Home Political News ವಯನಾಡ್ ಸಂತ್ರಸ್ತರಿಗೆ ಮನೆ ಕಟ್ಟೋಡು ಗುಲಾಮಗಿರಿತನ : ಸಿ.ಟಿ ರವಿ
Political News

ವಯನಾಡ್ ಸಂತ್ರಸ್ತರಿಗೆ ಮನೆ ಕಟ್ಟೋಡು ಗುಲಾಮಗಿರಿತನ : ಸಿ.ಟಿ ರವಿ

Share
Share

ಚಿಕ್ಕಮಗಳೂರು : ವಯನಾಡ್ ಸಂತ್ರಸ್ತರಿಗೆ ಮನೆ ಕಟ್ಟಿಸಿ ಕೊಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆ ರಾಜಕೀಯ ಗುಲಾಮಗಿರಿಯ ಸಂಕೇತ ಎಂದು ಮಾಜಿ ಸಚಿವ ಸಿ.ಟಿ. ರವಿ ಸಿಎಂ ಸಿದ್ದು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರು ನಗರದ ಬೋಳರಾಮೇಶ್ವರ ದೇಗುಲದ ಬಳಿ ದತ್ತಜಯಂತಿಯ ಮೊದಲ ದಿನದ ಅನುಸೂಯ ಜಯಂತಿ ಕಾರ್ಯಕ್ರಮದ ಬಳಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇರಳದ ವಯನಾಡಿನಲ್ಲಿ 100 ಮನೆ ಕಟ್ಟಿಸಿ ಕೊಡುತ್ತವೆ ಎಂದು ಪತ್ರ ಬರೆದಿರುವುದಕ್ಕೆಕಿಡಿಕಾರಿದ್ದು,

ಇದು ರಾಜಕೀಯ ಗುಲಾಮಗಿರಿಯ ಸಂಕೇತ ಎಂದು ಮಾತಿನಲ್ಲಿ ತಿವಿದಿದ್ದಾರೆ. ಇಡೀ ಅಖಂಡ ಭಾರತ ಒಂದು. ಇಡೀ ವಿಶ್ವವೇ ಒಂದು ಮನೆ ಎಂಬ ಉದಾತ್ತ ಮನೋಭಾವನೆ ವಾರಸ್ಥಾರರು ನಾವು. ಅಕ್ಕಪಕ್ಕದವರಿಗೆ ಸಹಾಯ ಮಾಡುವುದು ತಪ್ಪಲ್ಲ. ಆದರೆ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಪ್ರತಿನಿಧಿಸುವ ಕ್ಷೇತ್ರ ಎಂದು ಜಿಲ್ಲೆಗೆ ಮಾತ್ರ ಈ ರೀತಿ ಹೇಳುವುದು ರಾಜಕೀಯ ಗುಲಾಮಗಿರಿಯ ಸಂಕೇತ ಹಾಗೂ ಪ್ರತಿಕ ಎಂದಿದ್ದಾರೆ. ಇಲ್ಲಿಯ ರೈತರಿಗೆ ಸೂಕ್ತ ಪರಿಹಾರ ನೀಡಿಲ್ಲ. ಇಲ್ಲಿಯ ಸಂತ್ರಸ್ತರು ಬೀದಿಯಲ್ಲಿ ಇದ್ದಾರೆ. ಇಲ್ಲಿಯವರನ್ನು ಬಿಟ್ಟು ಅಲ್ಲಿಯವರಿಗೆ ಸಹಾಯ ಮಾಡುವುದು ರಾಜಕೀಯದ ಗುಲಾಮಗಿರಿ ಎಂದಿದ್ದಾರೆ.‌ ಕನ್ನಡಿಗರ ಕಷ್ಟಕ್ಕೆ ಸ್ಪಂದಿಸದೆ ಕನ್ನಡಿಗರ ತೆರಿಗೆ ಹಣವನ್ನು ಅಲ್ಲಿ ವಿನಿಯೋಗಿಸುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿ, ರಾಜ್ಯದ ಜನರ ಸಂಕಷ್ಟಗಳನ್ನ ಕಡೆಗಣಿಸಿ ಖರ್ಚು ಮಾಡುವುದು ಸೂಕ್ತವಲ್ಲದ ನಡವಳಿಕೆ ಎಂದಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್...