Home Latest News ದತ್ತ ಜಯಂತಿಗೆ 4000 ಪೊಲೀಸರ ಹದ್ದಿನ ಕಣ್ಣು : ಎಸ್ಪಿ ವಿಕ್ರಮ್ ಅಮಟೆ
Latest News

ದತ್ತ ಜಯಂತಿಗೆ 4000 ಪೊಲೀಸರ ಹದ್ದಿನ ಕಣ್ಣು : ಎಸ್ಪಿ ವಿಕ್ರಮ್ ಅಮಟೆ

Share
Share

ಚಿಕ್ಕಮಗಳೂರು : ದತ್ತ ಜಯಂತಿ ವೇಳೆ ವಿವಾದಿತ ಐಡಿ ಪೀಠದ ಗರ್ಭಗುಡಿ ಸಮೀಪ ಮೂರು ದಿನಗಳ ಕಾಲ ಹೋಮ ಹವನ ನಡೆಸುವ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಪ್ರತಿ ವರ್ಷದಂತೆ ಈ ವರ್ಷವೂ ದತ್ತ ಜಯಂತಿ ಕಾರ್ಯಕ್ರಮವನ್ನು ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ತೀರ್ಮಾನಿಸಿದೆ ಹೇಳಿದರು.

ದತ್ತ ಜಯಂತಿ ಹಿನ್ನೆಲೆ ಜಿಲ್ಲೆ ಸೇರಿದಂತೆ ದತ್ತಪೀಠದಲ್ಲಿ ಈಗಾಗಲೇ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಬರುವ ಸಾವಿರಾರು ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ತುರ್ತು ಸಂದರ್ಭದಲ್ಲಿ ಆರೋಗ್ಯ ಘಟಕಗಳನ್ನು ಸ್ಥಾಪಿಸಲಾಗುತ್ತೆ, ಅಲ್ಲದೆ ಈಗಾಗಲೇ ಎರಡು ಸಮುದಾಯದ ಪ್ರಮುಖರನ್ನು ಕರೆಸಿ, ಶಾಂತಿ ಸಭೆ ನಡೆಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆದಂತೆ ಶಾಂತಿಯುತ ಕಾರ್ಯಕ್ರಮ ನಡೆಸಿ ಕೊಡುವುದಾಗಿ ಮನವಿ ಮಾಡಲಾಗಿದೆ ಎಂದರು.

*ಲಾಂಗ್ ಚಾಸಿ ವಾಹನಗಳಿಗೆ ನಿಷೇಧ*

ದತ್ತಪೀಠ ಭಾಗದಲ್ಲಿ ಕಿರಿದಾದ ರಸ್ತೆಗಳು ಇರುವ ಕಾರಣ ಅತಿ ಹೆಚ್ಚಿನ ವಾಹನಗಳು ದತ್ತ ಜಯಂತಿ ಸಂದರ್ಭದಲ್ಲಿ ಆಗಮಿಸುವ ನಿರೀಕ್ಷೆ ಹಿನ್ನೆಲೆ, ರಾಜ್ಯಾದ್ಯಂತ ಆಗಮಿಸುವ ಭಕ್ತರು ಲಾಂಗ್ ಚಾಸಿ ವಾಹನಗಳನ್ನು ತರದಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ ಮನವಿ ಮಾಡಿದ್ದಾರೆ. ಈಗಾಗಲೇ ದತ್ತಪೀಠ ಭಾಗದಲ್ಲಿ ಭಾರಿ ಮಳೆಯಿಂದಾಗಿ ಕೆಲವು ಕಡೆ ರಸ್ತೆ ಭಾಗದ ಗುಡ್ಡ ಕುಸಿದಿದ್ದು, ಸಮಸ್ಯೆ ಉಂಟಾಗಿದೆ. ಇದರಿಂದಾಗಿ ಸಾವಿರಾರು ಭಕ್ತರು ಆಗಮಿಸುವ ಹಿನ್ನೆಲೆ ವಾಹನ ದಟ್ಟಣೆ ಹೆಚ್ಚಾಗಿ ಸಂಚಾರಕ್ಕೆ ಅಡ್ಡಿ ಉಂಟಾಗಬಾರದು ಎಂಬ ಕಾರಣಕ್ಕೆ ಬೃಹತ್ ವಾಹನಗಳನ್ನು ನಿಷೇಧಿಸಲಾಗಿದೆ ಎಂದರು. ಒಂದು ವೇಳೆ ಲಾಂಗ್ ಜಾತಿ ವೆಹಿಕಲ್ ನಲ್ಲಿ ಬಂದರೆ ಅಲ್ಲಂ ಪುರದ ಬಳಿ ಆ ವಾಹನಗಳನ್ನು ನಿಲ್ಲಿಸಿ ಭಕ್ತರು ಜಿಲ್ಲಾ ಆಡಳಿತದಿಂದ ವ್ಯವಸ್ಥೆ ಮಾಡಿರುವ ಲಘು ವಾಹನಗಳಲ್ಲಿ ಹೋಗುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

