Home Political News ವಯನಾಡ್ ಸಂತ್ರಸ್ತರಿಗೆ ಮನೆ ಕಟ್ಟೋಡು ಗುಲಾಮಗಿರಿತನ : ಸಿ.ಟಿ ರವಿ
Political News

ವಯನಾಡ್ ಸಂತ್ರಸ್ತರಿಗೆ ಮನೆ ಕಟ್ಟೋಡು ಗುಲಾಮಗಿರಿತನ : ಸಿ.ಟಿ ರವಿ

Share
Share

ಚಿಕ್ಕಮಗಳೂರು : ವಯನಾಡ್ ಸಂತ್ರಸ್ತರಿಗೆ ಮನೆ ಕಟ್ಟಿಸಿ ಕೊಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆ ರಾಜಕೀಯ ಗುಲಾಮಗಿರಿಯ ಸಂಕೇತ ಎಂದು ಮಾಜಿ ಸಚಿವ ಸಿ.ಟಿ. ರವಿ ಸಿಎಂ ಸಿದ್ದು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರು ನಗರದ ಬೋಳರಾಮೇಶ್ವರ ದೇಗುಲದ ಬಳಿ ದತ್ತಜಯಂತಿಯ ಮೊದಲ ದಿನದ ಅನುಸೂಯ ಜಯಂತಿ ಕಾರ್ಯಕ್ರಮದ ಬಳಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇರಳದ ವಯನಾಡಿನಲ್ಲಿ 100 ಮನೆ ಕಟ್ಟಿಸಿ ಕೊಡುತ್ತವೆ ಎಂದು ಪತ್ರ ಬರೆದಿರುವುದಕ್ಕೆಕಿಡಿಕಾರಿದ್ದು,

ಇದು ರಾಜಕೀಯ ಗುಲಾಮಗಿರಿಯ ಸಂಕೇತ ಎಂದು ಮಾತಿನಲ್ಲಿ ತಿವಿದಿದ್ದಾರೆ. ಇಡೀ ಅಖಂಡ ಭಾರತ ಒಂದು. ಇಡೀ ವಿಶ್ವವೇ ಒಂದು ಮನೆ ಎಂಬ ಉದಾತ್ತ ಮನೋಭಾವನೆ ವಾರಸ್ಥಾರರು ನಾವು. ಅಕ್ಕಪಕ್ಕದವರಿಗೆ ಸಹಾಯ ಮಾಡುವುದು ತಪ್ಪಲ್ಲ. ಆದರೆ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಪ್ರತಿನಿಧಿಸುವ ಕ್ಷೇತ್ರ ಎಂದು ಜಿಲ್ಲೆಗೆ ಮಾತ್ರ ಈ ರೀತಿ ಹೇಳುವುದು ರಾಜಕೀಯ ಗುಲಾಮಗಿರಿಯ ಸಂಕೇತ ಹಾಗೂ ಪ್ರತಿಕ ಎಂದಿದ್ದಾರೆ. ಇಲ್ಲಿಯ ರೈತರಿಗೆ ಸೂಕ್ತ ಪರಿಹಾರ ನೀಡಿಲ್ಲ. ಇಲ್ಲಿಯ ಸಂತ್ರಸ್ತರು ಬೀದಿಯಲ್ಲಿ ಇದ್ದಾರೆ. ಇಲ್ಲಿಯವರನ್ನು ಬಿಟ್ಟು ಅಲ್ಲಿಯವರಿಗೆ ಸಹಾಯ ಮಾಡುವುದು ರಾಜಕೀಯದ ಗುಲಾಮಗಿರಿ ಎಂದಿದ್ದಾರೆ.‌ ಕನ್ನಡಿಗರ ಕಷ್ಟಕ್ಕೆ ಸ್ಪಂದಿಸದೆ ಕನ್ನಡಿಗರ ತೆರಿಗೆ ಹಣವನ್ನು ಅಲ್ಲಿ ವಿನಿಯೋಗಿಸುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿ, ರಾಜ್ಯದ ಜನರ ಸಂಕಷ್ಟಗಳನ್ನ ಕಡೆಗಣಿಸಿ ಖರ್ಚು ಮಾಡುವುದು ಸೂಕ್ತವಲ್ಲದ ನಡವಳಿಕೆ ಎಂದಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...