೆ
Latest News

ದತ್ತ ಜಯಂತಿ ಹಿನ್ನೆಲೆ ಡಿ.ಸಿ ಎಸ್ಪಿ ಸ್ಥಳ ಪರಿಶೀಲನೆ

Share
Share

ಚಿಕ್ಕಮಗಳೂರು : ಕಾಫಿನಾಡ ವಿವಾದಿತ ದತ್ತಪೀಠದಲ್ಲಿ ದತ್ತ ಜಯಂತಿ ಹಿನ್ನೆಲೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹಾಗೂ ಎಸ್ಪಿ ವಿಕ್ರಂ ಅಮಟೆ ದತ್ತಪೀಠ ಮಾರ್ಗದ ಚೆಕ್ ಪೋಸ್ಟ್, ಕಿರಿದಾದ ರಸ್ತೆ, ಅಪಾಯದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ನಗರದ ಅಲ್ಲಂಪುರದಿಂದ ದತ್ತಪೀಠವರೆಗಿನ ಸುಮಾರು 30 ಕಿ.ಮೀ. ದೂರವನ್ನ ಪರಿಶೀಲನೆ ನಡೆಸಿದ್ದಾರೆ.

ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ದತ್ತಪೀಠದ ಮಾರ್ಗ ಹಾವುಬಳುಕಿನ ಮೈಕಟ್ಟಿನ ರಸ್ತೆಯಾಗಿದೆ. ಈ ವರ್ಷದ ನಿರಂತರ ಮಳೆಯಿಂದ ಮಾರ್ಗ ಮಧ್ಯೆ ಅಲ್ಲಲ್ಲೇ ಭೂ ಕುಸಿತ ಹಾಗೂ ಗುಡ್ಡ ಕುಸಿತ ಕೂಡ ಸಂಭವಿಸಿದೆ. ಕೆಲವೆಡೆ ಸಿಂಗಲ್ ರೋಡ್ ರೀತಿಯಂತಹಾ ಮಾರ್ಗವೂ ಇರೋದ್ರಿಂದ ಟ್ರಾಫಿಕ್ ಜಾಮ್ ಉಂಡಾಗದಂತೆ, ಭಕ್ತರ ಹಿತದೃಷ್ಟಿಯಿಂದ ಬಂದೋಬಸ್ತ್ ಮಾಡುವ ನಿಟ್ಟಿನಲ್ಲಿ ಪರಿಶೀಲನೆ ನಡೆಸಿದ್ದಾರೆ. ದತ್ತಪೀಠದಲ್ಲೂ ಪಾರ್ಕಿಂಗ್ ವ್ಯವಸ್ಥೆಯನ್ನ ಪರಿಶೀಲನೆ ನಡೆಸಿದ್ದು ಟ್ರಾಫಿಕ್ ಜಾಮ್ ಉಂಟಾಗದಂತೆ ಕ್ರಮಕೈಗೊಂಡಿದ್ದಾರೆ. ದತ್ತಜಯಂತಿಯ ಕೊನೆ ದಿನವಾದ 14ರಂದು ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಗಾಡಿಗಳಲ್ಲಿ ಬರುವ ಸುಮಾರು 20 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಂಪೂರ್ಣ ಬಂದೋಬಸ್ತ್ ಕಲ್ಪಿಸಿದೆ. ಜೊತೆಗೆ, ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿರುವ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ 4500ಕ್ಕೂ ಅಧಿಕ ಪೊಲೀಸರು ದತ್ತಪೀಠ ಹಾಗೂ ಜಿಲ್ಲಾದ್ಯಂತ ಹದ್ದಿನ ಕಣ್ಣಿಟ್ಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...