Home Latest News ಬಿರುಗಾಳಿ ಮಳೆಗೆ ದತ್ತಪೀಠ ಹೋಮದ ಶೆಟ್ ಚಾವಣೆ ಹಾರಿ ಹೋಗಿ ಅವಘಡ
Latest News

ಬಿರುಗಾಳಿ ಮಳೆಗೆ ದತ್ತಪೀಠ ಹೋಮದ ಶೆಟ್ ಚಾವಣೆ ಹಾರಿ ಹೋಗಿ ಅವಘಡ

Share
Share

ಚಿಕ್ಕಮಗಳೂರು : ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ಯಲ್ಲಿ ಗುರುವಾರದಿಂದ ಶನಿವಾರದವರೆಗೆ ನಡೆಯಲಿರುವ ದತ್ತ ಜಯಂತಿಗೆ ಹವಾಮಾನ ವೈಫರೀತ್ಯಾ ಭಾರೀ ಅಡ್ಡಿಮಾಡಿದೆ.

ಗುರುವಾರದಿಂದ ಗಿರೀಭಾಗದಲ್ಲಿ ದಟ್ಟ ಮಂಜು ಹಾಗೂ ಸಾಧಾರಣ ಮಳೆ ಆಗುತ್ತಿದ್ದು ಇದು ದತ್ತ ಜಯಂತಿ ಧಾರ್ಮಿಕ ಆಚರಣೆಗಳಿಗೆ ಅಡಚಣೆ ಮಾಡಿದೆ. ಶುಕ್ರವಾರ ಬಾಬಾಬುಡನ್ ದರ್ಗಾ ಹಾಗೂ ಸುತ್ತಮುತ್ತ ಭಾರಿ ಗಾಳಿ ಹಾಗೂ ಸಾಧಾರಣ ಮಳೆ ಆಗಿದ್ದು, ಗಾಳಿಗೆ ದತ್ತ ಪೀಠದಲ್ಲಿ ಪೂಜೆ ಹೋಮ ಹವನ ನಡೆಸಲು ಹಾಕಿದ್ದ ಶಾಮಿಯಾನ ಮತ್ತು ಶೀಟುಗಳು ಗಾಳಿಗೆ ಹಾರಿ ಹೋಗಿವೆ. ಜೊತೆಗೆ ಮೋಡ ಕವಿದ ವಾತಾವರಣ ಹಾಗೂ ಕೊರೆಯುವ ಚಳಿ ಮಳೆ ಪರಿಣಾಮ ಗಿರಿಯಲ್ಲಿ ಬಂದೋಬಸ್ತ್ ಗೆ ನಿಯೋಜನೆಗೊಂಡಿರುವ ಪೊಲೀಸರು ಹೋಮ್ ಗಾರ್ಡ್ ಗಳು ಮತ್ತಿತರರ ಬೇರೆ ಜಿಲ್ಲೆಗಳಿಂದ ಆಗಮಿಸಿರುವ ಪೊಲೀಸ್ ಸಿಬ್ಬಂದಿ ಕೆಲಸ ಮಾಡಲು ಪರದಾಡುತಿದ್ದಾರೆ.
ಗಿರಿಯಲ್ಲಿ ಭಾರೀ ಚಳಿ ಇದ್ದು ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು ನಡುಗುತ್ತಾ ಕೆಲಸ ಮಾಡುವಂತಾಗಿದ್ದು ಭಾರೀ ಚಳಿ ಕಾರಣ ಪೊಲೀಸ್ ಭದ್ರತಾ ಸಿಬ್ಬಂದಿ ಆರೋಗ್ಯದ ಮೇಲೂ ಗಂಭೀರ ಪರಿಣಾಮ ವುಂಟುಮಾಡುವ ಸಮಸ್ಯೆ ಎದುರಾಗಿದೆ.
ಅಲ್ಲದೆ, ಗಿರಿ ತಲುಪುವ ರಸ್ತೆಯಲ್ಲಿ ದಟ್ಟ ಮಂಜು ಆವರಿಸಿದ್ದು ವಾಹನಗಳ ಸಂಚಾರಕ್ಕೆ ತೊಂದರೆ ಆಗಿದ್ದು ಅಪಘಾತ ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಜೊತೆಗೆ ನಾಳೆ ಕೂಡ ದತ್ತ ಜಯಂತಿ ಕೊನೆ ದಿನವಾಗಿದೆ, ಮತ್ತಷ್ಟು ಮಳೆ ಸಾಧ್ಯತೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡದೆ

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...