Home Political News ಪ್ರತಿಪಕ್ಷವಾಗಿ ಎಡವಿದ್ಯಾ ಬಿಜೆಪಿ : ಹೋರಾಟ ರೂಪಿಸುವಲ್ಲಿ ವಿಫಲ
Political News

ಪ್ರತಿಪಕ್ಷವಾಗಿ ಎಡವಿದ್ಯಾ ಬಿಜೆಪಿ : ಹೋರಾಟ ರೂಪಿಸುವಲ್ಲಿ ವಿಫಲ

Share
Share

ಚಿಕ್ಕಮಗಳೂರು : ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಕಥೆವ್ಯಥೆ ಎಲ್ಲರಿಗೂ ಗೊತ್ತು ಮನೆಯೊಂದು ಮೂರು ಬಾಗಿಲು ಆಗಿದೆ ಆದರೆ ಚಿಕ್ಕಮಗಳೂರು ಬಿಜೆಪಿಯಲ್ಲಿ‌ ಅಂತಹ ಪರಿಸ್ಥಿತಿ ಇಲ್ಲ ಆದರೂ ವಿರೋಧ ಪಕ್ಷವಾಗಿ ಒಗ್ಗಟ್ಟಿನ ಪ್ರದರ್ಶನ ಕಾಣುತ್ತಿಲ್ಲ ಎಂದು ಕಾರ್ಯಕರ್ತರು ಗೊಣಗುತ್ತಾ ತಿರುಗುವುದು ಎಲ್ಲರಿಗೂ ಗೊತ್ತು.

ಚಿಕ್ಕಮಗಳೂರು ಜಿಲ್ಲಾ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ದೇವರಾಜ್‌ ಶೆಟ್ಟಿ ಅತ್ಯಂತ ಚುರುಕಾಗಿ ಓಡಾಟ ಮಾಡುತ್ತಿದ್ದಾರೆ ಪಕ್ಷ ಕಟ್ಟಬೇಕೆಂಬ ಹಂಬಲ ,ಆಸೆ ಇದೆ ಆದರೆ ಆಡಳಿತ ಪಕ್ಷದ ವಿರುದ್ಧ ಹೋರಾಟ ರೂಪಿಸುವಲ್ಲಿ ಎಡುವುತ್ತಿದ್ದಾರೆ ಎಂದು ಬಿಜೆಪಿಯ ಕಾರ್ಯಕರ್ತರು ಮುಖಂಡರು ಹೇಳಿಕೊಂಡು ಓಡಾಡುತ್ತಿರೋದು ಸುಳ್ಳೇನಲ್ಲಾ

ವಿಧಾನ ಪರಿಷತ್ ಉಪ ಸಭಾಪತಿ ಪ್ರಾಣೇಶ್ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ ಅವರಿಗೆ ಇತಿ ಮಿತಿ ಇದೆ ಆದರೆ ಬೆಂಕಿ ಚೆಂಡು ಸಿ,ಟಿ, ರವಿ ಜಿಲ್ಲೆಯಲ್ಲಿ ಸೈಲೆಂಟ್ ರಾಜ್ಯದಲ್ಲಿ ವೈಲೆಂಟ್ ಆಗಿದ್ದಾರೆ ಎಂದರೆ ರಾಜ್ಯ ನಾಯಕ ಎನ್ನಿಸಿಕೊಳ್ಳಬೇಕೆಂಬ ಆಸೆ ಇರಬಹುದು. ಖಾಸಗಿಯಾಗಿ ಸಿಕ್ಕಾಗ ಇನ್ನೂ ಎರಡು ವರ್ಷ ಜಿಲ್ಲೆಯಲ್ಲಿ ಮಾತನಾಡುವುದಿಲ್ಲ ಏಕೆಂದರೆ ಸೋತು ಹತಾಶರಾಗಿದ್ದಾರೆ ಎನ್ನುತ್ತಾರೆಂದೆ ಜಾರಿಕೊಳ್ಳುತ್ತಿದ್ದಾರೆ.

ವಿಧಾನ ಸಭಾ ಚುನಾವಣೆಯಲ್ಲಿ ಐದು ಕ್ಷೇತ್ರದಲ್ಲಿ ಪರಾಭವ ಗೊಂಡಿರುವ ಬಿಜೆಪಿ ಕಾದು ನೋಡುವಾ ತಂತ್ರದಲ್ಲಿ ಇರಬಹುದು. ವಿಧಾನ ಸಭಾ ಚುನಾವಣೆಯಲ್ಲಿ ಸೋತರು ಲೋಕಸಭಾ ಚುನಾವಣೆಯಲ್ಲಿ ಫೀನಿಕ್ಸ್ ನಂತೆ ಐದು ಕ್ಷೇತ್ರದಲ್ಲಿ ಮೇಲುಗೈ ಸಾಧಿಸಿರುವ ಬಿಜೆಪಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಪರಿಣಾಮಕಾರಿ ಹೋರಾಟ ರೂಪಿಸಿಲ್ಲ ಎಂಬ ದೂರಿದೆ.

ಬಿಜೆಪಿ ಜಿಲ್ಲಾ ಅಧ್ಯಕ್ಷರು ನೀಟಾಗಿ ಡ್ರೆಸ್ ಮಾಡಿಕೊಂಡು ನಗು,ನಗುತ್ತಾ ಎಲ್ಲರಿಗೂ ಮಾತನಾಡಿಸುವ ಕಲೆಗಾರಿಕೆ ಇದ್ದರು ಪಕ್ಷ ಸರಿಯಾದ ಹೋರಾಟ ಮಾಡುತ್ತಿಲ್ಲ ಎಂದು ಕಾರ್ಯಕರ್ತರು ಗೊಣಗುತ್ತಾ ಇರುವುದು ಗುಟ್ಟಾಗಿ ಉಳಿದಿಲ್ಲ, ಕಾಂಗ್ರೆಸ್ ನವರು ಅಭಿವೃದ್ಧಿ ಕೆಲಸವಿರಲಿ ಸಾಮಾನ್ಯ ಕೆಲಸವನ್ನು ಮಾಡದಿರುವ ಸಂದರ್ಭದಲ್ಲಿ ಬಿಜೆಪಿಯ ಮೌನ ರಹದಾರಿ ಮಾಡಿದಂತೆ ಆಗಿದೆ ಎಂದು ಅಸಮಾಧಾನ ಇರುವುದು ಮಾತ್ರ ನಿಜ.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...