—————-

*ಪ್ರತಿವರ್ಷದಂತೆ ಭಕ್ತರ ಪೂಜಾ ಕಾರ್ಯಗಳಿಗೆ ಅನುಮತಿ*

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಹಾಗೂ ಪ್ರತಿವರ್ಷದಂತೆ ದತ್ತ ಜಯಂತಿ ವೇಳೆ ನಡೆಯುವ ಪೂಜಾ ಕಾರ್ಯಗಳನ್ನು ನಡೆಸಲು ಈಗಾಗಲೇ ಅನುಮತಿ ನೀಡಲಾಗಿದೆ. ಈಗಾಗಲೇ ದತ್ತ ಜಯಂತಿ ಸಂಘಟಕರು ಈಗಾಗಲೇ ಮೂರು ದಿನ ಹೋಮ ಅವನ ಪೂಜಾ ಕಾರ್ಯಗಳನ್ನು ಮಾಡಲು ಮನವಿ ಮಾಡಿದ್ದಾರೆ. ಈ ವಿಚಾರವನ್ನು ಸರ್ಕಾರದ ಮುಂದೆ ಕಳಿಸಲಾಗಿದ್ದು, ಈ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ. ಆದರೆ ಪ್ರತಿ ವರ್ಷದಂತೆ ದತ್ತಪೀಠದ ಗುಹೆಯ ಬಳಿ ಹೇಗೆ ಹೋಮ ಹವನಗಳು ನಡೆಯುತ್ತಿದ್ದವು ಅದೇ ರೀತಿ ಮುಂದುವರಿಸಲು ಅನುಮತಿ ನೀಡಲಾಗಿದೆ ಎಂದು ಮೀನಾ ನಾಗರಾಜ್ ಹೇಳಿದರು.

————-

*ಡಿಸೆಂಬರ್ 13 ಹಾಗು 14 ರಂದು ಲಿಕ್ಕರ್ ಬ್ಯಾನ್*

ದತ್ತ ಜಯಂತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಡಿಸೆಂಬರ್ 13ರ ಬೆಳಿಗ್ಗೆ 6 ಗಂಟೆಯಿಂದ ಡಿ. 15ರ ಬೆಳಗ್ಗೆ 6 ಗಂಟೆಯ ಒಳಗೆ ಜಿಲ್ಲೆಯಾದ್ಯಂತ ಮಧ್ಯಪಾನ ನಿಷೇಧ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ. ಅಕ್ರಮವಾಗಿ ಎಲ್ಲಾದರೂ ಮಧ್ಯಪಾನ ಮಾರಾಟ ಹಾಗೂ ಸಾಗಾಟ ಕಂಡು ಬಂದರೆ ಅಂತವರ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಬಾರ್ ಮಾಲೀಕರ ಸಂಘ ಮೂರು ದಿನಗಳ ಕಾಲ ಮಧ್ಯಪಾನ ನಿಷೇಧಿಸಿದರೆ ನಷ್ಟ ಹಾಗೂ ಸಮಸ್ಯೆ ಉಂಟಾಗುವ ಬಗ್ಗೆ ಹೇಳಿಕೊಂಡಿದ್ದಾರೆ. ಪರಿಣಾಮ ಮನವಿ ಮೇರೆಗೆ ಎರಡು ದಿನಗಳ ಕಾಲ ಲಿಕ್ಕರ್ ಬ್ಯಾಂಕ್ ಮಾಡಲಾಗಿದೆ ಎಂದು ಹೇಳಿದರು.

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...